Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡು: ‌ದಲಿತರ ಪ್ರವೇಶಕ್ಕೆ...

ತಮಿಳುನಾಡು: ‌ದಲಿತರ ಪ್ರವೇಶಕ್ಕೆ ನಿರಾಕರಣೆ; ದೇವಸ್ಥಾನ ಸೀಲ್‌ ಮಾಡಿದ ಅಧಿಕಾರಿಗಳು

7 Jun 2023 6:34 PM IST
share
ತಮಿಳುನಾಡು: ‌ದಲಿತರ ಪ್ರವೇಶಕ್ಕೆ ನಿರಾಕರಣೆ; ದೇವಸ್ಥಾನ ಸೀಲ್‌ ಮಾಡಿದ ಅಧಿಕಾರಿಗಳು

ವಿಲ್ಲುಪುರಂ: ತಮಿಳುನಾಡಿನ ವಿಲ್ಲಪುರಂ ಜಿಲ್ಲೆಯ ಮೇಲ್ಪತ್ತಿ ಎಂಬ ಗ್ರಾಮದಲ್ಲಿನ ಧರ್ಮರಾಜ ದ್ರೌಪದಿ ಅಮ್ಮನ್‌ ದೇವಸ್ಥಾನಕ್ಕೆ ದಲಿತರ ಪ್ರವೇಶಕ್ಕೆ ಅಲ್ಲಿನ ವಣ್ಣಿಯಾರ್‌ ಸಮುದಾಯ ಆಕ್ಷೇಪಿಸಿರುವುದರಿಂದ  ಎರಡೂ ಸಮುದಾಯಗಳ ನಡುವೆ ಹಲವು ಸುತ್ತಿನ ಶಾಂತಿ ಮಾತುಕತೆಗಳು ಫಲಪ್ರದವಾಗದೇ ಇರುವ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಈ ದೇವಸ್ಥಾನವನ್ನು ವಿಲ್ಲುಪುರಂ ಜಿಲ್ಲಾ ಕಂದಾಯ ವಿಭಾಗಾಧಿಕಾರಿ ಸೀಲ್‌ ಮಾಡಿದ್ದಾರೆ ಎಂದು thenewsminute.com ವರದಿ ಮಾಡಿದೆ.

ಗ್ರಾಮದಲ್ಲಿ 2000ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದ್ದು, ನೆರೆಯ ಗ್ರಾಮಗಳಲ್ಲೂ ಸುರಕ್ಷತೆಯನ್ನು ಹೆಚ್ಚಿಸಲಾಗಿದೆ.

ಸುಮಾರು ಏಳು ಸುತ್ತಿನ ಮಾತುಕತೆಗಳನ್ನು  ಜಿಲ್ಲಾಡಳಿತ ನಡೆಸಿದರೂ ವಣ್ಣಿಯಾರ್‌ ಸಮುದಾಯವು ದೇವಸ್ಥಾನಕ್ಕೆ ದಲಿತರ ಪ್ರವೇಶಕ್ಕೆ ನಿರಾಕರಿಸಿತ್ತು. ಎರಡು ಸಭೆಗಳ ನೇತೃತ್ವವವನ್ನು ವಿಲ್ಲುಪುರಂ ಜಿಲ್ಲಾ ಕಲೆಕ್ಟರ್‌ ಸಿ ಪಳನಿ ವಹಿಸಿದ್ದರೆ ಉಳಿದ ಐದು ಸಭೆಗಳ ಅಧ್ಯಕ್ಷತೆಯನ್ನು ರವಿಚಂದ್ರನ್‌ ವಹಿಸಿದ್ದರು.

ಈ ದೇವಸ್ಥಾನ ತಮ್ಮ  ಸಮುದಾಯದ ದೇವಸ್ಥಾನವಾಗಿದ್ದು ಹಾಗೂ ಈ ದೇವರನ್ನು ತಮ್ಮ ಸಮುದಾಯದ ಜನರು ಮಾತ್ರ ತಲೆತಲಾಂತರಗಳಿಂದ ಆರಾಧಿಸಿಕೊಂಡು ಬಂದಿದ್ದಾರೆ ಈ ದೇವಸ್ಥಾನ ಹಿಂದು ಧಾರ್ಮಿಕ ದತ್ತಿ ಇಲಾಖೆಯ ನಿಯಂತ್ರಣದಡಿ ಬರುವುದಿಲ್ಲ ಎಂದೂ ಹೇಳಿಕೊಂಡಿರುವ ವಣ್ಣಿಯಾರ್‌ ಸಮುದಾಯ ಈ ದೇವಳದ ಆಡಳಿತದಲ್ಲಿ ಸರ್ಕಾರದ ಹಸ್ತಕ್ಷೇಪಕ್ಕೆ ಆಕ್ಷೇಪಿಸಿದೆ.

ಈ ದೇವಸ್ಥಾನಕ್ಕೆ ದಲಿತರ ಪ್ರವೇಶಕ್ಕೆ ಅನುಕೂಲ ಕಲ್ಪಿಸಬೇಕೆಂದು ಮೇ 17ರಂದು ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ ನಂತರ ವಣ್ಣಿಯಾರ್‌ ಸಮುದಾಯ ಪ್ರತಿಭಟನೆ ನಡೆಸಿತ್ತಲ್ಲದೆ ತಮ್ಮ ಆಕ್ರೋಶ ಹೊರಹಾಕಲು ಸಮುದಾಯದ ಮಂದಿ ತಮ್ಮ ಆಧಾರ್‌, ಮತದಾರ ಐಡಿ ಮತ್ತು ರೇಷನ್‌ ಕಾರ್ಡುಗಳನ್ನು ಎಸೆದಿದ್ದರು.
ಎಪ್ರಿಲ್‌ 7ರಂದು ದೇವಸ್ಥಾನ ಪ್ರವೇಶಿಸಿದ ಕೆಲ ದಲಿತ ವ್ಯಕ್ತಿಗಳನ್ನು ವಣ್ಣಿಯಾರ್‌ ಸಮುದಾಯಕ್ಕೆ ಸೇರಿದವರು ಥಳಿಸಿದ ನಂತರ ವಿವಾದ ತೀವ್ರ ಸ್ವರೂಪಕ್ಕೆ ತಿರುಗಿತ್ತು.

share
Next Story
X