Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶಿವರಾಮಕಾರಂತ ಬಡಾವಣೆಗಾಗಿ ವಕ್ಫ್ ಭೂಮಿ...

ಶಿವರಾಮಕಾರಂತ ಬಡಾವಣೆಗಾಗಿ ವಕ್ಫ್ ಭೂಮಿ ಸ್ವಾಧೀನ | ಭೂ ಪರಿಹಾರ ಅಥವಾ ಪರ್ಯಾಯ ಜಮೀನು ನೀಡಲು ಶಾಫಿ ಸಅದಿ ಮನವಿ

2 Jun 2023 4:53 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಶಿವರಾಮಕಾರಂತ ಬಡಾವಣೆಗಾಗಿ ವಕ್ಫ್ ಭೂಮಿ ಸ್ವಾಧೀನ | ಭೂ ಪರಿಹಾರ ಅಥವಾ ಪರ್ಯಾಯ ಜಮೀನು ನೀಡಲು ಶಾಫಿ ಸಅದಿ ಮನವಿ

ಬೆಂಗಳೂರು, ಜೂ.2: ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ಉತ್ತರ ಅಪರ ಯಲಹಂಕ ತಾಲೂಕಿನ ಮೇಡಿ ಅಗ್ರಹಾರ ಗ್ರಾಮದ ವಿವಿಧ ಸರ್ವೆ ನಂಬರ್‍ಗಳಲ್ಲಿ 229 ಎಕರೆ 29 ಗುಂಟೆ ಜಮೀನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಡಾ.ಕೆ.ಶಿವರಾಮ ಕಾರಂತ ಬಡಾವಣೆಗಾಗಿ ಸ್ವಾಧೀನವಾಗಿದೆ ಎಂದು ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ತಿಳಿಸಿದ್ದಾರೆ.

ಈ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡಗೆ ಪತ್ರ ಬರೆದಿರುವ ಅವರು, ಭೂ ಸ್ವಾಧೀನಾಧಿಕಾರಿಗಳು ಸಂಪೂರ್ಣ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ವಕ್ಫ್ ಸಂಸ್ಥೆಯಾದ ನಗರದ ಕಬ್ಬನ್‍ಪೇಟೆ ಮುಖ್ಯರಸ್ತೆಯಲ್ಲಿರುವ ಹಝ್ರತ್ ಹಮೀದ್ ಶಾ ಮತ್ತು ಹಝ್ರತ್ ಮುಹೀಬ್ ಷಾ ಖಾದ್ರಿ ದರ್ಗಾ ಮತ್ತು ರಾಜ್ಯ ವಕ್ಫ್ ಮಂಡಳಿಯೊಂದಿಗೆ ಸಮಾಲೋಚಿಸದೆ ಭೂ ಸ್ವಾಧೀನ ಪ್ರಕ್ರಿಯೆ ಕೈಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಮೇಡಿ ಅಗ್ರಹಾರ ಗ್ರಾಮದ ಸಂಪೂರ್ಣ ವಿಸ್ತೀರ್ಣ 358 ಎಕರೆ 11 ಗುಂಟೆ ಜಮೀನು ಹಝ್ರತ್ ಹಮೀದ್ ಶಾ ದರ್ಗಾಗೆ ಸೇರಿದ ಮುಸ್ಲಿಂ ಮುಜುರಾಯಿ ದೇವಾಲಯದ ಇನಾಂತಿ ಜಮೀನಾಗಿದೆ. 1973ರಲ್ಲಿ ರಾಜ್ಯ ಸರಕಾರದ ಆದೇಶದಂತೆ ಮುಸ್ಲಿಂ ಮುಜುರಾಯಿ ಸ್ವತ್ತುಗಳನ್ನು ರಾಜ್ಯ ವಕ್ಫ್ ಮಂಡಳಿಗೆ ಹಸ್ತಾಂತರಿಸಲು ಸೂಚಿಸಲಾಗಿದೆ ಎಂದು ಶಾಫಿ ಸಅದಿ ಹೇಳಿದ್ದಾರೆ.

ಈ ಆದೇಶದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಕಾರ್ಯದರ್ಶಿ ಹಾಗೂ ಆಯುಕ್ತರು ರಾಜ್ಯದ ಎಂಡೋಮೆಂಟ್ಸ್ ಆಯುಕ್ತರಿಗೆ 1974ರಲ್ಲಿ ಪತ್ರ ಬರೆದು ರಾಜ್ಯದ 456 ವಕ್ಫ್ ಸಂಸ್ಥೆಗಳ ಚರ, ಸ್ಥಿರ ಆಸ್ತಿಗಳು ಹಾಗೂ ಆಭರಣ ಇತ್ಯಾದಿಗಳ ಸಮೇತ ರಾಜ್ಯ ವಕ್ಫ್ ಮಂಡಳಿಗೆ ಹಸ್ತಾಂತರಿಸಲು ಸೂಚಿಸಿದ್ದಾರೆ ಅವರು ತಿಳಿಸಿದ್ದಾರೆ. 

ಈ ಆದೇಶದಂತೆ ತಹಶೀಲ್ದಾರರು ರಾಜ್ಯ ವಕ್ಫ್ ಮಂಡಳಿಗೆ ಕೇವಲ 11 ಎಕರೆ ಜಮೀನು ಇತರರ ಅನಧಿಕೃತ ಸ್ವಾಧೀನದಲ್ಲಿರುವುದನ್ನು ಹಸ್ತಾಂತರಿಸಿದ್ದಾರೆ. ಉಳಿದ ಎಲ್ಲ ಜಮೀನು ಹಸ್ತಾಂತರಿಸುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ವಕ್ಫ್ ಮಂಡಳಿ ಸತತವಾಗಿ ಪತ್ರ ವ್ಯವಹಾರ ಮಾಡಿದೆ. 2018ರಲ್ಲಿ ವಕ್ಫ್ ನ್ಯಾಯಾಧೀಕರಣವು ಮೇಡಿ ಅಗ್ರಹಾರ ಗ್ರಾಮಕ್ಕೆ ಸೇರಿದ 358 ಎಕರೆ 11 ಗುಂಟೆ ಜಮೀನು ಹಝ್ರತ್ ಹಮೀದ್ ಶಾ ದರ್ಗಾಕ್ಕೆ ಸೇರಿದ ವಕ್ಫ್ ಆಸ್ತಿ ಎಂದು ತೀರ್ಪು ನೀಡಿದೆ ಎಂದು ಅವರು ಹೇಳಿದ್ದಾರೆ.

ಈ ಆದೇಶದ ಅನ್ವಯ ಯಲಹಂಕ ತಹಶೀಲ್ದಾರ್ ಗೆ ಪಹಣಿಯಲ್ಲಿ ವಕ್ಫ್ ಸಂಸ್ಥೆಯ ಹೆಸರು ದಾಖಲಿಸಲು ಪ್ರಸ್ತಾಪ ಮಾಡಲಾಗಿದ್ದು, ಮ್ಯೂಟೇಷನ್ ಅನುಮೋದನೆಗೆ ಬಾಕಿ ಇದೆ. ಕೇಂದ್ರ ಸರಕಾರದ ಭೂ ಸ್ವಾಧೀನ ಕಾಯ್ದೆ ಅಡಿಯಲ್ಲಿ ಸಾರ್ವಜನಿಕ ಉದ್ದೇಶಕ್ಕೆ ಭೂ ಸ್ವಾಧೀನ ಪ್ರಕ್ರಿಯೆ ಪ್ರಾರಂಭಿಸುವ ಮುನ್ನ ಜಿಲ್ಲಾಧಿಕಾರಿ ವಕ್ಫ್ ಮಂಡಳಿಗೆ ತಿಳಿಸುವುದು ಅಗತ್ಯ. ವಕ್ಫ್ ಮಂಡಳಿಗೆ ಸಮಾಲೋಚಿಸದೆ ಮಾಡಿರುವ ಆದೇಶ ನಿರರ್ಥಕವಾಗುತ್ತದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಅಂತಿಮ ಅಧಿಸೂಚನೆಯಲ್ಲಿ ವಕ್ಫ್ ಸಂಸ್ಥೆ ಅಥವಾ ವಕ್ಫ್ ಮಂಡಳಿಗೆ ಯಾವುದೆ ಸೂಚನೆ ನೀಡದೆ ವಕ್ಫ್ ಆಸ್ತಿ ಭೂ ಸ್ವಾಧೀನಪಡಿಸಿರುವುದು ವಕ್ಫ್ ಕಾಯ್ದೆಯ ನಿಯಮಾವಳಿಗಳಿಗೆ ವ್ಯತಿರಿಕ್ತವಾಗಿದೆ. ಸಾರ್ವಜನಿಕ ಉದ್ದೇಶಕ್ಕೆ ಮಾಡಲಾಗಿರುವ ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಪರಿಹಾರದ ಹಕ್ಕು ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ, 2013ರಂತೆ ವಕ್ಫ್ ಕಾಯ್ದೆಯ ಕಲಂ 51ರ ನವಯ ಭೂ ಪರಿಹಾರ ಅಥವಾ ಪರ್ಯಾಯ ಜಮೀನು ವಕ್ಫ್ ಸಂಸ್ಥೆಗೆ ನೀಡಲು ವಿನಂತಿಸಲಾಗಿದೆ ಎಂದು ಶಾಫಿ ಸಅದಿ ತಿಳಿಸಿದ್ದಾರೆ. 

ಇದುವರೆವಿಗೂ ಈ ಬಗ್ಗೆ ಯಾವುದೆ ಕ್ರಮ ಜರುಗಿಸಿಲ್ಲ. ಈ ಕುರಿತು ಶೀಘ್ರದಲ್ಲಿ ಭೂ ಪರಿಹಾರ ಅಥವಾ ಪರ್ಯಾಯ ಜಮೀನು ನೀಡಲು ಸಂಬಂಧಪಟ್ಟ ಅಧೀಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಶಾಫಿ ಸಅದಿ ವಿನಂತಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X