Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹಳೆ ಪಿಂಚಣಿ ಯೋಜನೆ ಜಾರಿಗೆ ಸಂಘಟಿತ...

ಹಳೆ ಪಿಂಚಣಿ ಯೋಜನೆ ಜಾರಿಗೆ ಸಂಘಟಿತ ಹೋರಾಟ ಅಗತ್ಯ: ಅಂಚೆ ನೌಕರರ ಅಧಿವೇಶನದಲ್ಲಿ ಖಂಡೋಜಿ ರಾವ್

4 Jun 2023 1:58 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಹಳೆ ಪಿಂಚಣಿ ಯೋಜನೆ ಜಾರಿಗೆ ಸಂಘಟಿತ ಹೋರಾಟ ಅಗತ್ಯ: ಅಂಚೆ ನೌಕರರ ಅಧಿವೇಶನದಲ್ಲಿ ಖಂಡೋಜಿ ರಾವ್

ಉಡುಪಿ, ಜೂ.4: ಕಾರ್ಮಿಕ ಸಂಘದ ಚಳವಳಿಯು ಪ್ರಗತಿಯ ಕಡೆಗೆ ಹೆಜ್ಜೆ ಇಡುತ್ತಿದ್ದರೆ, ಈ ಹೊಸ ಪಿಂಚಣಿ ಯೋಜನೆಯು ಕಾರ್ಮಿಕರನ್ನು ಹಿಂದಕ್ಕೆ ಕೊಂಡೊಯ್ಯುವಂತೆ ಮಾಡುತ್ತಿದೆ. ಹಿಂದಿನ ಸರಕಾರ ಇದನ್ನು ಆರಂಭಿಸಿದರೆ ಈಗಿನ ಸರಕಾರ ಅದನ್ನು ಅನುಷ್ಠಾನಕ್ಕೆ ತಂದಿತು. ಇದರಿಂದ ಹಿಂದಿನವರು ಪಾಠ ಕಲಿತಿದ್ದಾರೆ ಮತ್ತು ಈಗಿನವರು ಮುಂದೆ ಪಾಠ ಕಲಿಯಬಹುದು. ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರುವಂತೆ ಸಂಘಟಿತರಾಗಿ ಹೋರಾಟ ಮಾಡಲೇ ಬೇಕಾಗಿದೆ. ಇದರಿಂದ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ರಾಷ್ಟ್ರೀಯ ಅಂಚೆ ನೌಕರರ ಸಂಘ ಗ್ರೂಪ್ ಸಿ ಕರ್ನಾಟಕ ವಲಯದ ಕಾರ್ಯದರ್ಶಿ ಹಾಗೂ ಎನ್‌ಎಪಿಇ ಗ್ರೂಪ್ ಸಿ ನವದೆಹಲಿ ಕೇಂದ್ರೀಯ ಸ್ಥಾನದ ಕಾರ್ಯಾಧ್ಯಕ್ಷ ಎಸ್.ಖಂಡೋಜಿ ರಾವ್ ಹೇಳಿದ್ದಾರೆ.

ಉಡುಪಿ ಬನ್ನಂಜೆ ಶ್ರೀನಾರಾಯಣಗುರು ಮಂದಿರ ಸಭಾಂಗಣದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಅಂಚೆ ನೌಕರರ ಸಂಘ ಗ್ರೂಪ್ ಸಿ, ಪೋಸ್ಟ್ ಮೆನ್-ಎಂಟಿಎಸ್ ಮತ್ತು ಗ್ರಾಮೀಣ ಅಂಚೆ ನೌಕರರ ಸಂಘ ಉಡುಪಿ ವಿಭಾಗೀಯ ಶಾಖೆಗಳ 17ನೇ ಜಂಟಿ ದ್ವೈವಾರ್ಷಿಕ ಅಧಿವೇಶನವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಹೊಸ ಪಿಂಚಣಿ ಯೋಜನೆಯಂತೆ ನಮ್ಮ ಹಣವನ್ನು ಷೇರು ಮಾರು ಕಟ್ಟೆಯಲ್ಲಿ ಹೂಡಿಕೆ ಮಾಡಲಾಗುತ್ತಿದೆ. ಇದಕ್ಕೆ ಯಾವುದೇ ಭದ್ರತೆಗಳಿಲ್ಲ. ಹೊಸ ಸ್ಕೀಮ್‌ನಲ್ಲಿ 8-10ವರ್ಷ ಸೇವೆ ಮಾಡಿದವರು ಕೇವಲ 2000-3000 ರೂ. ಪಿಂಚಣಿ ಪಡೆದರೆ, ಹಳೆಯ ಸ್ಕೀಮ್‌ನಲ್ಲಿ ಕನಿಷ್ಠ 9700ರೂ. ಪಿಂಚಣಿ ದೊರೆ ಯುತ್ತದೆ. ಕೆಲವು ರಾಜ್ಯಗಳು ಹೊಸ ಸ್ಕಿಮ್‌ನ್ನು ಈವರಗೆ ಅನುಷ್ಠಾನ ಮಾಡಿಲ್ಲ. ಆದರೆ ಕೇಂದ್ರ ಸರಕಾರ ಈಗಾಗಲೇ ಹೂಡಿಕೆ ಮಾಡಿರುವ ಹಣವನ್ನು ರಾಜ್ಯ ಸರಕಾರಕ್ಕೆ ಮರು ಪಾವತಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಹಾಗೆ ಮಾಡಿದರೆ ಹಳೆ ಸ್ಕೀಮ್ ಅನುಷ್ಠಾನ ಮಾಡಲು ಸಾಧ್ಯವಿಲ್ಲ. ಇದರ ವಿರುದ್ಧ ಹೋರಾಟ ಒಂದೇ ದಾರಿಯಾಗಿದೆ ಎಂದು ಅವರು ತಿಳಿಸಿದರು.

ಇಂದು ಅಂಚೆ ನೌಕರರು ನೆಟ್‌ವರ್ಕ್, ಸರ್ವರ್ ಸಮಸ್ಯೆ ಮತ್ತು ಕೆಲಸದ ಒತ್ತಡದಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ನಾವು ಈ ಕಷ್ಟಗಳ ಜೊತೆ ಹೊಂದಿಕೊಂಡು ಹೋಗುತ್ತಿದ್ದೇವೆ. ಆದರೆ 2024ರ ನಂತರ ಆಗುವ ಮಹತ್ತರ ಬದಲಾವಣೆಯಲ್ಲಿ ನಾವು ಹೊಡೆದಾಡುವ ಸ್ಥಿತಿ ಬರಬಹುದಾಗಿದೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಬ್ಯಾಂಕ್‌ಗಳ ವಿಲೀನ, ಬಿಎಸ್ ಎನ್‌ಎಲ್ ಹಾಗೂ ರೈಲ್ವೆ ಇಲಾಖೆಗಳ ಖಾಸಗೀರಕಣಗಳ ನಡುವೆಯೂ ಅಂಚೆ ಇಲಾಖೆ ಏನು ಕಳೆದುಕೊಳ್ಳದೆ ಉತ್ತಮ ಸ್ಥಿತಿಯಲ್ಲಿದೆ. ಇದಕ್ಕೆ ಕಾರಣ ಇಲಾಖೆ ನೌಕರರು ಮತ್ತು ಸಂಘಟನೆಗಳ ಹೋರಾಟಗಳು ಎಂದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಗ್ರಾಮೀಣ ಅಂಚೆ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಯು. ಮುರಳೀಧರನ್ ಅವರಿಗೆ ಕೆ.ಎಸ್.ಅರಸ್ ಸಂಸ್ಮರಣ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಪುತ್ತೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕ ನವೀನ್‌ಚಂದರ್, ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕ ಕೃಷ್ಣರಾಜ ವಿಠಲ ಭಟ್, ಮಣಿಪಾಲ ಅಂಚೆ ವ್ಯವಹಾರ ಕೇಂದ್ರ ಅಧೀಕ್ಷಕ ಬಿ.ಶಂಕರ್, ರಾಷ್ಟ್ರೀಯ ಅಂಚೆ ನೌಕರರ ಸಂಘದ ವಲಯ ಕಾರ್ಯದರ್ಶಿ ಆರ್.ಮಹ ದೇವ, ರಾಷ್ಟ್ರೀಯ ಗ್ರಾಮೀಣ ಅಂಚೆ ನೌಕರರ ಸಂಘದ ಅಧ್ಯಕ್ಷ ಎಂ.ಪಿ.ಚಿತ್ರ ಸೇನ, ಯೂನಿಯನ್ ನೆಟ್‌ವರ್ಕ್ ಇಂಟರ್‌ನ್ಯಾಶನಲ್ ಇಂಡಿಯನ್ ಲಯಾಸನ್ ಕೌನ್ಸಿಲ್‌ನ ಮಹಿಳಾ ಸಮಿತಿ ಅಧ್ಯಕ್ಷೆ ರೇಖಾ ಡಿ.ಎಂ. ಮುಖ್ಯ ಅತಿಥಿಗಳಾಗಿದ್ದರು.

ರಾಷ್ಟ್ರೀಯ ಅಂಚೆ ನೌಕರರ ಸಂಘ ಗ್ರೂಪ್ ಸಿ ಉಡುಪಿ ವಿಭಾಗದ ಅಧ್ಯಕ್ಷ ಸುರೇಶ್ ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ಅಂಚೆ ಸಹಾಯಕ ರಾಮಕೃಷೃ ಜೋಷಿ ಸ್ವಾಗತಿಸಿದರು. ಗ್ರೂಪ್ ಸಿ ವಿಭಾಗೀಯ ಕಾರ್ಯದರ್ಶಿ ಪ್ರವೀಣ್ ಜತ್ತನ್ ಕಾರ್ಯಕ್ರಮ ನಿರೂಪಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X