Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಡಾನ್: ಹಸಿವಿನಿಂದ ಬಳಲಿ 60 ಮಕ್ಕಳು...

ಸುಡಾನ್: ಹಸಿವಿನಿಂದ ಬಳಲಿ 60 ಮಕ್ಕಳು ಮೃತ್ಯು, 2 ತಿಂಗಳಿಂದ ಅನಾಥಾಶ್ರಮದಲ್ಲಿದ್ದ ಶಿಶುಗಳು

1 Jun 2023 4:15 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸುಡಾನ್: ಹಸಿವಿನಿಂದ ಬಳಲಿ 60 ಮಕ್ಕಳು ಮೃತ್ಯು, 2 ತಿಂಗಳಿಂದ ಅನಾಥಾಶ್ರಮದಲ್ಲಿದ್ದ ಶಿಶುಗಳು

ಖಾರ್ಟಮ್: ಸುಡಾನ್ ನಲ್ಲಿ ಸೇನೆ ಮತ್ತು ಅರೆಸೇನಾ ಪಡೆಯ ನಡುವೆ ಕಳೆದ 2 ತಿಂಗಳಿಂದ ಮುಂದುವರಿದಿರುವ ಸಂಘರ್ಷದಿಂದಾಗಿ ಅನಾಥಾಶ್ರಮದಲ್ಲಿ ಕಳೆದ 6 ವಾರದಿಂದ ಅತಂತ್ರ ಸ್ಥಿತಿಯಲ್ಲಿದ್ದ ಶಿಶುಗಳ ಸಹಿತ 60 ಮಕ್ಕಳು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ರಾಜಧಾನಿ ಖಾರ್ಟಮ್ ನಲ್ಲಿರುವ ಅನಾಥಾಶ್ರಮದಲ್ಲಿ   ಕಳೆದ 6 ವಾರಗಳಿಂದ ಈ ಮಕ್ಕಳು ನೆಲೆಸಿದ್ದರು. ಸಂಘರ್ಷ ತೀವ್ರಗೊಂಡ ಬಳಿಕ  ಆಹಾರ ಲಭಿಸದೆ ಹಾಗೂ ಕೆಲ ದಿನಗಳಿಂದ ತೀವ್ರ ಜ್ವರದ ಕಾರಣ ಮಕ್ಕಳು ಸಾವನ್ನಪ್ಪಿದ್ದಾರೆ. ಕಳೆದ ವಾರಾಂತ್ಯದಲ್ಲಿ 2 ದಿನದ ಅಂತರದಲ್ಲಿ 26 ಮಕ್ಕಳು ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಮೂರು ತಿಂಗಳ ಶಿಶುಗಳೂ ಸೇರಿವೆ. ಸರಿಯಾದ ಆಹಾರ ಮತ್ತು ಆರೋಗ್ಯ ಸೇವೆ ಲಭಿಸದೆ ಈ ಸಾವು ಸಂಭವಿಸಿದೆ ಎಂದು ಅನಾಥಾಶ್ರಮದ ಸಿಬಂದಿಗಳನ್ನು  ಉಲ್ಲೇಖಿಸಿ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಖಾರ್ಟಮ್ ನ ಅಲ್-ಮೆಖೊಮ ಅನಾಥಾಲಯದಲ್ಲಿ ಬಿಳಿಯ ಬಟ್ಟೆಯಲ್ಲಿ ಸುತ್ತಿಡಲಾದ ಮಕ್ಕಳ ಮೃತದೇಹಗಳ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಮತ್ತೊಂದು ವೀಡಿಯೊದಲ್ಲಿ ಹತ್ತಕ್ಕೂ ಹೆಚ್ಚು ಎಳೆಯ ಶಿಶುಗಳು ಕೋಣೆಯ ನೆಲದ ಮೇಲೆ ಕುಳಿತು ಹಸಿವಿನಿಂದ ಅಳುತ್ತಿರುವುದು, ಅಲ್ಲಿರುವ ಮಹಿಳೆ ಎರಡು ಜಗ್ಗಳಿಂದ ಶಿಶುಗಳಿಗೆ ನೀರು ಕುಡಿಸುತ್ತಿರುವ ದೃಶ್ಯವಿದೆ.

`ಇದೊಂದು ದುರಂತರ ಪರಿಸ್ಥಿತಿಯಾಗಿದೆ. ಕಳೆದ ವಾರ ಈ ಪ್ರದೇಶದಲ್ಲಿ ನಡೆದ ಭೀಕರ ಶೆಲ್ ದಾಳಿಯಿಂದ ಅನಾಥಾಶ್ರಮಕ್ಕೂ ಹಾನಿಯಾಗಿದ್ದು ಈ ಪ್ರದೇಶವಿಡೀ ದೂಳಿನಿಂದ ಮುಳುಗಿತ್ತು. ಪರಿಸರ ಮಾಲಿನ್ಯದಿಂದಾಗಿ ಎಳೆಯ ಮಕ್ಕಳು ತೀವ್ರ ಅಸ್ವಸ್ಥಗೊಂಡಿದ್ದು ಅವರನ್ನು ಮತ್ತೊಂದು ಕೋಣೆಗೆ ಸ್ಥಳಾಂತರಿಸಲಾಗಿದೆ. ಈ ಪರಿಸ್ಥಿತಿ ಬರಲಿದೆ ಎಂದು ಯುದ್ಧದ ಮೊದಲ ದಿನವೇ ನಿರೀಕ್ಷಿಸಿದ್ದೆವು. ಆದರೆ ಆಹಾರ, ನೀರು ಮತ್ತು ಔಷಧದ ಕೊರತೆಯಾಗಬಹುದು ಎಂದು ನಿರೀಕ್ಷಿಸಿರಲಿಲ್ಲ. ಅಂತರಾಷ್ಟ್ರೀಯ ನೆರವನ್ನು ಒದಗಿಸಲೂ ಸಾಧ್ಯವಾಗದ ಪರಿಸ್ಥಿತಿ ಇಲ್ಲಿದೆ' ಎಂದು ಅನಾಥಾಲಯದ ಸಿಬಂದಿ ಉಮರ್ ಮುಸ್ತಾಫಾ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಅನಾಥಾಶ್ರಮದ ವೀಡಿಯೊ ವೈರಲ್ ಆದ ಬಳಿಕ ಮೇ 28ರಂದು  ಸ್ಥಳೀಯ ಚಾರಿಟಿ ಸಂಸ್ಥೆಯೊಂದು ಯುನಿಸೆಫ್, ರೆಡ್‌ ಕ್ರಾಸ್‌ನ ನೆರವಿನಿಂದ ಆಹಾರ, ಮಕ್ಕಳಿಗೆ ಅಗತ್ಯವಿರುವ ವಸ್ತುಗಳು ಹಾಗೂ ಔಷಧಗಳನ್ನು ಪೂರೈಸಲು ಶಕ್ತವಾಗಿದೆ ಎಂದು ವರದಿ ಹೇಳಿದೆ.

ಆಹಾರ ಮತ್ತು ಔಷಧ ಪೂರೈಕೆ ಸಮಸ್ಯೆಯಾಗಿರುವುದರಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಶಿಶುಗಳು ಸಾವನ್ನಪ್ಪುವ ಸಾಧ್ಯತೆಯಿದೆ. ಆದ್ದರಿಂದ ಖಾರ್ಟಮ್ ಅನಾಥಾಶ್ರಮದಿಂದ ಮಕ್ಕಳನ್ನು ಕ್ಷಿಪ್ರವಾಗಿ ಸ್ಥಳಾಂತರಿಸುವಂತೆ ಅನಾಥಾಶ್ರಮದ ಸಿಬಂದಿಗಳು ಆಗ್ರಹಿಸಿದ್ದಾರೆ. ಸುಡಾನ್ನಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ದೇಶದಾದ್ಯಂತ ಅರಾಜಕತೆ ನೆಲೆಸಿದ್ದು ಮನೆಗಳು, ನಾಗರಿಕ ಮೂಲಸೌಕರ್ಯಗಳಿಗೆ ಹಾನಿಯಾಗಿದೆ. ಸುಮಾರು 190 ಮಕ್ಕಳ ಸಹಿತ 860ಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದು ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಸುಮಾರು 1.65 ದಶಲಕ್ಷ ಜನತೆ ದೇಶದಿಂದ ಪಲಾಯನ ಮಾಡಿದ್ದು ಅಂತರಾಷ್ಟ್ರೀಯ ನೆರವನ್ನು ಒದಗಿಸಲೂ ಸಾಧ್ಯವಿಲ್ಲದ ಪರಿಸ್ಥಿತಿಯಿದೆ. ಸುಡಾನ್ನಲ್ಲಿ 13.6 ದಶಲಕ್ಷಕ್ಕೂ ಅಧಿಕ ಮಕ್ಕಳಿಗೆ  ತುರ್ತು ಮಾನವೀಯ ನೆರವಿನ ಅಗತ್ಯವಿದೆ ಎಂದು ಯುನಿಸೆಫ್ ವರದಿ ಮಾಡಿದೆ.

ಸುಡಾನ್ ಸೇನಾ ಮುಖ್ಯಸ್ಥರ ಆಗ್ರಹಕ್ಕೆ ವಿಶ್ವಸಂಸ್ಥೆ ನಕಾರ

ಸುಡಾನ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶ್ವಸಂಸ್ಥೆಯ ವಿಶೇಷ ಪ್ರತಿನಿಧಿ ವೋಕರ್ ಪರ್ಥೆಸ್ರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು ಎಂಬ ಸುಡಾನ್ ಸೇನಾ ಮುಖ್ಯಸ್ಥರ ಆಗ್ರಹವನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟೆರಸ್ ಬುಧವಾರ ತಳ್ಳಿಹಾಕಿದ್ದಾರೆ.

ಯುದ್ಧದಿಂದ ಜರ್ಝರಿತಗೊಂಡಿರುವ ಸುಡಾನ್ ನಲ್ಲಿ ವಿಶ್ವಸಂಸ್ಥೆಯ ಕಾರ್ಯಾಚರಣೆಯ ಭವಿಷ್ಯವನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿ ನಿರ್ಧರಿಸಲಿದೆ  ಎಂದವರು ಇದೇ ಸಂದರ್ಭ ಸ್ಪಷ್ಟಪಡಿಸಿದ್ದಾರೆ. ಸುಡಾನ್ನಲ್ಲಿ ವಿಶ್ವಸಂಸ್ಥೆಯ ವಿಶೇಷ ಪ್ರತಿನಿಧಿ, ಸುಡಾನ್ ನಲ್ಲಿ ವಿಶ್ವಸಂಸ್ಥೆಯ ಸಮಗ್ರ ಪರಿವರ್ತನೆ ನೆರವು ಕಾರ್ಯಕ್ರಮದ ಮುಖ್ಯಸ್ಥರಾಗಿರುವ ವೋಕರ್ ಪರ್ಥೆಸ್ ಪಕ್ಷಪಾತದಿಂದ ವರ್ತಿಸುತ್ತಿರುವ ಕಾರಣ ಅವರನ್ನು ತಕ್ಷಣ ವಾಪಾಸು ಕರೆಸಿಕೊಳ್ಳಬೇಕೆಂದು ಸುಡಾನ್ ಸೇನಾ ಮುಖ್ಯಸ್ಥ ಅಬ್ದುಲ್ ಬರ್ಹಾನ್ ಆಗ್ರಹಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಗುಟೆರಸ್ `ಸುಡಾನ್ ವಿಷಯಕ್ಕೆ ಸಂಬಂಧಿಸಿ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಹಾಗೂ ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ತನ್ನದೇ ಆದ ಹೊಣೆಗಾರಿಕೆಯಿದೆ. ನಮ್ಮ ಜವಾಬ್ದಾರಿಯನ್ನು ನಿರ್ವಹಿಸಿದ್ದೇವೆ. ಸುಡಾನ್ ನಲ್ಲಿನ ನಿಯೋಗದ ಕಾರ್ಯಾಚರಣೆಯನ್ನು ಮತ್ತೊಂದು ಅವಧಿಗೆ ಮುಂದುವರಿಸಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸುವುದು ಭದ್ರತಾ ಮಂಡಳಿಯ ಜವಾಬ್ದಾರಿಯಾಗಿದೆ' ಎಂದಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X