Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶಾದ್ಯಂತ ಜಾಲ ಹೊಂದಿರುವ ಮಾದಕವಸ್ತು...

ದೇಶಾದ್ಯಂತ ಜಾಲ ಹೊಂದಿರುವ ಮಾದಕವಸ್ತು ಪೂರೈಕೆ ಗ್ಯಾಂಗ್ ಪತ್ತೆ: 6 ಮಂದಿ ಬಂಧನ; 15,000 LSD ಬ್ಲಾಟ್ ವಶ

6 Jun 2023 10:11 PM IST
share
ದೇಶಾದ್ಯಂತ ಜಾಲ ಹೊಂದಿರುವ ಮಾದಕವಸ್ತು ಪೂರೈಕೆ ಗ್ಯಾಂಗ್ ಪತ್ತೆ: 6 ಮಂದಿ ಬಂಧನ; 15,000 LSD ಬ್ಲಾಟ್ ವಶ

ಹೊಸದಿಲ್ಲಿ: ಡಾರ್ಕ್ ವೆಬ್‌ ನಲ್ಲಿ ಕಾರ್ಯಾಚರಿಸುತ್ತಿರುವ ಹಾಗೂ ದೇಶಾದ್ಯಂತ ಜಾಲ ಹೊಂದಿರುವ ಮಾದಕ ವಸ್ತು ಪೂರೈಕೆ ತಂಡವೊಂದನ್ನು ಪತ್ತೆಹಚ್ಚಿರುವುದಾಗಿ ಮಾದಕವಸ್ತು ನಿಯಂತ್ರಣ ಸಂಸ್ಥೆ (ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ) ಮಂಗಳವಾರ ಹೇಳಿದೆ. ಈ ಸಂಬಂಧ ಆರು ಮಂದಿಯನ್ನು ವಿವಿಧ ನಗರಗಳಿಂದ ಬಂಧಿಸಲಾಗಿದೆ ಹಾಗೂ 15,000 ಎಲ್‌ಎಸ್‌ಡಿ ಬ್ಲಾಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬುದಾಗಿಯೂ ಅದು ತಿಳಿಸಿದೆ. ಬಂಧಿತರು ವಿದ್ಯಾರ್ಥಿಗಳು ಮತ್ತು ಯುವಜನರು.

ಎಲ್‌ಎಸ್‌ಡಿ ಎಂದರೆ ಲಿಸರ್ಜಿಕ್ ಆ್ಯಸಿಡ್ ಡೈಇತೈಲ್ಅಮೈಡ್. ಇದು ರಾಸಾಯನಿಕಗಳಿಂದ ಮಾಡುವ ಮಾದಕವಸ್ತು ಪದಾರ್ಥವಾಗಿದೆ. ಡಾರ್ಕ್‌ನೆಟ್ಎಂದರೆ ಕಾನೂನು ಅನುಷ್ಠಾನ ಸಂಸ್ಥೆಗಳ ನಿಗಾಕ್ಕೆ ಸಿಗದ ಗುಪ್ತ ಖಾಸಗಿ ಇಂಟರ್ನೆಟ್ ಜಾಲವಾಗಿದೆ.

ಇದು ದೇಶದಲ್ಲಿ ಒಂದು ಕಾರ್ಯಾಚರಣೆಯಲ್ಲಿ ವಶಪಡಿಸಿಕೊಳ್ಳಲಾಗಿರುವ ಅತ್ಯಧಿಕ ಪ್ರಮಾಣದ ಎಲ್‌ಎಸ್‌ಡಿ ಬ್ಲಾಟ್‌ಗಳಾಗಿವೆ ಎಂದು ಎನ್ಸಿಬಿ ಉಪ ಮಹಾನಿರ್ದೇಶಕ (ಉತ್ತರ ವಲಯ) ಜ್ಞಾನೇಶ್ವರ್ ಸಿಂಗ್ ಹೇಳಿದರು.

ಈವರೆಗೆ ಒಂದು ಕಾರ್ಯಾಚರಣೆಯಲ್ಲಿ ವಶಪಡಿಸಿಕೊಳ್ಳಲಾಗಿರುವ ಅತ್ಯಧಿಕ ಎಲ್‌ಎಸ್‌ಡಿ ಎಂದರೆ 5,000 ಬ್ಲಾಟ್‌ಗಳು. ಅವುಗಳನ್ನು ಕರ್ನಾಟಕ ಪೊಲೀಸರು 2021ರಲ್ಲಿ ಮತ್ತು ಕೋಲ್ಕತ ಎನ್ಎಸ್ಬಿ 2022ರಲ್ಲಿ ವಶಪಡಿಸಿಕೊಂಡಿದ್ದರು. ಎಲ್‌ಎಸ್‌ಡಿ ಬಳಕೆಯು ತರುಣರಲ್ಲಿ ವ್ಯಾಪಕವಾಗಿದೆ. ಇದರ ಬಳಕೆಯು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಸಿಂಗ್ ಹೇಳಿದ್ದಾರೆ.         

0.1ಗ್ರಾಮ್ ಎಲ್‌ಎಸ್‌ಡಿಯನ್ನು ಹೊಂದುವುದು ಮಾದಕವಸ್ತು ಮತ್ತು ಮತ್ತುಕಾರಕ ಪದಾರ್ಥಗಳ (ಎನ್‌ಡಿಪಿಎಸ್‌) ಕಾಯ್ದೆಯಡಿ ಅಪರಾಧವಾಗುತ್ತದೆ ಎಂದು ಎನ್ಸಿಬಿ ಅಧಿಕಾರಿ ಹೇಳಿದರು.

ತಂಡದ ರೂವಾರಿಯನ್ನು ಜೈಪುರದಿಂದ ಬಂಧಿಸಲಾಗಿದೆ. ಮಾದಕವಸ್ತುಗಳ ಬಗ್ಗೆ ತಂಡವು ಡಾರ್ಕ್ ನೆಟ್ ನಲ್ಲಿ ಜಾಹೀರಾತುಗಳನ್ನು ನೀಡುತ್ತದೆ ಎನ್ನುವುದನ್ನು ವಿಚಾರಣೆಯ ವೇಳೆ ಮಾದಕವಸ್ತು ನಿಯಂತ್ರಣ ಸಂಸ್ಥೆ ಕಂಡುಕೊಂಡಿದೆ. ಮಂಗಳವಾರ ವಶಪಡಿಸಿಕೊಳ್ಳಲಾದ 15,000 ಎಲ್ಎಸ್ಡಿ ಬ್ಲಾಟ್ ಗಳ ಬೆಲೆ ಸುಮಾರು 10.50 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ಇದು ಹೇಗೆ ಕಾರ್ಯಾಚರಿಸುತ್ತದೆ?

ಮಾದಕವಸ್ತು ವಿತರಣಾ ತಂಡದ ಪ್ರತಿನಿಧಿಯೊಬ್ಬ ಇನ್ಸ್ಟಾಗ್ರಾಮ್ನಲ್ಲಿ ಜನರನ್ನು ಸಂಪರ್ಕಿಸಿ, ಮಾದಕವಸ್ತು ಬೇಕಾ ಎಂದು ಕೇಳುತ್ತಾನೆ. ಜನರು ಆಸಕ್ತಿ ವ್ಯಕ್ತಪಡಿಸಿದರೆ, ಬಳಿಕ ಸಂಭಾಷಣೆಯು ಖಾಸಗಿ ಮೆಸೇಜಿಂಗ್ ಆ್ಯಪ್ ‘ವಿಕರ್ ಮೀ’ ವರ್ಗಾವಣೆಯಾಗುತ್ತದೆ. ಬಳಿಕ ಹಣವನ್ನು ಕ್ರಿಪ್ಟೊಕರೆನ್ಸಿಯಲ್ಲಿ ಪಾವತಿಸಲಾಗುತ್ತದೆ. ಬಳಿಕ ತಂಡದ ಒಬ್ಬ ಪ್ರತಿನಿಧಿ ಮಾದಕವಸ್ತುವನ್ನು ಗ್ರಾಹಕರಿಗೆ ತಲುಪಿಸುತ್ತಾನೆ.

ಎಲ್ಎಸ್ಡಿಯನ್ನು ಮುಖ್ಯವಾಗಿ ನೆದರ್ಲ್ಯಾಂಡ್ಸ್ ಅಥವಾ ಪೋಲ್ಯಾಂಡ್ನಿಂದ ಆಮದು ಮಾಡಿಕೊಳ್ಳಲಾಗುತ್ತದೆ.

share
Next Story
X