ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ: ಗ್ಯಾರಂಟಿ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ಟ್ವೀಟ್
''ನಳಿನ್ ಕುಮಾರ್ ಕಟೀಲ್, ಬೊಮ್ಮಾಯಿ ಮನೆಯವರಿಗೂ 2000 ಫ್ರೀ''

ಬೆಂಗಳೂರು: ಜೂನ್ 2: ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ 5 ಗ್ಯಾರಂಟಿ ಯೋಜನೆಗಳನ್ನು ಸಹ ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.
ಇದರ ಬೆನ್ನಲ್ಲೇ ಮಾಜಿ ಸಿಎಂ ಬೊಮ್ಮಾಯಿ ಸೇರಿ ವಿಪಕ್ಷ ಬಿಜೆಪಿ ನಾಯಕರನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ರಾಜ್ಯ ಸರಕಾರದ ಉಚಿತ ಯೋಜನೆಗಳು ಎಲ್ಲರಿಗೂ ತಲುಪಲಿದೆ ಎಂದು ತಿಳಿಸಿದೆ.
''ನಳಿನ್ ಕುಮಾರ್ ಕಟೀಲ್ ಅವರೇ, ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ!, ಬೊಮ್ಮಾಯಿ ಅವರೇ, ನಿಮ್ಮ ಮನೆಗೂ ಫ್ರೀ!, ಶೋಭಾ ಅವರೇ, ನಿಮಗೂ ಪ್ರಯಾಣ ಫ್ರೀ! ಸಿಟಿ ರವಿ ಅವರೇ, ನಿಮ್ಮ ಮನೆಯವರಿಗೂ ₹2000 ಫ್ರೀ'' ಎಂದು ಕಾಂಗ್ರೆಸ್ ಕುಟುಕಿದೆ.
''ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ)! ಇದು ನಮ್ಮ ಗ್ಯಾರಂಟಿ. ನಾವು ನುಡಿದಂತೆ ನಡೆಯುವವರು, ನಾವು ಮಾತು ಉಳಿಸಿಕೊಳ್ಳುವವರು. ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ. ಇದು ನಮ್ಮ ಬದ್ಧತೆ ಎಂದು ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
,@nalinkateel ಅವರೇ,
— Karnataka Congress (@INCKarnataka) June 2, 2023
ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ!@BSBommai ಅವರೇ, ನಿಮ್ಮ ಮನೆಗೂ ಫ್ರೀ!@ShobhaBJP ಅವರೇ, ನಿಮಗೂ ಪ್ರಯಾಣ ಫ್ರೀ!@CTRavi_BJP ಅವರೇ, ನಿಮ್ಮ ಮನೆಯವರಿಗೂ ₹2000 ಫ್ರೀ!
ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ)!
ಇದು ನಮ್ಮ ಗ್ಯಾರಂಟಿ.