Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅರಬಿ ಸಮುದ್ರದಲ್ಲಿನ ವಾಯುಭಾರ ಕುಸಿತವು...

ಅರಬಿ ಸಮುದ್ರದಲ್ಲಿನ ವಾಯುಭಾರ ಕುಸಿತವು ಚಂಡಮಾರುತವಾಗುವ ಸಾಧ್ಯತೆ: ಐಎಂಡಿ

6 Jun 2023 9:24 PM IST
share
ಅರಬಿ ಸಮುದ್ರದಲ್ಲಿನ ವಾಯುಭಾರ ಕುಸಿತವು ಚಂಡಮಾರುತವಾಗುವ ಸಾಧ್ಯತೆ: ಐಎಂಡಿ

ಹೊಸದಿಲ್ಲಿ: ಗುಜರಾತಿನ ಪೋರಬಂದರ್ ದಕ್ಷಿಣಕ್ಕೆ ಆಗ್ನೇಯ ಅರಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ವಾಯುವ್ಯದತ್ತ ಚಲಿಸುವ ಮತ್ತು ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ಯು ಮಂಗಳವಾರ ಎಚ್ಚರಿಕೆ ನೀಡಿದೆ.

ಮಂಗಳವಾರ ಬೆಳಿಗ್ಗೆ 5:30ಕ್ಕೆ ವಾಯುಭಾರ ಕುಸಿತವು ಗೋವಾದ ಪಶ್ಚಿಮ-ನೈಋತ್ಯಕ್ಕೆ ಸುಮಾರು 920 ಕಿ.ಮೀ., ಮುಂಬೈನ ದಕ್ಷಿಣ-ನೈಋತ್ಯಕ್ಕೆ 1,120 ಕಿ.ಮೀ., ಪೋರಬಂದರ್ ನಿಂದ ದಕ್ಷಿಣಕ್ಕೆ 1,160 ಕಿ.ಮೀ. ಮತ್ತು ಪಾಕಿಸ್ತಾನದ ಕರಾಚಿಯ ದಕ್ಷಿಣಕ್ಕೆ 1,520 ಕಿ.ಮೀ.ದೂರದಲ್ಲಿ ಸ್ಥಿತಗೊಂಡಿತ್ತು ಎಂದು ಐಎಂಡಿ ತನ್ನ ಇತ್ತೀಚಿನ ಬುಲೆಟಿನ್ ನಲ್ಲಿ ತಿಳಿಸಿದೆ.

ವಾಯುಭಾರ ಕುಸಿತವು ಮುಂದಿನ 24 ಗಂಟೆಗಳಲ್ಲಿ ಉತ್ತರದತ್ತ ಚಲಿಸುವ ಹಾಗೂ ಪೂರ್ವ-ಮಧ್ಯ ಅರಬಿ ಸಮುದ್ರ ಮತ್ತು ಪಕ್ಕದ ಆಗ್ನೇಯ ಅರಬಿ ಸಮುದ್ರದ ಮೇಲೆ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.

ಆಗ್ನೇಯ ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಮತ್ತು ಅದರ ತೀವ್ರತೆಯು ಕೇರಳ ಕರಾವಳಿಯತ್ತ ಮುಂಗಾರು ಮಳೆಯ ಆಗಮನದ ಮೇಲೆ ನಿರ್ಣಾಯಕ ಪ್ರಭಾವ ಬೀರುವ ನಿರೀಕ್ಷೆಯಿದೆ ಎಂದು ಐಎಂಡಿ ಸೋಮವಾರ ಹೇಳಿತ್ತು. ಆದರೆ ಕೇರಳದಲ್ಲಿ ಮಳೆಯ ಆಗಮನಕ್ಕಾಗಿ ಯಾವುದೇ ತಾತ್ಕಾಲಿಕ ದಿನಾಂಕವನ್ನು ಅದು ನೀಡಿಲ್ಲ.

ಮುಂಗಾರು ಮಳೆ ಜೂ.8 ಅಥವಾ ಜೂ.9ರಂದು ಕೇರಳವನ್ನು ಪ್ರವೇಶಿಸಬಹುದು ಮತ್ತು ಅದು ಸೌಮ್ಯ ಸ್ವರೂಪದ್ದಾಗಿರಬಹುದು ಎಂದು ನಿರೀಕ್ಷಿಸಲಾಗಿದೆ ಎಂದು ಖಾಸಗಿ ಹವಾಮಾನ ಮುನ್ಸೂಚನೆ ಸಂಸ್ಥೆ ಸ್ಕೈಮೆಟ್ ವೆದರ್ ಹೇಳಿದೆ.

ಅರಬಿ ಸಮುದ್ರದಲ್ಲಿ ಉಂಟಾಗಿರುವ ಪ್ರಬಲ ಹವಾಮಾನ ವೈಪರೀತ್ಯಗಳು ಆಳವಾದ ಒಳನಾಡಿನಲ್ಲಿ ಮಳೆಯ ಮುನ್ನಡೆಯ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರಲಿವೆ. ಅವುಗಳ ಪ್ರಭಾವದಿಂದಾಗಿ ಮುಂಗಾರು ಕರಾವಳಿ ಭಾಗಗಳನ್ನು ತಲುಪಿದರೂ ಪಶ್ಚಿಮ ಘಟ್ಟಗಳನ್ನು ದಾಟುವುದು ಸುಲಭವಾಗುವುದಿಲ್ಲ ಎಂದು ಅದು ತಿಳಿಸಿದೆ.

ಜೂನ್ ಏಳಕ್ಕೆ ಕೇರಳದಲ್ಲಿ ಮಳೆಗಾಲ ಆರಂಭವಾಗಲಿದೆ. ಇದು ಮೂರು ದಿನ ಹೆಚ್ಚು ಅಥವಾ ಕಡಿಮೆಯಾಗಬಹುದು ಎಂದು ಸ್ಕೈಮೆಟ್ ಈ ಮೊದಲು ತಿಳಿಸಿತ್ತು.

ಸಾಮಾನ್ಯವಾಗಿ ಕೇರಳದಲ್ಲಿ ಏಳು ದಿನಗಳ ಹೆಚ್ಚುಕಡಿಮೆಯ ಸಾಧ್ಯತೆಯೊಂದಿಗೆ ಜೂ.1ರಂದು ಮುಂಗಾರು ಮಳೆ ಆರಂಭಗೊಳ್ಳುತ್ತದೆ.

ಕೇರಳದಲ್ಲಿ ಮುಂಗಾರು ಮಳೆ ಆರಂಭದಲ್ಲಿ ಕೊಂಚ ವಿಳಂಬವಾಗುತ್ತದೆ ಎಂದರೆ ಅದು ದೇಶದ ಇತರ ಭಾಗಗಳನ್ನೂ ವಿಳಂಬವಾಗಿ ತಲುಪುತ್ತದೆ ಎಂದು ಅರ್ಥವಲ್ಲ. ಅದು ಮಳೆಗಾಲದ ಋತುವಿನಲ್ಲಿ ದೇಶದ ಒಟ್ಟಾರೆ ಮಳೆ ಪ್ರಮಾಣದ ಮೇಲೆ ಪರಿಣಾಮವನ್ನುಂಟು ಮಾಡುವುದಿಲ್ಲ ಎಂದು ತಿಳಿಸಿರುವ ಐಎಂಡಿ, ಈ ವರ್ಷದಲ್ಲಿ ದೇಶದಲ್ಲಿ ವಾಡಿಕೆಯ ಮಳೆಯಾಗಲಿದೆ ಎಂದು ನಿರೀಕ್ಷಿಸಿದೆ.

share
Next Story
X