ಮೋದಿ ಸರ್ಕಾರ ಆರ್ಥಿಕತೆ ಬಗ್ಗೆ ತಪ್ಪು ಅಂಕಿಅಂಶ ನೀಡುತ್ತಿದೆ: ಸುಬ್ರಮಣಿಯನ್ ಸ್ವಾಮಿ

ಹೊಸದಿಲ್ಲಿ: ಭಾರತದ ಆರ್ಥಿಕತೆಯ ಬಗ್ಗೆ ತಪ್ಪುದಾರಿಗೆಳೆಯುವ ಅಂಕಿಅಂಶಗಳನ್ನು ಮೋದಿ ಸರ್ಕಾರ ತೋರಿಸುತ್ತಿದೆ ಎಂದು ಕೇಂದ್ರದ ವಿರುದ್ಧ ಹಿರಿಯ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಆರ್ಥಿಕತೆಯ ಬಗ್ಗೆ ಶೀಘ್ರದಲ್ಲೇ ಅಂಕಿಅಂಶಗಳ ಪುರಾವೆ ನೀಡುವುದಾಗಿ ಹೇಳಿದ್ದಾರೆ.
ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಬಿಜೆಪಿ ಕಾರ್ಯಾಧ್ಯಕ್ಷ ಸುಬ್ರಮಣಿಯನ್ ಸ್ವಾಮಿ ಅವರು ಮಂಗಳವಾರ ಟ್ವಿಟರ್ ಮೂಲಕ ಕೇಂದ್ರದ ಹೇಳಿಕೆಯನ್ನು ಖಂಡಿಸಿದ್ದು, ಭಾರತದ ಆರ್ಥಿಕ ಅಂಕಿಅಂಶಗಳನ್ನು ಕೂಲಂಕಷವಾಗಿ ವಿಶ್ಲೇಷಿಸಿದ್ದೇನೆ. 'ಭಾರತದ ಪ್ರಜ್ವಲಿಸುವ ಆರ್ಥಿಕತೆಯ' ಬಗ್ಗೆ ಮಾತಾಡುವುದು ಆಧಾರರಹಿತವಾಗಿದೆ ಎಂದು ಹೇಳಿದ್ದಾರೆ.
"ಶೀಘ್ರದಲ್ಲೇ ನಾನು ಅಂಕಿ ಅಂಶ ಮುಂದಿಡುತ್ತೇನೆ. ಸಂಕ್ಷಿಪ್ತವಾಗಿ ಹೇಳುವುದಾದರೆ, ಜಿಡಿಪಿಯ ಬೆಳವಣಿಗೆಯ ದರವು ಕರೋನಾದಿಂದ ಚೇತರಿಸಿಕೊಳ್ಳುವುದು ಕಮ್ಮಿಯಾಗಿದೆ. ಇದು ನೆಹರೂ ಅವಧಿಗಿಂತ ಕಡಿಮೆಯಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ.
I have analysed the India’s economic statistics thoroughly. All the talk of India glowing or shining is baseless. I shall soon present these statistics. In brief the growth rate of GDP minus the recovery from Corona is less than 4 % which what achieved in the Nehru period.
— Subramanian Swamy (@Swamy39) June 6, 2023