Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾನುವಾರು ಸಾಗಾಣಿಕೆ, ಹೊಂದಿರುವುದು...

ಜಾನುವಾರು ಸಾಗಾಣಿಕೆ, ಹೊಂದಿರುವುದು ಗೋಹತ್ಯೆ ಕಾನೂನಿನಡಿ ಅಪರಾಧ ಅಲ್ಲ; ಅಲಹಾಬಾದ್ ಹೈಕೋರ್ಟ್

8 Jun 2023 8:35 AM IST
share
ಜಾನುವಾರು ಸಾಗಾಣಿಕೆ, ಹೊಂದಿರುವುದು ಗೋಹತ್ಯೆ ಕಾನೂನಿನಡಿ ಅಪರಾಧ ಅಲ್ಲ; ಅಲಹಾಬಾದ್ ಹೈಕೋರ್ಟ್

ಪ್ರಯಾಗ್‌ರಾಜ್: ಕೇವಲ ಜಾನುವಾರುಗಳನ್ನು ಹೊಂದಿರುವುದು ಅಥವಾ ಅವುಗಳ ಸಾಗಾಣಿಕೆ, ಉತ್ತರ ಪ್ರದೇಶ ಗೋಹತ್ಯೆ ತಡೆ ಕಾಯ್ದೆ- 1955ರ ಅಡಿಯಲ್ಲಿ ಅಪರಾಧ ಎನಿಸುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿ ವಿಕ್ರಮ್ ಡಿ ಚೌಹಾನ್ ಅವರು ಖುಷಿನಗರ ಜಿಲ್ಲೆಯ ಕುಂದನ್ ಯಾದವ್ ಎಂಬ ವ್ಯಕ್ತಿಗೆ ಜಾಮೀನು ಮಂಜೂರು ಮಾಡಿ, ಹಸುವಿಗೆ ಅಥವಾ ಕರುವಿಗೆ ಮಾರಣಾಂತಿಕವಾಗಿ ಗಾಯಗೊಳಿಸಿದ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ.

ವಾಹನದಲ್ಲಿ ಸಾಗಿಸುತ್ತಿದ್ದ ಆರು ಹಸುಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವ್ಯಕ್ತಿ ಕಳೆದ ಮೂರು ತಿಂಗಳಿನಿಂದ ಜೈಲಿನಲ್ಲಿದ್ದು, ಈ ಹಸುಗಳಿಗೆ ಯಾವುದೇ ದೈಹಿಕ ಗಾಯಗಳು ಕಂಡುಬಂದಿರಲಿಲ್ಲ. ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಈ ಅಭಿಪ್ರಾಯಕ್ಕೆ ಬಂದಿದ್ದಾರೆ. ಉತ್ತರ ಪ್ರದೇಶ ಗೋಹತ್ಯೆ ತಡೆ ಕಾಯ್ದೆ ಮತ್ತು ಪ್ರಾಣಿಗಳಿಗೆ ಕ್ರೌರ್ಯ ಎಸಗುವುದನ್ನು ತಡೆಯುವ ಕಾಯ್ದೆ-1960ರ ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು.

ಕುಂದನ್ ಯಾದವ್ ಜಾಮೀನು ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ, "ಕೇವಲ ಜೀವಂತ ಹಸು/ಎತ್ತನ್ನು ಹೊಂದಿರುವುದು ಗೋಹತ್ಯೆ ಕಾಯ್ದೆಯಡಿಯಲ್ಲಿ ಅಪರಾಧ, ಅಪರಾಧ ಕುಮ್ಮಕ್ಕು ಅಥವಾ ಅಪರಾಧ ಪ್ರಯತ್ನ ಎನಿಸುವುದಿಲ್ಲ. ಇದರ ಜತೆಗೆ ಉತ್ತರ ಪ್ರದೇಶದಲ್ಲಿ ಒಂದೆಡೆಯಿಂದ ಇನ್ನೊಂದು ಕಡೆಗೆ ಜಾನುವಾರುಗಳನ್ನು ಸಾಗಾಟ ಮಾಡುವುದು ಕೂಡಾ ಅಪರಾಧವಲ್ಲ. ಆದ್ದರಿಂದ ಉತ್ತರ ಪ್ರದೇಶ ರಾಜ್ಯದೊಳಗೆ ಹಸುಗಳನ್ನು ಸಾಗಾಣಿಕೆ ಮಾಡುವುದು ಕಾಯ್ದೆಯಡಿ ಅಪರಾಧ ಎನಿಸುವುದಿಲ್ಲ" ಎಂದು ಸ್ಪಷ್ಟಪಡಿಸಿದೆ.

ಜಾನುವಾರು ಸಾಗಾಣಿಕೆ, ಹೊಂದಿರುವುದು ಗೋಹತ್ಯೆ ಕಾನೂನಿನಡಿ ಅಪರಾಧ ಅಲ್ಲ; ಹೈಕೋರ್ಟ್

ಪ್ರಯಾಗ್‌ರಾಜ್: ಕೇವಲ ಜಾನುವಾರುಗಳನ್ನು ಹೊಂದಿರುವುದು ಅಥವಾ ಅವುಗಳ ಸಾಗಾಣಿಕೆ, ಉತ್ತರ ಪ್ರದೇಶ ಗೋಹತ್ಯೆ ತಡೆ ಕಾಯ್ದೆ- 1955ರ ಅಡಿಯಲ್ಲಿ ಅಪರಾಧ ಎನಿಸುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿ ವಿಕ್ರಮ್ ಡಿ ಚೌಹಾನ್ ಅವರು ಖುಷಿನಗರ ಜಿಲ್ಲೆಯ ಕುಂದನ್ ಯಾದವ್ ಎಂಬ ವ್ಯಕ್ತಿಗೆ ಜಾಮೀನು ಮಂಜೂರು ಮಾಡಿ, ಹಸುವಿಗೆ ಅಥವಾ ಕರುವಿಗೆ ಮಾರಣಾಂತಿಕವಾಗಿ ಗಾಯಗೊಳಿಸಿದ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ.

ವಾಹನದಲ್ಲಿ ಸಾಗಿಸುತ್ತಿದ್ದ ಆರು ಹಸುಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವ್ಯಕ್ತಿ ಕಳೆದ ಮೂರು ತಿಂಗಳಿನಿಂದ ಜೈಲಿನಲ್ಲಿದ್ದು, ಈ ಹಸುಗಳಿಗೆ ಯಾವುದೇ ದೈಹಿಕ ಗಾಯಗಳು ಕಂಡುಬಂದಿರಲಿಲ್ಲ. ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಈ ಅಭಿಪ್ರಾಯಕ್ಕೆ ಬಂದಿದ್ದಾರೆ. ಉತ್ತರ ಪ್ರದೇಶ ಗೋಹತ್ಯೆ ತಡೆ ಕಾಯ್ದೆ ಮತ್ತು ಪ್ರಾಣಿಗಳಿಗೆ ಕ್ರೌರ್ಯ ಎಸಗುವುದನ್ನು ತಡೆಯುವ ಕಾಯ್ದೆ-1960ರ ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು.

ಕುಂದನ್ ಯಾದವ್ ಜಾಮೀನು ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ, "ಕೇವಲ ಜೀವಂತ ಹಸು/ಎತ್ತನ್ನು ಹೊಂದಿರುವುದು ಗೋಹತ್ಯೆ ಕಾಯ್ದೆಯಡಿಯಲ್ಲಿ ಅಪರಾಧ, ಅಪರಾಧ ಕುಮ್ಮಕ್ಕು ಅಥವಾ ಅಪರಾಧ ಪ್ರಯತ್ನ ಎನಿಸುವುದಿಲ್ಲ. ಇದರ ಜತೆಗೆ ಉತ್ತರ ಪ್ರದೇಶದಲ್ಲಿ ಒಂದೆಡೆಯಿಂದ ಇನ್ನೊಂದು ಕಡೆಗೆ ಜಾನುವಾರುಗಳನ್ನು ಸಾಗಾಟ ಮಾಡುವುದು ಕೂಡಾ ಅಪರಾಧವಲ್ಲ. ಆದ್ದರಿಂದ ಉತ್ತರ ಪ್ರದೇಶ ರಾಜ್ಯದೊಳಗೆ ಹಸುಗಳನ್ನು ಸಾಗಾಣಿಕೆ ಮಾಡುವುದು ಕಾಯ್ದೆಯಡಿ ಅಪರಾಧ ಎನಿಸುವುದಿಲ್ಲ" ಎಂದು ಸ್ಪಷ್ಟಪಡಿಸಿದೆ.

share
Next Story
X