Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜೂ.10ರಿಂದ ಅ.31ರವರೆಗೆ ಮಾನ್ಸೂನ್...

ಜೂ.10ರಿಂದ ಅ.31ರವರೆಗೆ ಮಾನ್ಸೂನ್ ವೇಳಾಪಟ್ಟಿ: ಮಳೆಗಾಲದಲ್ಲಿ ಸುರಕ್ಷಿತ ಸಂಚಾರಕ್ಕೆ ಸಜ್ಜುಗೊಂಡ ಕೊಂಕಣ ರೈಲ್ವೆ

7 Jun 2023 2:46 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಜೂ.10ರಿಂದ ಅ.31ರವರೆಗೆ ಮಾನ್ಸೂನ್ ವೇಳಾಪಟ್ಟಿ: ಮಳೆಗಾಲದಲ್ಲಿ ಸುರಕ್ಷಿತ ಸಂಚಾರಕ್ಕೆ ಸಜ್ಜುಗೊಂಡ ಕೊಂಕಣ ರೈಲ್ವೆ

ಉಡುಪಿ, ಜೂ.7: ಮುಂಗಾರು ಈ ಬಾರಿ ಕರ್ನಾಟಕದ ಕರಾವಳಿಗೆ ಪ್ರವೇಶಿಸಲು ಮೀನಮೇಷ ಎಣಿಸುತ್ತಿದ್ದರೂ, ಮಳೆಗಾಲದಲ್ಲಿ ಉಂಟಾಗುವ ವಿವಿಧ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಕೊಂಕಣ ರೈಲ್ವೆ ಈಗಾಗಲೇ  ಸಜ್ಜಾಗಿದೆ. ಕೊಂಕಣ ರೈಲ್ವೆಯ 740ಕಿ.ಮೀ. ಮಾರ್ಗದುದ್ದಕ್ಕೂ ಅನೇಕ ಸುರಕ್ಷತಾ ಕ್ರಮಗಳ ಯೋಜನೆಯನ್ನು ಅದು ಪೂರ್ಣಗೊಳಿಸಿದೆ.

ಕೇಂದ್ರ ರೈಲ್ವೆಗೆ ಸೇರಿದ ರೋಹಾದಿಂದ ಸ್ವಲ್ಪ ಮುಂದಿನ ಕೊಲಾಡ್‌ನಿಂದ ಮಂಗಳೂರು ನಿಲ್ದಾಣದಿಂದ ಸ್ವಲ್ಪ ಹಿಂದಿರುವ ತೋಕೂರುವರೆಗಿನ ಮಾರ್ಗ ಕೊಂಕಣ ರೈಲ್ವೆ ಅಡಿಯಲ್ಲಿ ಬರುತ್ತದೆ. ಈ ಮಾರ್ಗದಲ್ಲಿ ಮಳೆಗಾಲದ ಸಮಯದಲ್ಲಿ ಭೂಕುಸಿತ, ಗುಡ್ಡ ಜರಿಯುವುದು, ಬಂಡೆ ಹಳಿಗೆ ಬಡಿಯುವುದು, ಸುರಂಗದಲ್ಲಿ ತಡೆಯುಂಟಾಗು ವುದು ಸರ್ವೆಸಾಮಾನ್ಯ ಎನಿಸಿಕೊಂಡಿತ್ತು.

ಆದರೆ ಈಚಿನ ವರ್ಷಗಳಲ್ಲಿ ಇಂಥ ಎಲ್ಲಾ ಸಮಸ್ಯೆಗಳ ಕುರಿತು ಮೊದಲೇ ಯೋಚಿಸಿ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಚರಂಡಿಯಲ್ಲಿ ನೀರು ಸರಾಗವಾಗಿ ಹರಿದುಕೊಂಡು ಹೋಗಲು ಅವುಗಳನ್ನು ಸ್ವಚ್ಛಗೊಳಿ ಸುವ ಹಾಗೂ ಮರಗಳ ಗೆಲ್ಲುಗಳನ್ನು ಕಡಿಯುವ ಕೆಲಸವನ್ನು ಕೈಗೊಳ್ಳಲಾಗಿದೆ ಎಂದು ಕೊಂಕಣ ರೈಲ್ವೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಕೊಂಕಣ ರೈಲ್ವೆ ಮಾರ್ಗದಲ್ಲಿ ಭೂಕುಸಿತ, ಮಣ್ಣು ಕುಸಿಯುವ ಸಾಧ್ಯತೆ ಇರುವ ಜಾಗಗಳನ್ನು ಗುರುತಿಸಿ ಅಲ್ಲಿ ಮಣ್ಣು ಕುಸಿಯದಂತೆ ಅವುಗಳನ್ನು ಸಮತಟ್ಟುಗೊಳಿಸಲಾಗಿದೆ. ಬಂಡೆಗಳು ಜಾರದಂತೆ ತಡೆ ಹಾಕಲಾಗಿದೆ. ಕಳೆದ ಹತ್ತು ವರ್ಷಗಳಿಂದ ಸತತವಾಗಿ ಕೈಗೊಂಡ ಕ್ರಮಗಳಿಂದ ಈಗ ರೈಲ್ವೆ ಹಳಿಗಳ ಮೇಲೆ ಬಂಡೆ ಕುಸಿಯುವ ಅಥವಾ ಭೂಕುಸಿತದ ಪ್ರಕರಣ ಭಾರೀ ಕಡಿಮೆಯಾಗಿದೆ. ಹೀಗಾಗಿ ಇತ್ತೀಚಿನ ವರ್ಷಗಳಲ್ಲಿ ಮಳೆಗಾಲದ ಸಮಯದಲ್ಲಿ ಈ ಮಾರ್ಗದಲ್ಲಿ ಸಂಚಾರಕ್ಕೆ ಹೆಚ್ಚು ತೊಂದರೆ ಎದುರಾಗಿರಲಿಲ್ಲ ಎಂದು ಹೇಳಿಕೆ ತಿಳಿಸಿದೆ.

ಮಳೆಗಾಲದ ಸಮಯದಲ್ಲಿ ಕೊಂಕಣ ರೈಲ್ವೆಗಳ ಸುರಕ್ಷಿತ ಪ್ರಯಾಣಕ್ಕಾಗಿ ದಿನದ 24 ಗಂಟೆಗಳ ಕಾಲವೂ  ಹಳಿಗಳುದ್ದಕ್ಕೂ ‘ಮಾನ್ಸೂನ್ ಪೆಟ್ರೋಲಿಂಗ್’ (ಮಳೆಗಾಲದ ಗಸ್ತು) ನಡೆಯುತ್ತಿದೆ. ಕೊಲಾಡ್‌ನಿಂದ ತೋಕೂರು ವರೆಗೆ ಸುಮಾರು 673 ಮಂದಿ ಗಾರ್ಡ್‌ಗಳು ಹಳಿಗಳ ಕಾಯುವಿಕೆಗೆ ನೇಮಕಗೊಂಡಿದ್ದಾರೆ. ಅಪಾಯದ ಶಂಕೆ ಇರುವ ಜಾಗಗಳಲ್ಲಿ ನೇಮಕಗೊಂಡ ಸ್ಥಳೀಯ ವಾಚ್‌ಮನ್ 24 ಗಂಟೆಯೂ ಕಾಯುವ ವ್ಯವಸ್ಥೆ ಇದೆ. 

ಅಲ್ಲದೇ ಇಂಥ ಸ್ಥಳಗಳಲ್ಲಿ ಮಳೆಗಾಲದ ಅವಧಿಯಲ್ಲಿ ರೈಲುಗಳ ವೇಗದಲ್ಲಿ ಗಣನೀಯ ಕಡಿತ ಮಾಡಲಾಗುತ್ತದೆ. ಇದಕ್ಕಾಗಿ ವೇಳಾಪಟ್ಟಿಯಲ್ಲಿ ಬದಲಾವಣೆಯನ್ನು ಘೋಷಿಸಲಾಗುತ್ತದೆ. ತುರ್ತು ಸಂದರ್ಭಗಳಲ್ಲಿ ತ್ವರಿತಗತಿಯ ಸಂಚಾರಕ್ಕಾಗಿ ಮಣ್ಣು ಬದಿಗೆ ಸರಿಸುವ ಯಂತ್ರವನ್ನು ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ. 

ಕೊಂಕಣ ರೈಲ್ವೆ ಪ್ರದೇಶಗಳಲ್ಲಿ ಜೋರಾಗಿ ಮಳೆ ಸುರಿಯುತಿದ್ದು, ದೂರದ ವೀಕ್ಷಣೆ ಕಷ್ಟವೆನಿಸಿದರೆ ರೈಲುಗಳನ್ನು ಗರಿಷ್ಠ 40ಕಿ.ಮೀ. ವೇಗದಲ್ಲಿ ಓಡಿಸುವಂತೆ ಲೋಕೊ ಪೈಲಟ್‌ಗಳಿಗೆ ಸೂಚನೆಗಳನ್ನು ನೀಡಲಾಗಿದೆ. ರತ್ನಗಿರಿ ಮತ್ತು ವರ್ನೆ ನಿಲ್ದಾಣಗಳಲ್ಲಿ ತುರ್ತು ವೈದ್ಯಕೀಯ ಸಾಮಗ್ರಿ ಹಾಗೂ ತಾತ್ಕಾಲಿಕ ಆಪರೇಷನ್ ಥಿಯೇಟರ್‌ನ್ನು ಒಳಗೊಂಡ ಅಪಘಾತ ಪರಿಹಾರ ವೈದ್ಯಕೀಯ ವಾಹನ (ಎಆರ್‌ಎಂವಿ)ವನ್ನು ಸಜ್ಜಾಗಿರಿಸಲಾಗಿದೆ. ಅಲ್ಲದೇ ವರ್ನೆಯಲ್ಲಿ ಆ್ಯಕ್ಸಿಡಿಂಟ್ ರಿಲೀಫ್ ಟ್ರೈನ್‌ನ್ನು ಸನ್ನದ್ಧವಾಗಿರಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ. 

ಕೊಂಕಣ ರೈಲ್ವೆ ವತಿಯಿಂದ ಸ್ಟೇಶನ್ ಮಾಸ್ಟರ್ಸ್‌ಗಳಿಗೆ, ಲೋಕೊ ಪೈಲೆಟ್‌ಗಳಿಗೆ ಹಾಗೂ ಗಾರ್ಡ್ ಸೇರಿದಂತೆ ಇತರ ಸ್ಥಳೀಯ ಸುರಕ್ಷತಾ ಅಧಿಕಾರಿಗಳಿಗೆ ಮೊಬೈಲ್ ಫೋನ್‌ಗಳು ನೀಡಲಾಗಿದೆ. ಅಲ್ಲದೇ ಗಾರ್ಡ್ ಗಳಿಗೆ ಮತ್ತು ಲೋಕೊ ಪೈಲೆಟ್‌ಗಳಿಗೆ ವಾಕಿ-ಟಾಕಿ ಸಹ ನೀಡಲಾಗಿದೆ. ಅಲ್ಲದೇ ಪ್ರತಿಯೊಂದು ಸ್ಟೇಶನ್‌ಗಳಲ್ಲಿ 25 ವ್ಯಾಟ್ ವಿಎಚ್‌ಎಫ್ ಸ್ಟೇಶನ್‌ಗಳನ್ನು ಸ್ಥಾಪಿಸಲಾಗಿದೆ. ಇದರಿಂದ ರೈಲಿನಲ್ಲಿರುವ ಸಿಬ್ಬಂದಿ ಮತ್ತು ಸ್ಟೇಶನ್ ಮಾಸ್ಟರ್ ನಡುವೆ ವಯರ್‌ಲೆಸ್ ಸಂದೇಶಗಳ ವಿನಿಮಯ ಸಾಧ್ಯವಾಗಲಿದೆ. ಪ್ರತಿಯೊಂದು ಎಆರ್‌ಎಂವಿಗೆ ಸೆಟಲೈಟ್ ಫೋನ್ ಸಂಪರ್ಕವನ್ನು ಒದಗಿಸಲಾಗಿದೆ.

ಅಲ್ಲದೇ ಕೊಂಕಣ ರೈಲ್ವೆ ಮಾರ್ಗದ ಪ್ರತಿ ಒಂದು ಕಿ.ಮೀ. ದೂರದಲ್ಲಿ ತುರ್ತು ಸಂಪರ್ಕ (ಇಎಂಸಿ) ಸಾಕೆಟ್‌ ಗಳನ್ನು ಅಳವಡಿಸಲಾಗಿದ್ದು, ಇದರಿಂದ ಪೆಟ್ರೋಲ್‌ಮೆನ್, ವಾಚ್‌ಮೆನ್, ಲೋಕೊ ಪೈಲೆಟ್, ಗಾರ್ಡ್ ಹಾಗೂ ಇತರ ಸಿಬ್ಬಂದಿಗಳ ನಡುವೆ ತುರ್ತು ಸಂದರ್ಭದಲ್ಲಿ ನೇರ ಸಂಪರ್ಕ ಸಾಧ್ಯವಾಗಲಿದೆ. ಈ ಮೂಲಕ ನೇರವಾಗಿ ಪ್ರಧಾನ ಕಚೇರಿಯ ಕಂಟ್ರೋಲ್ ರೂಮನ್ನು ಸಂಪರ್ಕಿಸಬಹುದಾಗಿದೆ. 

ಕೊಂಕಣ ರೈಲ್ವೆ ಮಾರ್ಗದ ಒಂಭತ್ತು ನಿಲ್ದಾಣಗಳಲ್ಲಿ- ಮಾಂಗೋನ್, ಚಿಪ್ಳುಣ್, ರತ್ನಗಿರಿ, ವಿವಾಡೆ, ಕನಕವಾಲಿ, ಮಡಗಾಂವ್, ಕಾರವಾರ, ಭಟ್ಕಳ ಹಾಗೂ ಉಡುಪಿಗಳಲ್ಲಿ- ಸ್ವಯಂ ಆಗಿ ಮಳೆಯ ಪ್ರಮಾಣವನ್ನು ಲೆಕ್ಕಹಾಕುವ ಯಂತ್ರವನ್ನು ಅಳವಡಿಸಲಾಗಿದೆ. ಇದು ಆ ಪ್ರದೇಶಗಳಲ್ಲಿ ಬೀಳುವ ಮಳೆಯ ಪ್ರಮಾಣವನ್ನು ಅಂದಾಜಿಸಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡುತ್ತದೆ.

ಅದೇ ರೀತಿ ಪ್ರವಾಹ ಮುನ್ನೆಚ್ಚರಿಕಾ ವ್ಯವಸ್ಥೆಯನ್ನು ಮೂರು ಸೇತುವೆಗಳಿಗೆ -ಕಾಳಿ ನದಿ(ವೀರ್-ಮಂಗಾವ್ ನಡುವೆ), ಸಾವಿತ್ರಿ ನದಿ (ವೀರ್-ಸಪೆ ವಾಮನೆ) ಹಾಗೂ ವಶಿಷ್ಟ ನದಿ (ಚಿಫ್ಳುಣ್-ಕಮಟೆ ನಡುವೆ)- ಒದಗಿಸಲಾಗಿದೆ. ಇದು ನದಿಯಲ್ಲಿ ನೀರಿನ ಹರಿಯುವಿಕೆ ಅಪಾಯದ ಮಟ್ಟವನ್ನು ತಲುಪಿದಾಕ್ಷಣ ಅಧಿಕಾರಿಗಳಿಗೆ ಎಚ್ಚರಿಕೆ ನೀಡುತ್ತದೆ.

ಗಾಳಿಯ ವೇಗವನ್ನು ಅಂದಾಜಿಸಲು ಅನಿಮೋಮೀಟರ್‌ನ್ನು ನಾಲ್ಕು ಕಡೆಗಳಲ್ಲಿ -ಪನ್ವೇಲ್, ಮಾಂಡೋವಿ ಸೇತುವೆ, ಜುವಾರಿ ಸೇತುವೆ ಹಾಗೂ ಶರಾವತಿ ಸೇತುವೆ (ಹೊನ್ನಾವರ-ಮಂಕಿ ನಡುವೆ) ಬಳಿ ಅಳವಡಿಸಲಾಗಿದೆ.

ನಿಯಂತ್ರಣ ಕೊಠಡಿ: ಮೂರು ಕಂಟ್ರೋಲ್ ರೂಮುಗಳನ್ನು ಬೇಲಾಪುರ, ರತ್ನಗಿರಿ ಹಾಗೂ ಮಡಗಾಂವ್‌ಗಳಲ್ಲಿ ತೆರೆಯಲಾಗಿದ್ದು, ಇವು ಮಳೆಗಾಲದ ಅವಧಿಯಲ್ಲಿ ದಿನದ 24 ಗಂಟೆಯೂ ಕಾರ್ಯನಿರತವಾಗಿರುತ್ತವೆ. ಪ್ರಯಾಣಿಕರು ರೈಲುಗಳ ಕುರಿತ ಮಾಹಿತಿಗಾಗಿ ‘139’, ಕೊಂಕಣ ರೈಲ್ವೆಯ ಟೋಲ್‌ಫ್ರೀ ನಂ. ಆದ 18002331332ನ್ನು ಸಂಪರ್ಕಿಸಬಹುದು ಅಥವಾ -www.konkanrailway.com-ಕ್ಕೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

ಕೊಂಕಣ ರೈಲುಗಳ ಮಾನ್ಸೂನ್ ವೇಳಾ ಪಟ್ಟಿ ಜೂ.10ರಿಂದ ಅಕ್ಟೋಬರ್ 31ರವರೆಗೆ ಜಾರಿಯಲ್ಲಿರುತ್ತದೆ. ಈ ವೇಳೆ ಕೊಂಕಣ ರೈಲುಗಳಲ್ಲಿ ಪ್ರಯಾಣಿ ಸುವ ಪ್ರಯಾಣಿಕರು ರೈಲುಗಳ ಬದಲಾದ ಬರುವ ಮತ್ತು ಹೋಗುವ ಸಮಯಗಳನ್ನು ಸರಿಯಾಗಿ ಗಮನಿಸುವಂತೆ ಹೇಳಿಕೆಯಲ್ಲಿ ಕೋರಲಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X