Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶ: ಪ್ರಯಾಣಿಕರು ನಮಾಝ್‌...

ಉತ್ತರ ಪ್ರದೇಶ: ಪ್ರಯಾಣಿಕರು ನಮಾಝ್‌ ಮುಗಿಸುವವರೆಗೆ ಕಾದ ಬಸ್‌ ಚಾಲಕ, ಸಹಾಯಕ ಅಮಾನತು

6 Jun 2023 6:06 PM IST
share
ಉತ್ತರ ಪ್ರದೇಶ: ಪ್ರಯಾಣಿಕರು ನಮಾಝ್‌ ಮುಗಿಸುವವರೆಗೆ ಕಾದ ಬಸ್‌ ಚಾಲಕ, ಸಹಾಯಕ ಅಮಾನತು

ಲಕ್ನೋ: ಇಬ್ಬರು ಪ್ರಯಾಣಿಕರಿಗೆ ನಮಾಝ್ ಮಾಡಲು ಅವಕಾಶ ಕಲ್ಪಿಸಲು ಬಸ್ಸನ್ನು ನಿಲ್ಲಿಸಿದ್ದಾರೆಂದು ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕ ಮತ್ತು ಆತನ ಸಹಾಯಕನೊಬ್ಬನನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಘಟನೆ ಜೂನ್‌ 4 ರಂದು ನಡೆದಿದೆ. ಬಸ್‌ ಬರೇಲಿ ಟರ್ಮಿನಲ್‌ನಿಂದ ನಿರ್ಗಮಿಸಿ ರಾಮಪುರ್‌ ಜಿಲ್ಲೆಯ ಮಿಲಕ್‌ ಪ್ರದೇಶದಲ್ಲಿರುವ ರಾಷ್ಟ್ರೀಯ ಹೆದ್ದಾರಿ 24ರಲ್ಲಿ ನಿಂತಿತ್ತು. ಆ ಸಂದರ್ಭ ಬಸ್ಸಿನಲ್ಲಿ 14 ಪ್ರಯಾಣಿಕರಿದ್ದರು.

ರಸ್ತೆಬದಿಯಲ್ಲಿದ್ದ ಶೌಚಾಲಯಕ್ಕೆ ತೆರಳಲು ಕೆಲ ಪ್ರಯಾಣಿಕರು ಬಯಸಿದ್ದರಿಂದ ಬಸ್ಸನ್ನು ನಿಲ್ಲಿಸಿದೆ ಎಂದು ಚಾಲಕ ಕೆ ಪಿ ಸಿಂಗ್‌ ತಿಳಿಸಿದ್ದನೆನ್ನಲಾಗಿದೆ. ಆಗ ಇಬ್ಬರು ಪ್ರಯಾಣಿಕರು ತಮಗೆ ನಮಾಝ್ ಸಲ್ಲಿಸಬೇಕೆಂದಾಗ ಸಿಂಗ್‌ ಅದಕ್ಕೆ ಒಪ್ಪಿ ಅವರು ನಮಾಝ್ ಸಲ್ಲಿಸುವ ತನಕ ಇನ್ನೂ ಕೆಲ ನಿಮಿಷಗಳ ಕಾಲ ಬಸ್ಸನ್ನು ನಿಲ್ಲಿಸಿದ್ದರು.

ಆದರೆ ಇಬ್ಬರು ಪ್ರಯಾಣಿಕರು ನಮಾಝ್ ಸಲ್ಲಿಸಿ ಮುಗಿಸಲು ಚಾಲಕ ಕಾಯುತ್ತಿದ್ದಾನೆಂದು ತಿಳಿದು ಇತರ ಪ್ರಯಾಣಿಕರು ಪ್ರತಿಭಟಿಸಿದ್ದರು. ಒಬ್ಬ ಪ್ರಯಾಣಿಕ ಈ ಘಟನೆಯ ವೀಡಿಯೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ನಮಾಝ್ ಸಲ್ಲಿಸಲು ಅನುಕೂಲ ಕಲ್ಪಿಸಲೆಂದೇ ಬಸ್ಸನ್ನು ನಿಲ್ಲಿಸಲಾಗಿತ್ತು ಎಂದು ಬರೆದಿದ್ದಾರೆ.

ಸಂಚಾರ ದಟ್ಟಣೆಯ ಹೆದ್ದಾರಿಯಲ್ಲಿ ಬಸ್ಸನ್ನು ನಿಲ್ಲಿಸಿ ಪ್ರಯಾಣಿಕರ ಸುರಕ್ಷತೆಯನ್ನು ನಿರ್ಲಕ್ಷಿಸಲಾಗಿದೆ ಎಂದು ಪ್ರಾಥಮಿಕ ತನಿಖೆ ದೃಢಪಟ್ಟ ನಂತರ ಸಿಂಗ್‌ ಮತ್ತು ಯಾದವ್‌ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ನಿಗಮದ ಪ್ರಾದೇಶಿಕ ಪ್ರಬಂಧಕ ದೀಪಕ್‌ ಚೌಧುರಿ ಹೇಳಿದ್ದಾರೆ.

ನಮಾಝ್ ಸಲ್ಲಿಸಿದ್ದ ಪ್ರಯಾಣಿಕ, ಗುಜರಾತ್‌ನ ಅಹ್ಮದಾಬಾದ್‌ ನಿವಾಸಿ ಹುಸೈನ್‌ ಮನ್ಸೂರಿ ಈ ಕುರಿತು‌ ಪ್ರತಿಕ್ರಿಯಿಸಿ ಚಾಲಕ ಮತ್ತು ಸಹಾಯಕನ ವಿರುದ್ಧದ ಕ್ರಮ ಅಚ್ಚರಿ ತಂದಿದೆ ಎಂದಿದ್ದಾರೆ.

ನನಗೆ ದಿಲ್ಲಿಯಲ್ಲಿ ರೈಲು ಹತ್ತಬೇಕಿತ್ತು, ಸಮಯಕ್ಕೆ ಸೆರಿಯಾಗಿ ತಲುಪಿದೆ. ಬಸ್ಸನ್ನು ಇತರ ಪ್ರಯಾಣಿಕರಿಗಾಗಿಯೂ  ನಿಲ್ಲಿಸಲಾಗಿತ್ತು. ಚಾಲಕ ಮತ್ತಾತನ ಸಹಾಯಕನಿಗೆ ಅಗತ್ಯ ಸಹಾಯ ಮಾಡಲು ಸಿದ್ಧ ಎಂದು ಅವರು ಹೇಳಿದ್ದಾರೆ.

ತಮ್ಮ ವಿರುದ್ಧದ ಕ್ರಮವನ್ನು ಪ್ರಶ್ನಿಸುವದಾಗಿ ಚಾಲಕ ಮತ್ತು ಸಹಾಯಕ ಹೇಳಿದ್ದಾರೆ. ಬಸ್ಸು ಉದ್ಯೋಗಿಗಳ ಕಲ್ಯಾಣ ಸಂಘ ಕೂಡ ಅವರ ವಿರುದ್ಧದ ಕ್ರಮಕ್ಕೆ ಆಕ್ಷೇಪಿಸಿದೆ.

share
Next Story
X