Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪಿಎಫ್ ಖಾತೆಯಲ್ಲಿ 11 ಲಕ್ಷ ಕೋಟಿ ರೂ:...

ಪಿಎಫ್ ಖಾತೆಯಲ್ಲಿ 11 ಲಕ್ಷ ಕೋಟಿ ರೂ: ಸುಕುಮಾರ್‌

ಭವಿಷ್ಯನಿಧಿ ಪಿಂಚಣಿದಾರರ ಉಡುಪಿ ವಲಯ ಸಮಾವೇಶ ಉದ್ಘಾಟನೆ

3 Jun 2023 3:33 PM IST
share
ಪಿಎಫ್ ಖಾತೆಯಲ್ಲಿ 11 ಲಕ್ಷ ಕೋಟಿ ರೂ: ಸುಕುಮಾರ್‌
ಭವಿಷ್ಯನಿಧಿ ಪಿಂಚಣಿದಾರರ ಉಡುಪಿ ವಲಯ ಸಮಾವೇಶ ಉದ್ಘಾಟನೆ

ಉಡುಪಿ, ಜೂ.3: ಸದ್ಯ ಭವಿಷ್ಯ ನಿಧಿ ಖಾತೆಯಲ್ಲಿ ಐದು ಕೋಟಿ ಚಂದದಾರರ ಒಟ್ಟು 11 ಲಕ್ಷ ಕೋಟಿ ರೂ. ಇದೆ. ಇದು ರಾಜ್ಯದ ಬಜೆಟ್ ಮೊತ್ತಕ್ಕಿಂತ ನಾಲ್ಕು ಪಟ್ಟು ಜಾಸ್ತಿ. ಈ ಹಣಕ್ಕೆ ಪ್ರತಿವರ್ಷ 9 ಸಾವಿರ ರೂ. ಕೋಟಿ ಆದಾಯ ಬರುತ್ತದೆ. ಆದುದರಿಂದ ಪಿಂಚಣಿದಾರರಿಗೆ ಕನಿಷ್ಠ ಪಿಂಚಣಿಯನ್ನು 9,000 ರೂ.ಗೆ ಹೆಚ್ಚಿಸಬೇಕು. ಅಲ್ಲದೆ ವರ್ಷ ಪ್ರತಿ ಬೆಲೆ ಏರಿಕೆಯ ಆಧಾರದಲ್ಲಿ ಹೆಚ್ಚಾಗುವ ತುಟ್ಟಿಭತ್ತೆಯನ್ನು ಭವಿಷ್ಯ ನಿಧಿ ಪಿಂಚಣಿದಾರರಿಗೂ ಕೊಡಬೇಕು ಎಂದು ಎಂದು ಪಿಂಚಣಿದಾರ ಸಂಘದ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಕುಮಾರ್ ಒತ್ತಾಯಿಸಿದ್ದಾರೆ.

ಪಿಂಚಣಿದಾರರ ಸಂಘದ ಉಡುಪಿ ವಲಯದ ವತಿಯಿಂದ ಉಡುಪಿಯ ಬನ್ನಂಜೆ ಶ್ರೀ ನಾರಾಯಣಗುರು ಸಭಾಂಗಣದಲ್ಲಿ ಆಯೋಜಿಸಲಾದ ಭವಿಷ್ಯ ನಿಧಿ ಪಿಂಚಣಿದಾರರ ಉಡುಪಿ ವಲಯ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಬೀಡಿ ಸೇರಿದಂತೆ ಬಹುತೇಕ ಕಾರ್ಮಿಕರು ಅನಾರೋಗ್ಯ ಪೀಡಿತರಾಗಿದ್ದು, ಅವರಿಗೆ ಉಚಿತವಾಗಿ ಆರೋಗ್ಯ ಸುರಕ್ಷತೆಯನ್ನು ಸರಕಾರ ನೀಡಬೇಕು. ಕಾರ್ಪೊರೇಟರ್‌ಗಳಿಗೆ ಲಕ್ಷ ಲಕ್ಷ ಕೋಟಿ ರೂ. ನೀಡುವ ಸರಕಾರ, ಭವಿಷ್ಯ ನಿಧಿ ಪಿಂಚಣಿದಾರರಿಗೆ ಕೇವಲ ಒಂದು ಸಾವಿರ ಕೋಟಿ ರೂ. ನೀಡಿದೆ. ಭವಿಷ್ಯ ನಿಧಿಯಲ್ಲಿ ಅನ್‌ಕ್ಲೈಮ್ಡ್ ಆಗಿರುವ ಸಾವಿರ ಕೋಟಿ ರೂ. ಉಳಿದುಕೊಂಡಿದೆ. ಇದರ ಬಡ್ಡಿಯಲ್ಲಿಯೇ ಪಿಂಚಣಿಯನ್ನು ಕೊಡಬಹುದಾಗಿದೆ ಎಂದರು.

ಸಿಐಟಿಯು ಜಿಲ್ಲಾ ಮುಖಂಡ ಎಚ್.ನರಸಿಂಹ ಮಾತನಾಡಿ, ಭವಿಷ್ಯ ನಿಧಿ ಇಲಾಖೆಯಲ್ಲಿರುವ ಸಾವಿರಾರು ಕೋಟಿ ಹಣವನ್ನೇ ಪಿಂಚಣಿಯಾಗಿ ಕೊಡಬಹುದು. ಆದರೆ ಆಳುವ ವರ್ಗಕ್ಕೆ ದುಡಿಯುವ ವರ್ಗದವರ ಬಗ್ಗೆ ಕಾಳಜಿ ಮತ್ತು ರಾಜಕೀಯ ಇಚ್ಛಾಶಕ್ತಿ ಇಲ್ಲ. ಈಗಲೂ ಪಿಂಚಣಿ ಹಣವನ್ನು ಸಾಕಷ್ಟು ತೊಂದರೆ, ಕಿರುಕುಳ ಅನುಭವಿಸಿಯೇ ಪಡೆದುಕೊಳ್ಳುತ್ತಿದ್ದೇವೆ. ನಾವು ಬೆವರು ಸುರಿಸಿ ಕಟ್ಟಿದ ಹಣವನ್ನು ಪಡೆಯಲು ಬೇಕಾದ ಕಾನೂನಿನ ಸುಧಾರಣೆಯನ್ನು ಸರಕಾರ ಮಾಡುತ್ತಿಲ್ಲ ಎಂದು ದೂರಿದರು.

ಮುಖ್ಯ ಅತಿಥಿಗಳಾಗಿ ಸಿಐಟಿಯು ಉಡುಪಿ ಜಿಲ್ಲಾ ಉಪಾಧ್ಯಕ್ಷ ಬಾಲಕೃಷ್ಣ  ಶೆಟ್ಟಿ, ಜಿಲ್ಲಾ ಕೋಶಾಧಿಕಾರಿ ಶಶಿಧರ ಗೊಲ್ಲ, ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಅಧ್ಯಕ್ಷ ಮಹಾಬಲ ವಡೇರಹೋಬಳಿ, ಬೀಡಿ ಸಂಘದ ಪ್ರಮುಖರಾದ ಬಲ್ಕೀಸ್ ಕುಂದಾಪುರ ಉಪಸ್ಥಿತರಿದ್ದರು.

ಸಂಘದ ಉಡುಪಿ ವಲಯ ಅಧ್ಯಕ್ಷೆ ಲಲಿತಾ ಸುವರ್ಣ ಗರಡಿಮಜಲು, ಕೋಶಾಧಿಕಾರಿ ಸುಂದರಿ ಕುಂದರ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಉಮೇಶ್ ಕುಂದರ್ ವರದಿ ವಾಚಿಸಿ ಕಾರ್ಯಕ್ರಮ ನಿರೂಪಿಸಿದರು.

 'ಉದ್ಯಮಿ ಪತಿಗಳ ಕೋಟಿ ಕೋಟಿ ತೆರಿಗೆ ಹಣ ಮನ್ನಾ ಮಾಡುವ ಸರಕಾರಕ್ಕೆ ಬಡ ಜನರಿಗೆ ಕೊಡಲು ಹಣ ಇಲ್ಲ ಹೇಳುತ್ತದೆ. ಒಂದೆಡೆ ಉಚಿತ ಕೊಟ್ಟರೆ ದೇಶ ಸಂಕಷ್ಟಕ್ಕೆ ಒಳಗಾಗುತ್ತದೆ ಎಂದು ಹೇಳುವವರು ಇನ್ನೊಂದೆಡೆ ಕಾರ್ಪೊ ರೇಟರ್‌ಗಳ ತೆರಿಗೆ ಹಣ ಮನ್ನಾ ಮಾಡಿ, ಅವರ ಸಂಪತ್ತು ಜಾಸ್ತಿ ಮಾಡಲು ಅನುಕೂಲವಾಗುವ ನೀತಿಗಳನ್ನು ಜಾರಿಗೆ ತರುತ್ತಿದ್ದಾರೆ. ನಿವೃತ್ತ ಪಿಂಚಣಿದಾರರಿಗೆ ಉತ್ತಮ ಜೀವನ ನಡೆಸಲು ಯಾವುದೇ ಸೌಲಭ್ಯಗಳನ್ನು ಸರಕಾರ ನೀಡುತ್ತಿಲ್ಲ’

-ಎಚ್.ನರಸಿಂಹ,

ಮುಖಂಡರು, ಸಿಐಟಿಯು

share
Next Story
X