Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಯು ಹವಾಮಾನ ಶೃಂಗಸಭೆ ಆಯೋಜಿಸುವುದಕ್ಕೆ...

ಇಯು ಹವಾಮಾನ ಶೃಂಗಸಭೆ ಆಯೋಜಿಸುವುದಕ್ಕೆ ತಡೆ: ರಶ್ಯ ನಿರ್ಧಾರ

8 Jun 2023 3:19 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

ಮಾಸ್ಕೋ : ಮುಂದಿನ ವರ್ಷ ನಡೆಯಲಿರುವ ವಿಶ್ವಸಂಸ್ಥೆಯ ಅಂತರಾಷ್ಟ್ರೀಯ ಹವಾಮಾನ ಶೃಂಗಸಭೆಯನ್ನು ಯುರೋಪಿಯನ್ ಯೂನಿಯನ್(ಇಯು) ದೇಶಗಳು ಆಯೋಜಿಸದಂತೆ ತಡೆಯಲು ರಶ್ಯ ನಿರ್ಧರಿಸಿದೆ ಎಂದು ಉನ್ನತ ಮೂಲಗಳನ್ನು ಉಲ್ಲೇಖಿಸಿ ರಾಯ್ಟರ್ಸ್ ವರದಿ ಮಾಡಿದೆ.

ಇದರಿಂದ ಶೃಂಗಸಭೆಯ ಆತಿಥ್ಯ ವಹಿಸಲು ಉತ್ಸುಕತೆ ತೋರಿರುವ ಇಯು ಸದಸ್ಯ ಬಲ್ಗೇರಿಯಾಕ್ಕೆ ಹಿನ್ನಡೆಯಾಗಿದೆ. ಅಝರ್ಬೈಜಾನ್ ಮತ್ತು ಅರ್ಮೇನಿಯಾ ದೇಶಗಳೂ ಶೃಂಗಸಭೆ ಆಯೋಜನೆಗೆ ಸ್ಪರ್ಧೆಯಲ್ಲಿವೆ. ಇದೀಗ ಈ ವಿಷಯದಲ್ಲಿ ರಶ್ಯ ಮಧ್ಯಪ್ರವೇಶಿಸಿರುವುದು, ಉಕ್ರೇನ್ ಯುದ್ಧದ ನಂತರದ ಭೌಗೋಳಿಕ ರಾಜಕೀಯ ವಿವಾದಗಳು ಹವಾಮಾನ ಬದಲಾವಣೆಯನ್ನು ಎದುರಿಸುವ ಜಾಗತಿಕ ಪ್ರಯತ್ನಗಳನ್ನು ಹೇಗೆ ಸಂಕೀರ್ಣಗೊಳಿಸುತ್ತದೆ ಎಂಬುದನ್ನು ತೋರಿಸುತ್ತದೆ.

ಈ ಬೆಳವಣಿಗೆಯು ಶೃಂಗಸಭೆಯ ಆತಿಥೇಯ ರಾಷ್ಟ್ರದ ಆಯ್ಕೆಯನ್ನು ವಿಳಂಬಗೊಳಿಸುವ, ಶೃಂಗಸಭೆ ಆಯೋಜನೆಯ ಸಿದ್ಧತೆಗೆ ಕಡಿಮೆ ಸಮಯಾವಕಾಶದ ಸಮಸ್ಯೆಗೆ ಕಾರಣವಾಗಲಿದೆ.

ವಿಶ್ವಸಂಸ್ಥೆಯ ಉಸ್ತುವಾರಿಯಲ್ಲಿ ನಡೆಯುವ ಹವಾಮಾನ ಶೃಂಗಸಭೆಯನ್ನು ಆಯೋಜಿಸುವುದರಿಂದ ಆತಿಥೇಯ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿಷ್ಟೆಯ ಜತೆಗೆ, ಹವಾಮಾನ ಬದಲಾವಣೆಯನ್ನು ಎದುರಿಸಲು ದೇಶೀಯ ಪ್ರಯತ್ನಗಳನ್ನು ಉತ್ತೇಜಿಸುವ ಅವಕಾಶ ದೊರಕುತ್ತದೆ.

ಯುರೋಪಿಯನ್ ಯೂನಿಯನ್ ಸದಸ್ಯನಲ್ಲದ ಅರ್ಮೇನಿಯಾದ ಉಮೇದುವಾರಿಕೆಗೆ ರಶ್ಯದ ಬೆಂಬಲ ದೊರಕುವ ನಿರೀಕ್ಷೆಯಿದೆ. ಯುರೋಪಿಯನ್ ಯೂನಿಯನ್ ದೇಶವು ಹವಾಮಾನ ಶೃಂಗಸಭೆಯ ಆತಿಥೇಯ ವಹಿಸುವುದಕ್ಕೆ ತನ್ನ ಬೆಂಬಲವಿಲ್ಲ ಎಂದು ವಿಶ್ವಸಂಸ್ಥೆಯ ಹವಾಮಾನ ಏಜೆನ್ಸಿಯ ರಶ್ಯ ನಿಯೋಗವು ಪೂರ್ವ ಯುರೋಪಿಯನ್ ದೇಶಗಳಿಗೆ ಕಳೆದ ತಿಂಗಳು ಇ-ಮೇಲ್ ರವಾನಿಸಿದೆ.

ರಾಜಕೀಯ ಪ್ರೇರಿತ ನಿರ್ಧಾರ ಕೈಗೊಳ್ಳುವ ಯುರೋಪಿಯನ್ ಯೂನಿಯನ್ ಸದಸ್ಯ ದೇಶಗಳು ಜಾಗತಿಕ ಹವಾಮಾನ ಶೃಂಗಸಭೆಯಲ್ಲಿ ಪ್ರಾಮಾಣಿಕ, ನಿಷ್ಪಕ್ಷಪಾತ ಮತ್ತು ಪರಿಣಾಮಕಾರಿ ನಿರ್ಧಾರ ಕೈಗೊಳ್ಳುತ್ತವೆ ಎಂಬುದನ್ನು ಖಂಡಿತಾ ನಿರೀಕ್ಷಿಸಲಾಗದು ಎಂದು ರಶ್ಯ ಪ್ರತಿಪಾದಿಸಿದೆ

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X