Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತೀಯ ಕರಾವಳಿಯಿಂದ ದೂರ ಸಾಗುತ್ತಿರುವ...

ಭಾರತೀಯ ಕರಾವಳಿಯಿಂದ ದೂರ ಸಾಗುತ್ತಿರುವ ‘ಬಿಪರ್ಜಾಯ್’ ಚಂಡಮಾರುತ

8 Jun 2023 9:18 PM IST
share
ಭಾರತೀಯ ಕರಾವಳಿಯಿಂದ ದೂರ ಸಾಗುತ್ತಿರುವ ‘ಬಿಪರ್ಜಾಯ್’ ಚಂಡಮಾರುತ

ಹೊಸದಿಲ್ಲಿ: ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ಚಂಡಮಾರುತ ‘ಬಿಪರ್ಜಾಯ್’ ಮುಂದಿನ ಮೂರು ದಿನಗಳಲ್ಲಿ ಪ್ರಬಲಗೊಳ್ಳಲಿದೆ. ಆದರೆ ಅದು ಉತ್ತರ-ವಾಯುವ್ಯ ದಿಕ್ಕಿನತ್ತ ಸಾಗುತ್ತಿದ್ದು ಭಾರತೀಯ ಕರಾವಳಿಯಿಂದ ದೂರವೇ ಉಳಿಯಲಿದೆ.

ಸಮುದ್ರದ ತಾಪಮಾನವನ್ನು ಬಳಸಿಕೊಂಡು ಚಂಡಮಾರುತವು ತನ್ನ ಶಕ್ತಿಯನ್ನು ವೇಗವಾಗಿ ವೃದ್ಧಿಸಿಕೊಳ್ಳುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

‘‘ಭಾರತದ ಕರಾವಳಿ ಪ್ರದೇಶಗಳ ಮೇಲೆ ಅದು ಯಾವುದೇ ನೇರ ಪರಿಣಾಮವನ್ನು ಬೀರುವುದನ್ನು ನಾವು ನಿರೀಕ್ಷಿಸುತ್ತಿಲ್ಲ. ಇತ್ತೀಚಿನ ಮುನ್ನೆಚ್ಚರಿಕೆಯ ಪ್ರಕಾರ, ಚಂಡಮಾರುತವು ಉತ್ತರ-ವಾಯುವ್ಯ ದಿಕ್ಕಿನತ್ತ, ಅಂದರೆ ಭಾರತೀಯ ಕರಾವಳಿಯಿಂದ ದೂರಕ್ಕೆ ಸಾಗುತ್ತಿದೆ. ಅದು ಭಾರತೀಯ ಕರಾವಳಿಯತ್ತ ಬರುವ ಸೂಚನೆ ಸದ್ಯಕ್ಕಿಲ್ಲ’’ ಎಂದು ಪುಣೆಯಲ್ಲಿರುವ ಭಾರತೀಯ ಹವಾಮಾನ ಇಲಾಖೆಯ ಹಿರಿಯ ವಿಜ್ಞಾನಿ ಡಾ. ಕೆ.ಎಸ್. ಹೊಸಳೀಕರ್ ಹೇಳಿದ್ದಾರೆ.

‘‘ಆದರೆ, ಮೀನುಗಾರರಿಗೆ ನೀಡಲಾಗಿರುವ ಎಚ್ಚರಿಕೆ ಜಾರಿಯಲ್ಲಿರುತ್ತದೆ. ಸಮುದ್ರವು ಪ್ರಕ್ಷುಬ್ಧವಾಗಿರುವುದರಿಂದ ಪಶ್ಚಿಮ ಕರಾವಳಿಯುದ್ದಕ್ಕೂ ಜನರು ಎಚ್ಚರಿಕೆಯಿಂದ ಇರಬೇಕು’’ ಎಂದರು.

ಗುರುವಾರ ಮಧ್ಯಾಹ್ನದ ಹೊತ್ತಿಗೆ, ಚಂಡಮಾರುತವು ಪೂರ್ವ-ಮಧ್ಯ ಅರಬ್ಬಿ ಸಮುದ್ರದಲ್ಲೇ ಕೇಂದ್ರೀಕೃತವಾಗಿತ್ತು. ಅದು ‘ಅತ್ಯಂತ ಪ್ರಬಲ’ ಚಂಡಮಾರುತವಾಗಿ ರೂಪುಗೊಳ್ಳುತ್ತಿದೆ. ಗಂಟೆಗೆ 135-145 ಕಿ.ಮೀ. ವೇಗದ ಬಿರುಗಾಳಿ ಬೀಸುತ್ತಿದೆ. ಜೂನ್ 10ರ ವೇಳೆಗೆ ಅದು ಗಂಟೆಗೆ 170 ಕಿ.ಮೀ. ವೇಗವನ್ನು ಪಡೆದುಕೊಳ್ಳಬಹುದು. ಆದರೆ ಸಮುದ್ರದಲ್ಲಿ ಅತಿ ದೂರದಲ್ಲಿ ಇರುವುದರಿಂದ ಬಿರುಗಾಳಿಯ ಪ್ರಭಾವ ಕರಾವಳಿ ಪ್ರದೇಶಗಳ ಮೇಲೆ ಬೀಳುವುದಿಲ್ಲ. ಚಂಡಮಾರುತವು ಜೂನ್ 13ರವರೆಗೂ ‘‘ಪ್ರಬಲ’’ವಾಗಿಯೇ ಉಳಿಯಲಿದೆ.

ಗೋವಾದಿಂದ 850 ಕಿ.ಮೀ. ದೂರದಲ್ಲಿ

ಚಂಡಮಾರುತವು ಗುರುವಾರ ಮಧ್ಯಾಹ್ನದ ವೇಳೆಗೆ, ಗೋವಾದಿಂದ ಪಶ್ಚಿಮ-ನೈರುತ್ಯ ದಿಕ್ಕಿನಲ್ಲಿ ಸಮುದ್ರದಲ್ಲಿ 850 ಕಿ.ಮೀ. ದೂರದಲ್ಲಿ ಕೇಂದ್ರೀಕೃತಗೊಂಡಿದೆ ಎಂದು ಅದರ ಪಥದ ಮೇಲೆ ನಿಗಾ ಇಟ್ಟಿರುವ ವಿಜ್ಞಾನಿಗಳು ಹೇಳಿದ್ದಾರೆ. ಅದು ಮುಂಬೈಯಿಂದ ನೈರುತ್ಯಕ್ಕೆ 890 ಕಿ.ಮೀ. ಮತ್ತು ಪೋರಬಂದರ್ನಿಂದ ದಕ್ಷಿಣ-ನೈರುತ್ಯಕ್ಕೆ 900 ಕಿ.ಮೀ. ದೂರದಲ್ಲಿ ನೆಲೆಸಿದೆ.

ನಂತರದ ಕೆಲವು ಗಂಟೆಗಳಲ್ಲಿ ಅದು ಉತ್ತರ ದಿಕ್ಕಿನತ್ತ ಮುಂದುವರಿದಿದೆ. ಮುಂದಿನ 24 ಗಂಟೆಗಳಲ್ಲಿ ಅದು ನಿಧಾನವಾಗಿ ಬಲಗೊಳ್ಳುತ್ತದೆ ಮತ್ತು ಮುಂದಿನ ಮೂರು ದಿನಗಳಲ್ಲಿ ಉತ್ತರ-ವಾಯುವ್ಯ ದಿಕ್ಕಿನತ್ತ ಚಲಿಸುತ್ತದೆ ಎಂದು ಮುನ್ನೆಚ್ಚರಿಕೆ ತಿಳಿಸಿದೆ.

ಪಶ್ಚಿಮ ಕರಾವಳಿಯಲ್ಲಿ ಸಮುದ್ರ ಪ್ರಕ್ಷುಬ್ಧ

ಚಂಡಮಾರುತವು ಪಶ್ಚಿಮ ಕರಾವಳಿಯಿಂದ ಹಲವು ನೂರು ಕಿಲೋಮೀಟರ್ ದೂರದಲ್ಲಿದ್ದರೂ, ಗೋವಾ, ಕರ್ನಾಟಕ, ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಲ್ಲಿ ಎಚ್ಚರಿಕೆ ಘೋಷಿಸಲಾಗಿದೆ. ಪಶ್ಚಿಮ ಕರಾವಳಿಯ ಮೇಲೆ ಚಂಡಮಾರುತದ ನೇರ ಪರಿಣಾಮ ಇಲ್ಲದಿದ್ದರೂ, ಸಮುದ್ರ ಪ್ರಕ್ಷುಬ್ಧವಾಗಿರುತ್ತದೆ. ಹಾಗಾಗಿ ಜೂನ್ 14ರ ಬಳಿಕ ಚಂಡಮಾರುತ ಶಾಂತಗೊಳ್ಳುವವರೆಗೂ ಅರಬ್ಬಿ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಬಾರದು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಈಗಾಗಲೇ ಸಮುದ್ರದಲ್ಲಿರುವವರು ಹಿಂದಿರುಗುವಂತೆ ಸಲಹೆ ನೀಡಲಾಗಿದೆ.

ಮುಂದಿನ 3-4 ದಿನಗಳಲ್ಲಿ ಮಹಾರಾಷ್ಟ್ರ-ಗುಜರಾತ್ ಕರಾವಳಿಯ ಮೇಲೆ ಗಂಟೆಗೆ 35-45 ಕಿ.ಮೀ. ವೇಗದ ಗಾಳಿ ಬೀಸಬಹುದು ಎಂದು ನಿರೀಕ್ಷಿಸಲಾಗಿದೆ.

share
Next Story
X