Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅತ್ಯಾಚಾರ ಸಂತ್ರಸ್ತೆಗೆ ಕುಜದೋಷವಿದೆಯೇ...

ಅತ್ಯಾಚಾರ ಸಂತ್ರಸ್ತೆಗೆ ಕುಜದೋಷವಿದೆಯೇ ಎಂದು ಪರಿಶೀಲಿಸಲು ಜ್ಯೋತಿಷ್ಯ ಇಲಾಖೆಗೆ ಹೈಕೋರ್ಟ್ ಆದೇಶ: ಸುಪ್ರೀಂ ತಡೆ

3 Jun 2023 4:50 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅತ್ಯಾಚಾರ ಸಂತ್ರಸ್ತೆಗೆ ಕುಜದೋಷವಿದೆಯೇ ಎಂದು ಪರಿಶೀಲಿಸಲು ಜ್ಯೋತಿಷ್ಯ ಇಲಾಖೆಗೆ ಹೈಕೋರ್ಟ್ ಆದೇಶ: ಸುಪ್ರೀಂ ತಡೆ

ಹೊಸದಿಲ್ಲಿ: ಅತ್ಯಾಚಾರ ಸಂತ್ರಸ್ತೆಯು ಕುಜದೋಷವನ್ನು ಹೊಂದಿದ್ದಾಳೆಯೇ ಎನ್ನುವುದನ್ನು ಖಚಿತಪಡಿಸಿಕೊಳ್ಳುವಂತೆ ಜ್ಯೋತಿಷ್ಯ ಇಲಾಖೆಗೆ ನಿರ್ದೇಶಿಸಿ ಅಲಹಾಬಾದ್ ಉಚ್ಚ ನ್ಯಾಯಾಲಯವು ಮೇ 23ರಂದು ಹೊರಡಿಸಿದ್ದ ಆದೇಶಕ್ಕೆ ಸರ್ವೋಚ್ಚ ನ್ಯಾಯಾಲಯವು ಶನಿವಾರ ತಡೆ ನೀಡಿದೆ.

ಜ್ಯೋತಿಷ್ಯವು ವೈಜ್ಞಾನಿಕವೇ ಎನ್ನುವುದನ್ನು ಪರಿಶೀಲಿಸುವ ಗೋಜಿಗೆ ತಾನು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದ ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಪಂಕಜ ಮಿತ್ತಲ್ ಅವರ ರಜಾಕಾಲ ಪೀಠವು,ಜಾಮೀನು ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಇಂತಹ ಆದೇಶವನ್ನು ಹೊರಡಿಸಬಾರದಿತ್ತು ಎಂದು ಬೆಟ್ಟು ಮಾಡಿತು.

‘ಇದು ಸಂಪೂರ್ಣವಾಗಿ ಅಸಾಂದರ್ಭಿಕವಾಗಿದೆ ಮತ್ತು ಖಾಸಗಿತನದ ಹಕ್ಕಿನ ಉಲ್ಲಂಘನೆಯಾಗಿದೆ. ಖಗೋಳ ಶಾಸ್ತ್ರವು ಏನು ಮಾಡಬೇಕಿದೆ ಎಂಬ ಬಗ್ಗೆ ನಿಮ್ಮೊಂದಿಗೆ ಚರ್ಚೆಯನ್ನು ನಾವು ಬಯಸಿಲ್ಲ. ವಿಷಯವನ್ನು ಇದಕ್ಕೆ ತಳುಕು ಹಾಕಿದ್ದಕ್ಕೆ ಮಾತ್ರ ನಮಗೆ ಕಳವಳವಿದೆ ’ಎಂದು ನ್ಯಾ.ಧುಲಿಯಾ ಹೇಳಿದರೆ,‘ಯಾವ ಉದ್ದೇಶದಿಂದ ಈ ಜ್ಯೋತಿಷ್ಯ ವರದಿಯನ್ನು ಕೋರಲಾಗಿದೆ ಎನ್ನುವುದು ನಮಗೆ ಅರ್ಥವಾಗಿಲ್ಲ ’ ಎಂದು ನ್ಯಾ.ಮಿತ್ತಲ್ ನುಡಿದರು.

ಜಾಮೀನು ಅರ್ಜಿಯ ವಿಚಾರಣೆಯಲ್ಲಿ ಜ್ಯೋತಿಷ್ಯ ವರದಿಯ ಅಗತ್ಯವಿಲ್ಲ ಎಂದು ಹೇಳಿದ ಸರ್ವೋಚ್ಚ ನ್ಯಾಯಾಲಯವು ಅಲಹಾಬಾದ್ ಉಚ್ಚ ನ್ಯಾಯಾಲಯದ ಆದೇಶಕ್ಕೆ ತಡೆಯನ್ನು ನೀಡಿತು ಮತ್ತು ಜಾಮೀನು ಅರ್ಜಿಯ ಅರ್ಹತೆಯ ಆಧಾರದಲ್ಲಿ ಅದನ್ನು ಇತ್ಯರ್ಥಗೊಳಿಸುವಂತೆ ನಿರ್ದೇಶನ ನೀಡಿತು.

ಅಲಹಾಬಾದ್ ಉಚ್ಚ ನ್ಯಾಯಾಲಯದ ಲಕ್ನೋ ಪೀಠವು ಅತ್ಯಾಚಾರ ಆರೋಪಿಗೆ ಜಾಮೀನು ಮಂಜೂರು ಮಾಡಿತ್ತು. ಮಹಿಳೆಯು ತನ್ನ ಜಾತಕದಲ್ಲಿ ಕುಜದೋಷವನ್ನು ಹೊಂದಿದ್ದಾಳೆ. ಅದು ಸುಖಿ ವೈವಾಹಿಕ ಜೀವನಕ್ಕೆ ಅಡ್ಡಿಯನ್ನುಂಟು ಮಾಡುತ್ತದೆ ಎಂದು ಜ್ಯೋತಿಷಿಗಳು ನಂಬಿದ್ದಾರೆ,ಹೀಗಾಗಿ ತನ್ನ ಕಕ್ಷಿದಾರ ಆಕೆಯನ್ನು ಮದುವೆಯಾಗಲು ಬಯಸಿರಲಿಲ್ಲ ಎಂದು ಆರೋಪಿ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದರು. ಆದರೆ ತನ್ನ ಕಕ್ಷಿದಾರಳು ಕುಜದೋಷವನ್ನು ಹೊಂದಿಲ್ಲ ಎಂದು ಮಹಿಳೆಯ ಪರ ವಕೀಲರು ವಾದಿಸಿದ್ದರು.

10 ದಿನಗಳಲ್ಲಿ ಆರೋಪಿ ಮತ್ತು ಸಂತ್ರಸ್ತ ಮಹಿಳೆಯ ಜಾತಕಗಳನ್ನು ಲಕ್ನೋ ವಿವಿಯ ಜ್ಯೋತಿಷ್ಯ ವಿಭಾಗದ ಮುಖ್ಯಸ್ಥರಿಗೆ ಸಲ್ಲಿಸುವಂತೆ ಎರಡೂ ಕಡೆಯವರಿಗೆ ಆದೇಶಿಸಿದ್ದ ಉಚ್ಚ ನ್ಯಾಯಾಲಯವು,ಮೂರು ವಾರಗಳಲ್ಲಿ ಬಂದ್ ಲಕೋಟೆಯಲ್ಲಿ ವರದಿಯನ್ನು ಸಲ್ಲಿಸುವಂತೆ ವಿಭಾಗ ಮುಖ್ಯಸ್ಥರಿಗೆ ಸೂಚಿಸಿತ್ತು.

ಆರೋಪಿಯು ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿದ ನಂತರ ತಾನು ಆತನೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದೆ,ಆದರೆ ತಾನು ಕುಜದೋಷವನ್ನು ಹೊಂದಿದ್ದೇನೆ ಎಂದು ಹೇಳಿ ಆತ ತನ್ನ ಮದುವೆ ಪ್ರಸ್ತಾವವನ್ನು ತಿರಸ್ಕರಿಸಿದ್ದ ಎಂದು ಮಹಿಳೆ ಹೇಳಿಕೊಂಡಿದ್ದಾಳೆ.

ಆದೇಶವನ್ನು ಗೊಂದಲಕಾರಿ ಎಂದು ಬಣ್ಣಿಸಿದ ಉ.ಪ್ರ.ಸರಕಾರದ ಪರ ಸಾಲಿಸಿಟರ್ ಜನರಲ್ ತುಷಾರ ಮೆಹ್ತಾ ಅವರು,ಉಚ್ಚ ನ್ಯಾಯಾಲಯವು ಜ್ಯೋತಿಷ್ಯದ ಗೋಜಿಗೆ ಹೋಗಬಾರದಿತ್ತು. ನ್ಯಾಯಾಲಯವು ಅರ್ಜಿಯೊಂದನ್ನು ಅಂಗೀಕರಿಸುವಾಗ ಇದೂ ಒಂದು ಅಂಶವಾಗಬಹುದೇ ಎನ್ನುವುದು ಏಕೈಕ ಪ್ರಶ್ನೆಯಾಗಿದೆ. ಈ ವಿಷಯದ ನ್ಯಾಯ ನಿರ್ಣಯ ಮಾಡುವಾಗ ಸಕ್ಷಮ ನ್ಯಾಯಾಲಯವು ಈ ವಿಷಯವನ್ನು ಪರಿಶೀಲಿಸುವಂತಿಲ್ಲ ಎಂದು ಶನಿವಾರ ವಿಚಾರಣೆ ಸಂದರ್ಭ ವಾದಿಸಿದರು.

ಉಚ್ಚ ನ್ಯಾಯಾಲಯವು ಪ್ರಕರಣದ ಮುಂದಿನ ವಿಚಾರಣೆಯನ್ನು ಜೂ.26ರಂದು ನಡೆಸಲಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X