Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಮ್ಮ ಮೆಟ್ರೋ ಕಾಮಗಾರಿಯಲ್ಲಿ ಇದುವರೆಗೆ...

ನಮ್ಮ ಮೆಟ್ರೋ ಕಾಮಗಾರಿಯಲ್ಲಿ ಇದುವರೆಗೆ 38 ಮಂದಿ ಸಾವು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದ BMRCL:ವರದಿ

11 Jun 2023 3:21 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನಮ್ಮ ಮೆಟ್ರೋ ಕಾಮಗಾರಿಯಲ್ಲಿ ಇದುವರೆಗೆ 38 ಮಂದಿ ಸಾವು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದ BMRCL:ವರದಿ

ಬೆಂಗಳೂರು: ನಮ್ಮ ಮೆಟ್ರೋ ನಿರ್ಮಾಣ ಕಾಮಗಾರಿಯಲ್ಲಿ ಇಲ್ಲಿಯವರೆಗೆ 38 ಹೆಚ್ಚು ಜನರು ಸಾವನ್ನಪ್ಪಿದ್ದಾರೆ, ಆದರೆ ಇದುವರೆಗೂ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನ ಯಾವುದೇ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂಬ ಆಘಾತಕಾರಿ ಅಂಶವನ್ನು ಆರ್‌ಟಿಐ ವರದಿ ಬಹಿರಂಗಪಡಿಸಿದೆ ಎಂದು deccanherald.com ವರದಿ ಮಾಡಿದೆ.

ಆರ್‌ಟಿಐ ವರದಿಯು, ಮೆಟ್ರೋ ನಿರ್ಮಾಣ ಸೈಟ್‌ಗಳಲ್ಲಿ ಅಸಮರ್ಪಕ ಸುರಕ್ಷತಾ ಮೂಲಸೌಕರ್ಯದ ಕಡೆಗೆ ಬೊಟ್ಟು ಮಾಡಿದೆ ಮಾತ್ರವಲ್ಲ, ಅನಾಹುತಗಳಿಗೆ ಅಧಿಕೃತ ಹೊಣೆಗಾರಿಕೆಯ ಗಂಭೀರ ಕೊರತೆಯನ್ನು ಸಹ ಬಹಿರಂಗಪಡಿಸಿದೆ.

2007 ರಲ್ಲಿ ಪ್ರಾರಂಭವಾದ ಮೆಟ್ರೋ ನಿರ್ಮಾಣ ಕಾಮಗಾರಿಯಲ್ಲಿ 38 ಜನರು ಸಾವನ್ನಪ್ಪಿದ್ದಾರೆ ಮತ್ತು 50 ಜನರು ಗಾಯಗೊಂಡಿದ್ದಾರೆ ಎಂದು ದಾಖಲೆಗಳು ತೋರಿಸಿವೆ.

2023 ರ ಜನವರಿಯಲ್ಲಿ ನಡೆದ ಅಪಘಾತವನ್ನು ಹೊರತುಪಡಿಸಿ, ಉಳಿದ ಎಲ್ಲಾ ಅಪಘಾತಗಳಿಗೆ ಗುತ್ತಿಗೆ ಕಾರ್ಮಿಕರೇ ಕಾರಣ ಎಂದು ಬಿಎಂಆರ್‌ಸಿಎಲ್‌ ಹೇಳಿದೆ.  ಇವರಲ್ಲಿ ಸಹಾಯಕರು, ಫಿಟ್ಟರ್‌ಗಳು, ಚಾಲಕರು, ರಿಗ್ಗರ್‌ಗಳು ಮತ್ತು ಗುತ್ತಿಗೆದಾರರಿಂದ ಕೆಲಸ ಮಾಡುವ ಕೌಶಲ್ಯರಹಿತ ಕಾರ್ಮಿಕರು ಸೇರಿದ್ದಾರೆ.

RTI ಅರ್ಜಿಗೆ ನೀಡಿದ ಮೊದಲ ಪ್ರತಿಕ್ರಿಯೆಯಲ್ಲಿ, ರೀಚ್ 2 ವಿಸ್ತರಣೆಯಲ್ಲಿ (ಪರ್ಪಲ್ ಲೈನ್‌ನ ಪಶ್ಚಿಮ ಭಾಗ) ಕೇವಲ ಎರಡು ಸಾವುಗಳು ಸಂಭವಿಸಿವೆ ಎಂದು ಬಿಎಂಆರ್‌ಸಿಎಲ್ ಹೇಳಿಕೊಂಡಿತ್ತು. ಅಲ್ಲದೆ, ನಿರ್ಮಾಣದ ಸಮಯದಲ್ಲಿ ಯಾವುದೇ ಸಾರ್ವಜನಿಕರು ಗಾಯಗೊಂಡಿಲ್ಲ ಅಥವಾ ಸಾವನ್ನಪ್ಪಿಲ್ಲ ಎಂದು ಹೇಳಿತ್ತು. ಆದಾಗ್ಯೂ, ನಂತರದ ಮನವಿಗೆ ಏಳು ಮಂದಿ ಮೃತಪಟ್ಟಿರುವ ವಿವರ ನೀಡಿದೆ. ಇದರಲ್ಲಿ ಇಬ್ಬರು ಸಾರ್ವಜನಿಕರಾದ ಸುಶೀಲ್ ಕಾಂಚನ್, ಆನಂದಪ್ಪ ಸೇರಿದಂತೆ ಒಟ್ಟು ಏಳು ಜನರ ವಿವರಗಳನ್ನು ಒದಗಿಸಿದೆ. ಆ ಮೂಲಕ ಒಟ್ಟು 9 ಸಾವುಗಳನ್ನು ಪಟ್ಟಿ ಮಾಡಿದೆ. ಇತರ 29 ಮಂದಿಯ ಸಾವಿಗೆ ಸಂಬಂಧಿಸಿದಂತೆ BMRCL ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂದು ವರದಿಯಾಗಿದೆ.

ಗಮನಿಸಬೇಕಾದ ಸಂಗತಿಯೆಂದರೆ, ಅಪಘಾತಗಳ ಕಾರಣದ ಅಧ್ಯಯನದಲ್ಲಿ ಸುರಕ್ಷತೆ ಕ್ರಮ ಪಾಲಿಸದ ತನ್ನ ಅಧಿಕಾರಿಗಳ ವಿರುದ್ಧ ಬಿಎಂಆರ್‌ಸಿಎಲ್‌ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಬದಲಾಗಿ, ಪಟ್ಟಿ ಮಾಡಲಾದ ಎಲ್ಲಾ ಪ್ರಕರಣಗಳಲ್ಲಿ, ಕಾರ್ಮಿಕರ ನಿರ್ಲಕ್ಷ್ಯ ಅಥವಾ ಗುತ್ತಿಗೆದಾರರು ಕೆಲಸ ಪ್ರಾರಂಭಿಸುವ ಮೊದಲು ಅಧಿಕಾರಿಗಳಿಗೆ ತಿಳಿಸಲು ವಿಫಲವಾದ ಕಾರಣಗಳನ್ನು ಅಪಘಾತಗಳಿಗೆ ಕಾರಣ ಎಂದು ಉಲ್ಲೇಖಿಸಲಾಗಿದೆ.  ಪಟ್ಟಿ ಮಾಡಲಾದ ಒಂಬತ್ತು ಪ್ರಕರಣಗಳಲ್ಲಿ ಐದರಲ್ಲಿ ಗುತ್ತಿಗೆದಾರರ ವಿರುದ್ಧವೂ ಯಾವುದೇ ಕ್ರಮ ಕೈಗೊಂಡಿಲ್ಲ.

ಜನವರಿಯಲ್ಲಿ ಎಚ್‌ಬಿಆರ್ ಲೇಔಟ್‌ನಲ್ಲಿ ಮೆಟ್ರೋ ಪಿಲ್ಲರ್ ಕುಸಿದು ತಾಯಿ ಮತ್ತು ಮಗು ಸಾವನ್ನಪ್ಪಿದ ಪ್ರಕರಣದಲ್ಲಿ, ಬಿಎಂಆರ್‌ಸಿಎಲ್ ಮೂವರು ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿದೆ, ಗುತ್ತಿಗೆದಾರರಿಗೆ 15 ಲಕ್ಷ ರೂಪಾಯಿ ದಂಡ ವಿಧಿಸಿ ಅವರಿಂದ ಕಾರಣ ಕೇಳಿದೆ.

ಇದುವರೆಗೆ ಗುತ್ತಿಗೆದಾರರು ಸಂತ್ರಸ್ತರ ಕುಟುಂಬಗಳಿಗೆ 3.15 ಕೋಟಿ ರೂಪಾಯಿ ಪರಿಹಾರ ನೀಡಿದ್ದರೆ, ಬಿಎಂಆರ್‌ಸಿಎಲ್ ಗುತ್ತಿಗೆದಾರರಿಂದ 1.77 ಕೋಟಿ ರೂಪಾಯಿವರೆಗೆ ದಂಡ ವಿಧಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X