ಬಂಟ್ವಾಳ ಮೂಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

ಬಂಟ್ವಾಳ, ಜೂ.9 : ತಾಲೂಕಿನ ಮಾಣಿ ಸಮೀಪದ ಸೂರಿಕುಮೇರ್ ನಿವಾಸಿ ದಿವಂಗತ ಅಬೂಬಕರ್ ರವರ ಪುತ್ರ ಅಬ್ದುಲ್ ರಝಾಕ್ (52) ಹೃದಯಾಘಾತದಿಂದ ಗುರುವಾರ ರಾತ್ರಿ ಸೌದಿ ಅರೇಬಿಯಾದ ಅಲ್ ಕೋಬರ್ ನಲ್ಲಿ ಮೃತಪಟ್ಟಿರುವುದು ವರದಿಯಾಗಿದೆ.
ಕಳೆದ 15 ವರ್ಷಗಳಿಂದ ವಿದೇಶದಲ್ಲಿ ವೃತ್ತಿಯಲ್ಲಿದ್ದ ಅವರು ರಜೆಯಲ್ಲಿ ಮನೆಗೆ ಬಂದು ಮೂರು ತಿಂಗಳ ಹಿಂದೆಯಷ್ಟೇ ವಾಪಸ್ ಸೌದಿ ಅರೇಬಿಯಾಕ್ಕೆ ತೆರಳಿದ್ದರು ಎಂದು ಹೇಳಲಾಗಿದೆ.
ಸೌದಿ ಅರೇಬಿಯಾದಲ್ಲಿ ಇಂದು (ಶುಕ್ರವಾರ) ಆಡಳಿತ ಕಚೇರಿಗಳಿಗೆ ವಾರದ ರಜೆ ಇರುವ ಹಿನ್ನೆಲೆಯಲ್ಲಿ ಮೃತ ಶರೀರದ ಅಂತ್ಯಕ್ರಿಯೆ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳಲಾಗಿಲ್ಲ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರು ಪತ್ನಿ, ಇಬ್ಬರು ಪುತ್ರಿಯರ ಸಹಿತ ಅಪಾರ ಸಂಖ್ಯೆಯ ಬಂಧುಗಳನ್ನು ಅಗಲಿದ್ದಾರೆ.
Next Story