Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಠ್ಯಪುಸ್ತಕಗಳಿಂದ ತಮ್ಮ ಹೆಸರು...

ಪಠ್ಯಪುಸ್ತಕಗಳಿಂದ ತಮ್ಮ ಹೆಸರು ಕೈಬಿಡುವಂತೆ NCERTಯನ್ನು ಕೇಳಿದ ಸಲಹೆಗಾರರು

"ಈ ಪಠ್ಯಪುಸ್ತಕಗಳೊಂದಿಗೆ ಗುರುತಿಸಿಕೊಳ್ಳಲು ಮುಜುಗರವಾಗುತ್ತಿದೆ"

9 Jun 2023 5:14 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪಠ್ಯಪುಸ್ತಕಗಳಿಂದ ತಮ್ಮ ಹೆಸರು ಕೈಬಿಡುವಂತೆ NCERTಯನ್ನು ಕೇಳಿದ ಸಲಹೆಗಾರರು
"ಈ ಪಠ್ಯಪುಸ್ತಕಗಳೊಂದಿಗೆ ಗುರುತಿಸಿಕೊಳ್ಳಲು ಮುಜುಗರವಾಗುತ್ತಿದೆ"

ಹೊಸದಿಲ್ಲಿ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯು ಶಾಲಾ ಪಠ್ಯಪುಸ್ತಕಗಳಲ್ಲಿ ಹಲವಾರು ಹಾಗೂ ಅತಾರ್ಕಿಕ ಕಡಿತ ಮಾಡಿರುವುದು ಹಾಗೂ ದೊಡ್ಡ ಪ್ರಮಾಣದಲ್ಲಿ ಪಠ್ಯಗಳನ್ನು ಕಿತ್ತು ಹಾಕಿರುವ ಕ್ರಮವನ್ನು ಆಕ್ಷೇಪಿಸಿರುವ ಮೂಲತಃ 2006-07ರಲ್ಲಿ ಪ್ರಕಟವಾಗಿದ್ದ ಒಂಬತ್ತರಿಂದ ಹನ್ನೆರಡನೇ ತರಗತಿ ಪಠ್ಯಪುಸ್ತಕಗಳ ಮುಖ್ಯ ಸಲಹೆಗಾರರಾಗಿದ್ದ ಸುಹಾಸ್ ಪಾಲ್ಷಿಕರ್ ಹಾಗೂ ಯೋಗೇಂದ್ರ ಯಾದವ್ ಅವರು, ಹಾಲಿ ಪಠ್ಯಪುಸ್ತಕಗಳ ಸ್ವರೂಪದಿಂದ ತಾವು ದೂರ ಉಳಿಯುತ್ತಿರುವುದಾಗಿಯೂ ಹಾಗೂ ಆ ಪಠ್ಯಪುಸ್ತಕಗಳಿಂದ ತಮ್ಮ ಹೆಸರನ್ನು ಕೈಬಿಡಬೇಕು ಎಂತಲೂ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಗೆ ಮನವಿ ಮಾಡಿದ್ದಾರೆ ಎಂದು indianexpress.com ವರದಿ ಮಾಡಿದೆ.

ಕೋವಿಡ್-19 ಸಾಂಕ್ರಾಮಿಕದಿಂದ ಕಲಿಕೆಯಲ್ಲಿ ತೊಂದರೆ ಅನುಭವಿಸುತ್ತಿರುವ ವಿದ್ಯಾರ್ಥಿಗಳಿಗೆ ನೆರವು ನೀಡಲು ಪಠ್ಯಕ್ರಮವನ್ನು ಕಡಿತಗೊಳಿಸಲು ಭಾರಿ ಬದಲಾವಣೆ ಹಾಗೂ ಪಠ್ಯಗಳನ್ನು ಕಿತ್ತು ಹಾಕಲು ಕಳೆದ ವರ್ಷ ನಿರ್ಣಯ ಕೈಗೊಂಡು, ಈ ವರ್ಷದಿಂದ ಜಾರಿಗೊಳಿಸಿರುವ NCERT ಕ್ರಮವು ಶಿಕ್ಷಣ ತಜ್ಞರು ಹಾಗೂ ರಾಜಕಾರಣಿಗಳಿಂದ ತೀವ್ರ ಟೀಕೆಗೆ ಗುರಿಯಾಗಿ ಮತ್ತೊಂದು ಸುತ್ತಿನ ವಿವಾದಕ್ಕೆ ಗುರಿಯಾಗಿದೆ. ಈ ಬದಲಾವಣೆಗಳಲ್ಲಿ 2002ರ ಗುಜರಾತ್ ಗಲಭೆಗೆ ಸಂಬಂಧಿಸಿದ ಎಲ್ಲ ಉಲ್ಲೇಖಗಳನ್ನು ಕೈಬಿಟ್ಟಿರುವುದು, ಮುಘಲ್ ಅವಧಿ ಹಾಗೂ ಜಾತಿ ವ್ಯವಸ್ಥೆಗೆ ಸಂಬಂಧಿಸಿದ ವಿಷಯಗಳನ್ನು ಕಡಿತಗೊಳಿಸಿರುವುದು ಮತ್ತು ಪ್ರತಿಭಟನೆಗಳು ಹಾಗೂ ಸಾಮಾಜಿಕ ಚಳವಳಿಗಳ ಕುರಿತ ಪಠ್ಯಗಳನ್ನು ಕೈಬಿಟ್ಟಿರುವುದು ಸೇರಿವೆ.

ಪಠ್ಯಕ್ರಮದ ಸುಧಾರಣಾ ಪ್ರಕ್ರಿಯೆಯಲ್ಲಿನ ಬದ್ಧತೆ ಕುರಿತು ಕಳವಳ ವ್ಯಕ್ತಪಡಿಸಿ NCERT ನಿರ್ದೇಶಕ ಡಿ.ಎಸ್.ಸಕ್ಲಾನಿ ಅವರಿಗೆ ಶುಕ್ರವಾರ ಪತ್ರ ಬರೆದಿರುವ ಯಾದವ್ ಹಾಗೂ ಪಾಲ್ಷಿಕರ್, "ಇಲ್ಲಿ ಯಾವುದೇ ಶೈಕ್ಷಣಿಕ ಸುಧಾರಣೆ ಕಾಣುವಲ್ಲಿ ನಾವು ವಿಫಲವಾಗಿದ್ದೇವೆ. ಪಠ್ಯಗಳನ್ನು ಗುರುತು ಸಿಗಲಾರದಷ್ಟು ತಿರುಚಿರುವುದು ನಮಗೆ ಕಾಣುತ್ತಿದೆ. ಅದರಿಂದ ಉಂಟಾಗಿರುವ ನಿರ್ವಾತವನ್ನು ತುಂಬಿಸುವ ಯಾವುದೇ ಪ್ರಯತ್ನವೂ ಇಲ್ಲದೆ." ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

"ಯಾವುದೇ ಪಠ್ಯವೂ ಆಂತರಿಕ ತಾರ್ಕಿಕತೆ ಹೊಂದಿರುತ್ತದೆ ಎಂದು ನಾವು ನಂಬಿದ್ದೇವೆ ಹಾಗೂ ಇಂತಹ ಮನಸೋಇಚ್ಛೆ ಕಡಿತ ಹಾಗೂ ಕಿತ್ತು ಹಾಕುವ ಪ್ರಕ್ರಿಯೆಯು ಪಠ್ಯದ ಸ್ಫೂರ್ತಿಯನ್ನು ಉಲ್ಲಂಘಿಸುತ್ತದೆ. ಪುನರಾವರ್ತಿತ ಹಾಗೂ ಸರಣಿ ಕಿತ್ತೊಗೆಯುವಿಕೆಯ ಹಿಂದೆ ಅಧಿಕಾರದಲ್ಲಿರುವವರನ್ನು ಸಂಪ್ರೀತರನ್ನಾಗಿಸುವ ಇರಾದೆ ಕಾಣುತ್ತಿದೆಯೇ ಹೊರತು ಅದರ ಹಿಂದೆ ಯಾವುದೇ ತರ್ಕವಿಲ್ಲ" ಎಂದೂ ಪತ್ರದಲ್ಲಿ ಹೇಳಲಾಗಿದೆ.

ಆದರೆ, ತನ್ನ ಇತ್ತೀಚಿನ ಪಠ್ಯಪುಸ್ತಕ ಸುಧಾರಣಾ ಕ್ರಮಗಳನ್ನು ಸರಣಿ ಟ್ವೀಟ್‌ಗಳ ಮೂಲಕ ಬಲವಾಗಿ ಸಮರ್ಥಿಸಿಕೊಂಡಿದ್ದ NCERT, "ಸಾಂಕ್ರಾಮಿಕದ ಅವಧಿಯಲ್ಲಿ ವಿದ್ಯಾರ್ಥಿಗಳು ಎದುರಿಸಿದ್ದ ಮಾನಸಿಕ ಆರೋಗ್ಯ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ವಿಷಯದ ಹೊರೆಯನ್ನು ತಗ್ಗಿಸುವ ಗುರಿ ಹೊಂದಿರುವ ಅವಶ್ಯಕ ಕ್ರಮವನ್ನು ಕೈಗೊಳ್ಳಲಾಗಿದೆ" ಎಂದು ಪ್ರತಿಪಾದಿಸಿತ್ತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X