Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಈಗಾಗಲೇ ನಮ್ಮ ಯೋಜನೆ ನಕಲು ಮಾಡಿದ...

ಈಗಾಗಲೇ ನಮ್ಮ ಯೋಜನೆ ನಕಲು ಮಾಡಿದ ಬಿಜೆಪಿ: ಡಿ.ಕೆ.ಶಿವಕುಮಾರ್

"ಬಿಜೆಪಿ ಡಬಲ್ ಇಂಜಿನ್ ಅಲ್ಲ, ಡಬಲ್ ನಿಲುವಿನ ಪಕ್ಷ"

11 Jun 2023 10:01 PM IST
share
ಈಗಾಗಲೇ ನಮ್ಮ ಯೋಜನೆ ನಕಲು ಮಾಡಿದ ಬಿಜೆಪಿ: ಡಿ.ಕೆ.ಶಿವಕುಮಾರ್
"ಬಿಜೆಪಿ ಡಬಲ್ ಇಂಜಿನ್ ಅಲ್ಲ, ಡಬಲ್ ನಿಲುವಿನ ಪಕ್ಷ"

ಬೆಂಗಳೂರು: ನಾವು ಜಾರಿಗೊಳಿಸಲು ಹೊರಟಿರುವ ‘ಗೃಹಲಕ್ಷ್ಮಿ’ ಯೋಜನೆ ಮಾದರಿಯಲ್ಲಿಯೇ ಮಧ್ಯಪ್ರದೇಶದಲ್ಲಿ ಬಿಜೆಪಿ ಪಕ್ಷವೂ ನಕಲು ಮಾಡಿ ಮಹಿಳೆಯರಿಗೆ 1 ಸಾವಿರ ರೂ.ಕೊಡುತ್ತೇವೆ ಎಂದು ಘೋಷಣೆ ಮಾಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟೀಕಿಸಿದರು.

ರವಿವಾರ ವಿಧಾನಸೌಧದ ಮುಂಭಾಗದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಮಧ್ಯಪ್ರದೇಶದಲ್ಲಿ ಬಿಜೆಪಿಯವರು ನಮ್ಮ ಯೋಜನೆಯನ್ನು ನಕಲು ಮಾಡಿ ಮಹಿಳೆಯರಿಗೆ 1 ಸಾವಿರ ರೂ. ಕೊಡುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. ಆದರೆ ಇಲ್ಲಿ 2 ಸಾವಿರ ರೂ.ಕೊಟ್ಟರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಬಿಜೆಪಿಯವರೇ ಕೂಗಾಡುತ್ತಿದ್ದಾರೆ. ಇವರದ್ದು, ಡಬಲ್ ಇಂಜಿನ್ ಅಲ್ಲ. ಬದಲಾಗಿ, ಡಬಲ್ ನಿಲುವಿನ ಪಕ್ಷವಾಗಿದೆ ಎಂದು ವಾಗ್ದಾಳಿ ನಡೆಸಿದರು.

ನಾವು ಬಿಜೆಪಿಯನ್ನು ಟೀಕೆ ಮಾಡಲ್ಲ, ಅವಹೇಳನ ಮಾಡಲ್ಲ. ಏಕೆಂದರೆ ಕಾಲವೇ ಎಲ್ಲದಕ್ಕೂ ಉತ್ತರ ಕೊಡುತ್ತದೆ. ಅಲ್ಲದೆ, ಬಿಜೆಪಿಯವರು ಕಾಂಗ್ರೆಸ್ ನಾಯಕರಿಗೆ ಕಣ್ಣಿಲ್ಲ, ಕಿವಿಯಿಲ್ಲ ಎಂದುಕೊಂಡಿದ್ದಾರೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಜ.15ನೆ ತಾರೀಕಿನಂದು ‘ನಾ ನಾಯಕಿ’ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮೀ ಯೋಜನೆ ಘೋಷಣೆ ಮಾಡಿದ್ದರು. ಇದೀಗ ಇದನ್ನು ನಕಲು ಮಾಡುವ ಕೆಲಸದಲ್ಲಿ ಬಿಜೆಪಿ ತೊಡಗಿದೆ ಎಂದು ಅವರು ಹೇಳಿದರು.

ಈಗ ವಿರೋಧ ಪಕ್ಷದಲ್ಲಿ ಇರುವ ಈ ಬಿಜೆಪಿಯವರಿಗೆ ಸರಕಾರಿ ಸಂಸ್ಥೆಗಳ ಮೇಲೆ ಪ್ರೀತಿಯೇ ಇಲ್ಲ. ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆಗೆ ಸರಕಾರಿ ಬಸ್‍ಗಳನ್ನು ಬಳಸಿಕೊಂಡು ಇನ್ನೂ ಹಣ ಪಾವತಿಯೇ ಮಾಡಿಲ್ಲ ಎಂದು ಆಪಾದಿಸಿದ ಅವರು, ಪರಿಶುದ್ಧವಾದ ಆಡಳಿತ ನೀಡಲು ನಾವು ಸನ್ನದ್ದರಾಗಿದ್ದೇವೆ. ವಿರೋಧ ಪಕ್ಷಗಳು ನಾನಾ ರೀತಿಯಲ್ಲಿ ಟೀಕೆ ಮಾಡುತ್ತಿವೆ. ನಮಗೆ ಆ ಟೀಕೆಗಳಿಗೆಲ್ಲ ಉತ್ತರ ಕೊಡುವುದಕ್ಕೆ ಸಮಯವಿಲ್ಲ ಎಂದರು.

ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎನ್ನುವ ಧ್ಯೇಯದೊಂದಿಗೆ ಟೀಕೆಗಳಿಗೆ ಯಾವುದೇ ರೀತಿಯ ಉತ್ತರ ನೀಡದೇ ರಾಜ್ಯದ ಜನರಿಗೆ ನಾವು ನೀಡಿದ ಭರವಸೆಗಳನ್ನು ಈಡೇರಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇವೆ. ಇನ್ನೂ, ಒಂದು ದೇಶ,ರಾಜ್ಯದ ಸ್ಥಿತಿಗತಿ ಹೇಗಿದೆ ಎಂಬುದರ ಅಧ್ಯಯನ ಮಾಡಬೇಕಿದ್ದರೇ ಅಲ್ಲಿನ ಮಹಿಳೆಯರ ಸ್ಥಿತಿಗತಿ ಅರಿತುಕೊಳ್ಳುವುದು ಅವಶ್ಯ ಎಂದು ಶಿವಕುಮಾರ್ ನುಡಿದರು.

share
Next Story
X