Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೆಡಗೇವಾರ್ ಸೇರಿದಂತೆ ಹಲವು ವಿವಾದಾತ್ಮಕ...

ಹೆಡಗೇವಾರ್ ಸೇರಿದಂತೆ ಹಲವು ವಿವಾದಾತ್ಮಕ ಪಠ್ಯಗಳಿಗೆ ಕತ್ತರಿ ಹಾಕಲು ಕಾಂಗ್ರೆಸ್‌ ಸರ್ಕಾರ ಚಿಂತನೆ

7 Jun 2023 8:04 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಹೆಡಗೇವಾರ್ ಸೇರಿದಂತೆ ಹಲವು ವಿವಾದಾತ್ಮಕ ಪಠ್ಯಗಳಿಗೆ ಕತ್ತರಿ ಹಾಕಲು ಕಾಂಗ್ರೆಸ್‌ ಸರ್ಕಾರ ಚಿಂತನೆ

ಬೆಂಗಳೂರು: ಬೆಂಗಳೂರು: ಮಧು ಬಂಗಾರಪ್ಪ ನೇತೃತ್ವದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕಳೆದ ಅವಧಿಯಲ್ಲಿ ಬಿಜೆಪಿ ಸರ್ಕಾರವು ಶಾಲಾ ಪಠ್ಯದಲ್ಲಿ ಅಳವಡಿಸಿದ್ದ ಆರೆಸ್ಸೆಸ್ ಸಂಸ್ಥಾಪಕ ಕೆ.ಬಿ. ಹೆಡಗೇವಾರ್ ಪಠ್ಯ ಸೇರಿದಂತೆ ಹಲವು ವಿವಾದಾತ್ಮಕ ಪಠ್ಯಗಳನ್ನು ತೆಗೆದುಹಾಕಲು ಯೋಜಿಸುತ್ತಿದೆ ಎಂದು ಇಲಾಖೆ ಮೂಲಗಳು ಹೇಳಿವೆ ಎಂದು ವರದಿಯಾಗಿದೆ.

ಪ್ರಸ್ತಾವಿತ ಬದಲಾವಣೆಗಳು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಅನ್ವಯವಾಗಲಿದ್ದು, ಇನ್ನೊಂದು ವಾರದಲ್ಲಿ ಶಾಲೆಗಳಿಗೆ ಈ ಬಗ್ಗೆ ಸುತ್ತೋಲೆ ಹೊರಡಿಸಿ, ಕೈಬಿಡಲಾದ ಪಾಠಗಳನ್ನು ಮಕ್ಕಳಿಗೆ ಬೋಧಿಸದಂತೆ ಶಿಕ್ಷಕರಿಗೆ ಸೂಚಿಸಲಾಗುವುದು ಎಂದು ಹೇಳಲಾಗಿದೆ.

ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಮಾಜಿ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ, ಹಿರಿಯ ಶಿಕ್ಷಣಾಧಿಕಾರಿ ನಿರಂಜನಾರಾಧ್ಯ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಹೆಡಗೇವಾರ್ ಮಾತ್ರವಲ್ಲದೆ, ಹಿಂದುತ್ವ ಪ್ರತಿಪಾದಕ ಚಕ್ರವರ್ತಿ ಸೂಲಿಬೆಲೆ ಮತ್ತು ಬನ್ನಂಜೆ ಗೋವಿಂದಾಚಾರ್ಯ ಬರೆದ ಪಾಠಗಳನ್ನು ಕೈಬಿಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಸಮಾಜ ವಿಜ್ಞಾನ ಪುಸ್ತಕಗಳಲಿರುವ ಕೆಲವು ಅವಹೇಳನಕಾರಿ ವಿಷಯಗಳನ್ನು ಕೂಡಾ ತೆಗೆದುಹಾಕಲು ನಾವು ಶಿಫಾರಸು ಮಾಡುತ್ತೇವೆ ಎಂದು ಸಭೆಯಲ್ಲಿ ಉಪಸ್ಥಿತರಿದ್ದವರು ಹೇಳಿರುವುದಾಗಿ ಮೂಲವೊಂದು ತಿಳಿಸಿದೆ.

ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯವನ್ನು ಮಂಡಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಲಪಂಥೀಯ ಬರಹಗಾರ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯ ಅಡಿಯಲ್ಲಿ ಹಿಂದಿನ ಬಿಜೆಪಿ ಆಡಳಿತವು ಶಾಲಾ ಪಠ್ಯಪುಸ್ತಕಗಳಲ್ಲಿ ಮಾಡಿದ ಬದಲಾವಣೆಗಳನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. 

ಮುಂದಿನ ಶೈಕ್ಷಣಿಕ ವರ್ಷಕ್ಕೆ ಹೊಸ ಪಠ್ಯಪುಸ್ತಕಗಳನ್ನು ರೂಪಿಸಲು ತಜ್ಞರ ಸಮಿತಿ ರಚನೆ ಮಾಡುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಸಮಿತಿಯನ್ನು ರಚಿಸುವ ಮೊದಲು ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಕುರಿತು ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ತಜ್ಞರು ಸರ್ಕಾರವನ್ನು ಕೇಳಿದ್ದಾರೆ. 

"ಹೊಸ ಪಠ್ಯಪುಸ್ತಕಗಳನ್ನು ರೂಪಿಸುವ ಸಮಯ ಇದು. ಆದರೆ ಅದಕ್ಕಾಗಿ ಎನ್‌ಇಪಿಯನ್ನು ಉಳಿಸಿಕೊಳ್ಳಬೇಕೆ ಅಥವಾ ಬೇಡವೇ ಎಂಬುದರ ಕುರಿತು ಸರ್ಕಾರವು ತನ್ನ ನಿಲುವಿನಲ್ಲಿ ಸ್ಪಷ್ಟವಾಗಿರಬೇಕು" ಎಂದು ತಜ್ಞರು ಹೇಳಿರುವುದಾಗಿ ಮೂಲಗಳು ತಿಳಿಸಿದೆ.

ಸಿದ್ದರಾಮಯ್ಯ ಸಿಎಂ ಆದ ಬೆನ್ನಲ್ಲೇ ಕೆ.ಮರುಳಸಿದ್ದಪ್ಪ, ಎಸ್.ಜಿ.ಸಿದ್ದರಾಮಯ್ಯ, ವಸುಂಧರಾ ಭೂಪತಿ ಸೇರಿದಂತೆ ಹಲವು ಚಿಂತಕರ ಗುಂಪು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಹಿಂದಿನ ಬಿಜೆಪಿ ಆಡಳಿತದಿಂದ ಪರಿಷ್ಕರಿಸಿದ ಪಠ್ಯಪುಸ್ತಕಗಳನ್ನು ಹಿಂತೆಗೆದುಕೊಳ್ಳುವಂತೆ ಹೊಸ ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X