Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇದು ಪಕ್ಷದ ಆಂತರಿಕ ವಿಷಯ: ಸಚಿನ್ ಪೈಲಟ್‌...

ಇದು ಪಕ್ಷದ ಆಂತರಿಕ ವಿಷಯ: ಸಚಿನ್ ಪೈಲಟ್‌ ಅವರೊಂದಿಗಿನ ಮನಸ್ತಾಪದ ಬಗ್ಗೆ ಅಶೋಕ್ ಗೆಹ್ಲೋಟ್ ಪ್ರತಿಕ್ರಿಯೆ

10 Jun 2023 5:28 PM IST
share
ಇದು ಪಕ್ಷದ ಆಂತರಿಕ ವಿಷಯ: ಸಚಿನ್ ಪೈಲಟ್‌ ಅವರೊಂದಿಗಿನ ಮನಸ್ತಾಪದ ಬಗ್ಗೆ ಅಶೋಕ್ ಗೆಹ್ಲೋಟ್ ಪ್ರತಿಕ್ರಿಯೆ

ಹೊಸದಿಲ್ಲಿ: ರಾಜಸ್ಥಾನ ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳಿದ್ದು, ಅದಕ್ಕೂ ಮುನ್ನ ಒಗ್ಗಟ್ಟು ಪ್ರದರ್ಶಿಸಲು ಕಾಂಗ್ರೆಸ್ ಪಕ್ಷ ಹೆಣಗಾಡುತ್ತಿರುವಾಗಲೇ, ಹಲವಾರು ತಿಂಗಳಿನಿಂದ ತನ್ನ ಪ್ರತಿಸ್ಪರ್ಧಿ ಸಚಿನ್ ಪೈಲಟ್ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸುತ್ತಿದ್ದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಇದು ಪಕ್ಷದ ಆಂತರಿಕ ವಿಷಯ ಎಂದು ಸ್ಪಷ್ಟನೆ ನೀಡಿದ್ದಾರೆ.

NDTV ಸುದ್ದಿ ಸಂಸ್ಥೆಗೆ ಸಂದರ್ಶನ ನೀಡಿರುವ ಅಶೋಕ್ ಗೆಹ್ಲೋಟ್, "ಇತ್ತೀಚೆಗೆ ದಿಲ್ಲಿಯಲ್ಲಿ ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ‌.ಸಿ.ವೇಣುಗೋಪಾಲ್ ಹಾಗೂ ಸುಖ್ಜಿಂದರ್ ಸಿಂಗ್ ಉಸ್ತುವಾರಿಯಲ್ಲಿ ನಾವಿಬ್ಬರೂ ಪರಸ್ಪರ ಮಾತುಕತೆ ನಡೆಸಿದ್ದೇವೆ" ಎಂದು ಹೇಳಿದ್ದಾರೆ.

ವಿಷಯಕ್ಕೆ ತೆರೆ ಎಳೆಯಿರಿ ಎಂದು ವಿನಂತಿಸಿಕೊಂಡಿರುವ ಗೆಹ್ಲೋಟ್, "ಅದರ ಬಗ್ಗೆ ನಾನೀಗ ಮಾತನಾಡಲು ಇಷ್ಟಪಡುವುದಿಲ್ಲ. ನಾವು ಈ ಕುರಿತು ಮಾತನಾಡಲು ಕುಳಿತು, ನಾನೇನಾದರೂ ಹೇಳಿದರೆ ಅದರಿಂದ ಅಪಾರ್ಥವಾಗುವ ಸಾಧ್ಯತೆ ಇದೆ" ಎಂದು ಸಮಜಾಯಿಷಿ ನೀಡಿದ್ದಾರೆ.

ಭ್ರಷ್ಟಾಚಾರದ ಆರೋಪಕ್ಕೆ ತುತ್ತಾಗಿರುವ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕಿ ವಸುಂಧರಾ ರಾಜೇ ವಿರುದ್ಧ ರಾಜ್ಯ ಸರ್ಕಾರವು ಮೃದುವಾಗಿ ವರ್ತಿಸುತ್ತಿದೆ ಎಂದು ಪದೇ ಪದೇ ಸಚಿನ್ ಪೈಲಟ್ ಮಾಡುತ್ತಿರುವ ಆರೋಪಕ್ಕೆ ಪ್ರತಿಕ್ರಿಯಿಸಿರುವ ಗೆಹ್ಲೋಟ್, ನಾನೀಗಲೂ ಅವರ ವಿರುದ್ಧ ಕ್ರಮ ಜರುಗಿಸಲು ಸಿದ್ಧ ಎಂದು ಭರವಸೆ ನೀಡಿದ್ದಾರೆ.

"ವಸುಂಧರ ರಾಜೇ ವಿರುದ್ಧ ನಾವು ಮಾಡಿರುವ ಆರೋಪಗಳನ್ನೆಲ್ಲ ನ್ಯಾಯಾಲಯಕ್ಕೆ ಕೊಂಡೊಯ್ಯಲಾಗಿದೆ. ನಾವು ಕೈಬಿಟ್ಟಿರುವ ಪ್ರಕರಣದ ಬಗ್ಗೆ ಯಾವುದೇ ಸಾಮಾನ್ಯ ವ್ಯಕ್ತಿ ಬೊಟ್ಟು ಮಾಡಿದರೂ ನಾನು ಅದರ ವಿರುದ್ಧ ಕ್ರಮ ಜರುಗಿಸುತ್ತೇನೆ" ಎಂದೂ ಹೇಳಿದ್ದಾರೆ.

ಕಳೆದ ವಾರ ದಿಲ್ಲಿಯಲ್ಲಿ ಕಾಂಗ್ರೆಸ್ ನಾಯಕತ್ವದೆದುರು ನಾಲ್ಕು ಗಂಟೆಗಳ ಸಭೆ ನಡೆಸಿದ ನಂತರ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಸಚಿನ್ ಪೈಲಟ್ ಅವರೊಂದಿಗಿನ ಫೋಟೋ ವೈರಲ್ ಆಗಿತ್ತು. ಇದರಿಂದ ಹಲವು ಪ್ರಶ್ನೆಗಳಿಗೆ ಉತ್ತರ ದೊರೆಯದೆ ಹೋದರೂ ಅವರಿಬ್ಬರೂ ತಮ್ಮ ಒಗ್ಗಟ್ಟು ಪ್ರದರ್ಶಿಸಲು ಪ್ರಯತ್ನಿಸಿದ್ದರು.

ತಮ್ಮ ಪ್ರತಿಸ್ಪರ್ಧಿ ಸಚಿನ್ ಪೈಲಟ್‌ರೊಂದಿಗೆ ತಾನು ಕೆಲಸ ಮಾಡಲು ಸಿದ್ಧ ಎಂದು ಹೇಳಿಕೆ ನೀಡಿದ್ದ ಗೆಹ್ಲೋಟ್, ನಾಯಕರು ಸಹನೆಯಿಂದ ವರ್ತಿಸಬೇಕು ಹಾಗೂ ಸೇವೆ ಸಲ್ಲಿಸುವ ತಮ್ಮ ಅವಕಾಶಕ್ಕಾಗಿ ಕಾಯಬೇಕು ಎಂದು ಹೇಳುವ ಮೂಲಕ ಸಚಿನ್ ಪೈಲಟ್‌ರೊಂದಿಗಿನ ತಮ್ಮ ಸಂಘರ್ಷ ಇನ್ನೂ ಉಳಿದಿದೆ ಮತ್ತು ಮುಂದುವರಿಯಲಿದೆ ಎಂಬುದರ ಸೂಚನೆಯನ್ನೂ ನೀಡಿದ್ದರು.

share
Next Story
X