Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್‌ನ ಪ್ರಸ್ತಾವಿತ ಸುಧಾರಣೆ...

ಇಸ್ರೇಲ್‌ನ ಪ್ರಸ್ತಾವಿತ ಸುಧಾರಣೆ ಫೆಲೆಸ್ತೀನ್ ಗೆ ಬೆದರಿಕೆ: ವಿಶ್ವಸಂಸ್ಥೆ

9 Jun 2023 10:29 PM IST
share
ಇಸ್ರೇಲ್‌ನ ಪ್ರಸ್ತಾವಿತ ಸುಧಾರಣೆ ಫೆಲೆಸ್ತೀನ್ ಗೆ ಬೆದರಿಕೆ: ವಿಶ್ವಸಂಸ್ಥೆ

ರಮಲ್ಲಾ: ಇಸ್ರೇಲ್ನ ಬಲಪಂಥೀಯ ಸಮ್ಮಿಶ್ರ ಸರಕಾರವು ಪ್ರಸ್ತಾಪಿಸಿರುವ ವಿವಾದಾತ್ಮಕ ನ್ಯಾಯಾಂಗ ಸುಧಾರಣೆಗಳು ಫೆಲೆಸ್ತೀನೀಯರಿಗೆ ಅಪಾಯವನ್ನುಂಟು ಮಾಡುತ್ತದೆ ಎಂದು ವಿಶ್ವಸಂಸ್ಥೆ ಸ್ಥಾಪಿಸಿದ ಸ್ವತಂತ್ರ ತನಿಖಾ ಆಯೋಗ ಗುರುವಾರ ವರದಿ ನೀಡಿದೆ.

ಪ್ರಸ್ತಾವಿತ ಶಾಸನವು ಫೆಲೆಸ್ತೀನಿಯನ್ ಪರವಿರುವ ಎನ್ಜಿಒಗಳ ತೆರಿಗೆಯನ್ನು ಹೆಚ್ಚಿಸಬಹುದು ಮತ್ತು ಆಕ್ರಮಿತ ವೆಸ್ಟ್ ಬ್ಯಾಂಕ್ ನಲ್ಲಿ ಇಸ್ರೇಲಿ ಯೋಧರ ಚಟುವಟಿಕೆಗಳನ್ನು ದಾಖಲಿಸುವ ಸಾಮರ್ಥ್ಯವನ್ನು ಮಿತಿಗೊಳಿಸಬಹುದು. ಪ್ರಸ್ತಾವಿತ ಬದಲಾವಣೆಯು ಅಧಿಕಾರಗಳ ಪ್ರತ್ಯೇಕತೆಯ ಮೂಲಭೂತ ಲಕ್ಷಣಗಳನ್ನು ಮತ್ತು ಪ್ರಜಾಪ್ರಭುತ್ವದ ರಾಜಕೀಯ ವ್ಯವಸ್ಥೆಗಳಲ್ಲಿ ಅಗತ್ಯವಾದ ಅಧಿಕಾರದ ಸಮತೋಲನವನ್ನು ಹಾಳುಗೆಡವಲಿದೆ. ವಿಶೇಷವಾಗಿ ಫೆಲೆಸ್ತೀನಿಯನ್ ನಾಗರಿಕರು ಸೇರಿದಂತೆ ಅತ್ಯಂತ ದುರ್ಬಲ ಮತ್ತು ಅನಪೇಕ್ಷಿತ ಸಮುದಾಯಗಳ ಮಾನವ ಹಕ್ಕುಗಳನ್ನು ದುರ್ಬಲಗೊಳಿಸುವ ಅಪಾಯವಿರುವುದಾಗಿ ಕಾನೂನು ತಜ್ಞರು ಎಚ್ಚರಿಸಿದ್ದಾರೆ  ಎಂದು ಆಯೋಗ ಸಲ್ಲಿಸಿರುವ 56 ಪುಟಗಳ ವರದಿ ಹೇಳಿದೆ. ಮಾನವ ಹಕ್ಕುಗಳ ಪ್ರತಿಪಾದಕರ ವಿರುದ್ಧ  ಕಿರುಕುಳ, ಬೆದರಿಕೆಗಳು, ಬಂಧನಗಳು,  ವಿಚಾರಣೆಗಳು , ಅನಿಯಂತ್ರಿತ  ಬಂಧನ, ಚಿತ್ರಹಿಂಸೆ ಮತ್ತು ಅಮಾನವೀಯ ವರ್ತನೆ, ಅವಮಾನಕರವಾಗಿ ನಡೆಸಿಕೊಳ್ಳುವ ಮೂಲಕ ಅವರನ್ನು ಇಸ್ರೇಲ್ ನಿಗ್ರಹಿಸುತ್ತಿದೆ ಎಂದು ಆಯೋಗ ಹೇಳಿದೆ.

2021ರಲ್ಲಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿ ರಚಿಸಿದ್ದ ಆಯೋಗವು ಸುಮಾರು 130 ಸಂದರ್ಶನ ನಡೆಸಿ ಈ ವರದಿ ತಯಾರಿಸಿದ್ದು, ಆಕ್ರಮಿತ ವೆಸ್ಟ್ ಬ್ಯಾಂಕ್ ಮತ್ತು ಗಾಝಾದಲ್ಲಿ  ಫೆಲೆಸ್ತೀನಿಯನ್ ಅಧಿಕಾರಿಗಳೂ ಫೆಲೆಸ್ತೀನಿಯನ್ ಮಾನವ ಹಕ್ಕುಗಳ ಕಾರ್ಯಕರ್ತರನ್ನು ಗುರಿಯಾಗಿಸಿರುವುದು ಕಂಡುಬಂದಿದೆ ಎಂದು ಉಲ್ಲೇಖಿಸಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಸರಕಾರ ಪ್ರಸ್ತಾವಿಸಿರುವ ನ್ಯಾಯಾಂಗ ಬದಲಾವಣೆ ಸುಪ್ರೀಂಕೋರ್ಟ್ನ ಕೆಲವು ಅಧಿಕಾರಗಳನ್ನು ನಿಗ್ರಹಿಸಲಿದೆ ಮತ್ತು ನ್ಯಾಯಾಂಗದಲ್ಲಿನ ನೇಮಕಾತಿಯಲ್ಲಿ ಸರಕಾರದ ನಿಯಂತ್ರಣವನ್ನು ಹೆಚ್ಚಿಸಲಿದ್ದು ಇದನ್ನು ವಿರೋಧಿಸಿ ಇಸ್ರೇಲ್ ನಾದ್ಯಂತ ವ್ಯಾಪಕ ಪ್ರತಿಭಟನೆ ನಡೆದಿದೆ. ಸರಕಾರದ ಇತರ ಪ್ರಸ್ತಾವನೆಯು ಇಸ್ರೇಲ್ ನ ಅರಬ್ ಅಲ್ಪಸಂಖ್ಯಾತ ಪ್ರಜೆಗಳು ಫೆಲೆಸ್ತೀನಿಯನ್ ಪರ ಹಿಂಸಾಚಾರ ನಡೆಸಿದರೆ ಅವರ ಪೌರತ್ವವನ್ನು ರದ್ದುಗೊಳಿಸಿ ಗಡೀಪಾರು ಮಾಡಲು ಅವಕಾಶ ನೀಡುತ್ತದೆ. 

share
Next Story
X