Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಮನುವಾದಿ’ಗಳಿಗೆ ಗೇಲಿ ಮಾಡುವುದೇ ಕೆಲಸ:...

‘ಮನುವಾದಿ’ಗಳಿಗೆ ಗೇಲಿ ಮಾಡುವುದೇ ಕೆಲಸ: ಸಿದ್ದರಾಮಯ್ಯ

11 Jun 2023 9:37 PM IST
share
‘ಮನುವಾದಿ’ಗಳಿಗೆ ಗೇಲಿ ಮಾಡುವುದೇ ಕೆಲಸ: ಸಿದ್ದರಾಮಯ್ಯ

ಬೆಂಗಳೂರು: ‘ನಾವು ಜನಪರ ಯೋಜನೆ, ಬಡವರಿಗೆ ಅನುಕೂಲ ಮಾಡಿದರೆ, ಇದನ್ನು ಸಹಿಸದ ಮನುವಾದಿಗಳು ಗೇಲಿ ಮಾಡುವ ಕೆಲಸಕ್ಕೆ ಇಳಿದಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ರವಿವಾರ ವಿಧಾನಸೌಧದ ಮುಂಭಾಗದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಬಡ, ಮಧ್ಯಮ ವರ್ಗದವರಿಗೆ ಸರಕಾರ ಅನುಕೂಲ ಮಾಡಿದರೆ ಮನುವಾದಿಗಳು, ಬಿಜೆಪಿಯವರು ಸುಳ್ಳುಗಳ ಮೂಲಕ ಗುಲ್ಲೆಬ್ಬಿಸಿ ಗೊಂದಲ ಸೃಷ್ಟಿಸುತ್ತಾರೆ. ಆದರೆ, ನಾವು ನಮ್ಮ ಕೆಲಸಗಳನ್ನು ಮುಂದುವರೆಸುತ್ತೇವೆ. ಟೀಕೆ ಮಾಡುವವರನ್ನು ಹೆಚ್ಚಾಗಿ ಮಾನ್ಯತೆ ನೀಡುವ ಅಗತ್ಯವೂ ಇಲ್ಲ. ಅವರು ಅಲ್ಲಿಯೇ ಇರಲಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಈ 20 ದಿನಗಳಲ್ಲಿ ಬಿಜೆಪಿ ಪರಿವಾರ ಸುಳ್ಳಿನ ಮಹಾಪೂರವನ್ನೇ ಹರಿಸಿತು. ನಾವು ವಿಚಲಿತರಾಗಲಿಲ್ಲ. ‘ನಮ್ಮ ಗುರಿ, ನುಡಿದಂತೆ’ ಅದನ್ನು ಮಾಡಿದ್ದೇವೆ. ಮಹಿಳೆಯರನ್ನು ಸಶಕ್ತಗೊಳಿಸುವ ಉದ್ದೇಶದಿಂದ ಈ ಯೋಜನೆಗೆ ‘ಶಕ್ತಿ’ ಎಂದು ಹೆಸರಿಡಲಾಗಿದೆ ಎಂದ ಅವರು, ಬರೀ ಶ್ರೀಮಂತರ ಹಿತ ಕಾಯುವ ಬಿಜೆಪಿ ಯವರಿಗೆ ನಮ್ಮ ಕಾಳಜಿ ಸಹಿಸಲು ಆಗುತ್ತಿಲ್ಲ. ನಮ್ಮ ಗುರಿ ಜನರ ಸಂಕಷ್ಟ ತಗ್ಗಿಸುವುದು. ಪ್ರಮಾಣವಚನ ಸ್ವೀಕರಿಸಿ ಕೇವಲ 20 ದಿನಗಳಲ್ಲಿ ಮೊದಲ ಗ್ಯಾರಂಟಿ ಜಾರಿಯಾಗಿ ನಾಡಿನ ಸಮಸ್ತ ಮಹಿಳೆಯರು ಇದರ ಅನುಕೂಲ ಪಡೆಯಲು ಶುರು ಮಾಡಿದ್ದಾರೆ ಎಂದರು.
ಬಡವರ, ಮಧ್ಯಮ ವರ್ಗದವರ ಜೇಬಿಗೆ ಹಣ ಹಾಕಿದರೆ ಆರ್ಥಿಕತೆ ವೇಗ ಪಡೆದುಕೊಳ್ಳುತ್ತದೆ. ಶ್ರೀಮಂತರ ಜೇಬಿಗೆ ಹಣ ಹಾಕಿದರೆ ಆರ್ಥಿಕತೆಗೆ ಅಷ್ಟು ಲಾಭ ಆಗುವುದಿಲ್ಲ. ಆದುದರಿಂದ ನಾವು ಬಡವರು, ಮಧ್ಯಮ ವರ್ಗದವರ ಜೇಬಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಹಣ ಹಾಕುತ್ತೇವೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ವಿರೋಧ ಪಕ್ಷದವರು ಎಡಬಿಡಂಗಿಗಳು: ‘ರೈತರ ಸಾಲಮನ್ನಾ ಮಾಡದೇ ಬಂಡವಾಳಶಾಹಿಗಳ ಸಾಲಮನ್ನಾ ಮಾಡುವವರು ಸರಕಾರ ಯಾವ ರೀತಿ ಕಾರ್ಯನಿರ್ವಹಿಸುತ್ತದೇ ಎಂಬುದರ ಕುರಿತು ಪರಿಜ್ಞಾನವಿಲ್ಲ. ಹೀಗಾಗಿಯೇ ತರ್ಕರಹಿತವಾಗಿ ಎಡಬಿಡಂಗಿತನದ ರೂಪದಲ್ಲಿ ವಿರೋಧ ಪಕ್ಷಗಳು ಮಾತನಾಡುತ್ತಿವೆ. ಅವುಗಳಿಗೆ ನಾವು ಸೊಪ್ಪು ಹಾಕದೇ ಮತ್ತು ವಿಚಲಿತರಾಗದೇ ಎಲ್ಲ ಜಾತಿಯಲ್ಲಿರುವ, ಎಲ್ಲ ಧರ್ಮದಲ್ಲಿರುವ ಬಡವರಿಗೆ, ಸಾಮಾಜಿಕ, ಆರ್ಥಿಕವಾಗಿ ಶಕ್ತಿ ತುಂಬುವ ಕೆಲಸವನ್ನು ಸರಕಾರ ಮಾಡುತ್ತಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

share
Next Story
X