Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಯಿ ಮಾಂಸ ಸೇವನೆ ನಿಷೇಧ ಆದೇಶವನ್ನು...

ನಾಯಿ ಮಾಂಸ ಸೇವನೆ ನಿಷೇಧ ಆದೇಶವನ್ನು ರದ್ದುಪಡಿಸಿದ ಗುವಾಹಟಿ ಹೈಕೋರ್ಟ್

6 Jun 2023 5:29 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನಾಯಿ ಮಾಂಸ ಸೇವನೆ ನಿಷೇಧ ಆದೇಶವನ್ನು ರದ್ದುಪಡಿಸಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ನಾಯಿ ಮಾಂಸದ ಮಾರಾಟದ ಮೇಲೆ ಸಾರಾಸಗಟು ನಿಷೇಧ ಹೇರುವ 2020ರ ನಾಗಾಲ್ಯಾಂಡ್ ಸರಕಾರದ ಆದೇಶವನ್ನು ಗೌಹಾಟಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

ಆದೇಶವು ‘‘ನಾಯಿಗಳ ವಾಣಿಜ್ಯಿಕ ಆಮದು ಮತ್ತು ವ್ಯಾಪಾರವನ್ನು, ನಾಯಿ ಮಾರುಕಟ್ಟೆಯನ್ನು; ಹಾಗೂ ಮಾರುಕಟ್ಟೆಗಳಲ್ಲಿ ನಾಯಿ ಮಾಂಸದ ವಾಣಿಜ್ಯಿಕ ಮಾರಾಟ ಮತ್ತು ರೆಸ್ಟೋರೆಂಟ್ ಗಳಲ್ಲಿ ನಾಯಿ ಮಾಂಸದ ಖಾದ್ಯಗಳನ್ನು ನಿಷೇಧಿಸುತ್ತದೆ’’. ನಾಯಿ ಮಾಂಸವನ್ನು ನಿಷೇಧಿಸುವ ನಿರ್ಧಾರಕ್ಕೆ ನಾಗಾಲ್ಯಾಂಡ್ ನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ವಿಶೇಷವಾಗಿ, ತಮ್ಮ ಸಾಂಪ್ರದಾಯಿಕ ಕಾನೂನು ಮತ್ತು ಸಾಮಾಜಿಕ ಆಚರಣೆಗಳನ್ನು ಅನುಸರಿಸುವ ಮತ್ತು ಅವುಗಳನ್ನು ಸಂರಕ್ಷಿಸಿಕೊಂಡು ಬರುವ ಹಕ್ಕನ್ನು ನಾಗಾ ಬುಡಕಟ್ಟು ಪಂಗಡಗಳಿಗೆ ನೀಡುವ ಸಂವಿಧಾನದ 371(ಎ) ವಿಧಿಯನ್ನು ನಿಷೇಧವು ಉಲ್ಲಂಘಿಸುತ್ತದೆ ಎಂದು ಹೇಳಲಾಗಿತ್ತು.

2011ರ ಆಹಾರ ಸುರಕ್ಷತೆ ಮತ್ತು ಮಾನದಂಡ ನಿಯಂತ್ರಣದಲ್ಲಿ, ನಾಯಿ ಮಾಂಸ ಸೇವನೆ ಬಗ್ಗೆ ಏನೂ ಹೇಳಲಾಗಿಲ್ಲ ಎಂದು ತನ್ನ ತೀರ್ಪಿನಲ್ಲಿ ಗೌಹಾಟಿ ಹೈಕೋರ್ಟ್ ಹೇಳಿದೆ.

‘‘ಇದೇನೂ ಅಚ್ಚರಿಯ ಸಂಗತಿಯಲ್ಲ. ಯಾಕೆಂದರೆ, ಈಶಾನ್ಯದ ರಾಜ್ಯಗಳ ಕೆಲವು ಭಾಗಗಳಲ್ಲಿ ಮಾತ್ರ ನಾಯಿ ಮಾಂಸವನ್ನು ಸೇವಿಸಲಾಗುತ್ತದೆ ಮತ್ತು ದೇಶದ ಇತರ ಭಾಗಗಳಲ್ಲಿ ನಾಯಿ ಮಾಂಸವನ್ನು ಸೇವಿಸುವ ಕಲ್ಪನೆಯೇ ಅಪ್ರಸ್ತುತವಾಗಿದೆ’’ ಎಂದು ನ್ಯಾಯಾಲಯ ಹೇಳಿತು.

ನಾಗಾಲ್ಯಾಂಡ್ ನಲ್ಲಿ ಕೆಲವು ಬುಡಕಟ್ಟು ಪಂಗಡಗಳು ನಾಯಿ ಮಾಂಸವನ್ನು ಸೇವಿಸುತ್ತವೆ ಎನ್ನುವುದನ್ನು ಒಪ್ಪದಿರಲು ಯಾವುದೇ ಕಾರಣಗಳಿಲ್ಲ. ಇದು ಹಲವು ಪುಸ್ತಕಗಳಲ್ಲೂ ದಾಖಲಾಗಿದೆ ಎಂದು ಹೈಕೋರ್ಟ್ ಹೇಳಿತು.

‘‘ನಾಯಿ ಮಾಂಸವು ವೈದ್ಯಕೀಯ ಗುಣಗಳನ್ನು ಹೊಂದಿದೆ ಎಂಬ ನಂಬಿಕೆಯೂ ಇದೆ. ನಾಯಿ ಮಾಂಸದ ಸೇವನೆಯು ಒಪ್ಪಿತ ಸಂಪ್ರದಾಯ ಎಂಬಂತೆ ಕಂಡುಬರುತ್ತದೆ. ಆಧುನಿಕ ಕಾಲದಲ್ಲೂ ನಾಯಿ ಮಾಂಸವು ನಾಗಾ ಜನರ ಆಹಾರವಾಗಿದೆ ಎಂಬಂತೆ ಕಾಣುತ್ತದೆ. ಅರ್ಜಿದಾರರು ನಾಯಿಗಳನ್ನು ಸಾಗಿಸುವ ಮತ್ತು ನಾಯಿ ಮಾಂಸವನ್ನು ಮಾರಾಟ ಮಾಡುವ ಮೂಲಕ ತಮ್ಮ ಜೀವನೋಪಾಯ ಸಂಪಾದಿಸುತ್ತಾರೆ’’ ಎಂದು ನ್ಯಾಯಾಲಯ ಹೇಳಿತು.

ನಾಗಾಲ್ಯಾಂಡ್ ನಲ್ಲಿ ನಾಯಿಗಳ ಅವ್ಯಾಹತ ಹತ್ಯೆ ಮತ್ತು ಅವುಗಳ ಮಾಂಸ ಸೇವನೆ ಬಗ್ಗೆ ಲೋಕಸಭಾ ಸಂಸದೆ ಹಾಗೂ ಪ್ರಾಣಿ ಹಕ್ಕುಗಳ ಹೋರಾಟಗಾರ್ತಿ ಮನೇಕಾ ಗಾಂಧಿ ಕಳವಳ ವ್ಯಕ್ತಪಡಿಸಿದ ಬಳಿಕ ನಾಯಿ ಮಾಂಸ ಸೇವನೆಗೆ ನಿಷೇಧ ವಿಧಿಸಲಾಗಿತ್ತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X