Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಡಿಶಾ ರೈಲು ದುರಂತಕ್ಕೆ...

ಒಡಿಶಾ ರೈಲು ದುರಂತಕ್ಕೆ ‘ಮಾನವಹಸ್ತಕ್ಷೇಪ’ಕಾರಣ?: ಮಾಜಿ ಎನ್ಐಎ, ರಾ ವರಿಷ್ಠರು ಸಹಿತ 270 ಗಣ್ಯರಿಂದ ಪ್ರಧಾನಿಗೆ ಪತ್ರ

11 Jun 2023 10:17 PM IST
share
ಒಡಿಶಾ ರೈಲು ದುರಂತಕ್ಕೆ ‘ಮಾನವಹಸ್ತಕ್ಷೇಪ’ಕಾರಣ?: ಮಾಜಿ ಎನ್ಐಎ, ರಾ ವರಿಷ್ಠರು ಸಹಿತ 270 ಗಣ್ಯರಿಂದ ಪ್ರಧಾನಿಗೆ ಪತ್ರ

ಹೊಸದಿಲ್ಲಿ: ಒಡಿಶಾ ರೈಲು ದುರಂತ ಹಾಗೂ ಭಾರತದ ರಾಷ್ಟ್ರೀಯ ಭದ್ರತೆ ಹಾಗೂ ಪ್ರಗತಿಯನ್ನು  ದುರ್ಬಲಗೊಳಿಸಲು ನಡೆಯುತ್ತಿದೆಯೆನ್ನಲಾದ ಪ್ರಯತ್ನಗಳ ಬಗ್ಗೆ ಕಳವಳ ವ್ಯಕ್ತಪಡಿಸಿ ನಿವೃತ್ತ ನ್ಯಾಯಾಧೀಶರು, ನಿವೃತ್ತ ಉನ್ನತ ಅಧಿಕಾರಿಗಳು, ಮಾಜಿ ರಾಯಭಾರಿಗಳು, ಭಾರತೀಯ ಬೇಹುಗಾರಿಕಾ ಸಂಸ್ಥೆ ‘ರಾ’ದ ಮಾಜಿ ಮುಖ್ಯಸ್ಥ, ಮಾಜಿ ಎನ್ಐಎ ನಿರ್ದೇಶಕ ಹಾಗೂ ನಿವೃತ್ತ ಸೇನಾಧಿಕಾರಿಗಳು ಸೇರಿದಂತೆ 270 ಪ್ರಮುಖ ನಾಗರಿಕರು ಪ್ರಧಾನಿ ನರೇಂದ್ರ ಮೋದಿಯವರಿಗೆ ರವಿವಾರ ಪತ್ರ ಬರೆದಿದ್ದಾರೆ.

ಒಡಿಶಾದಲ್ಲಿ 288 ಮಂದಿಯನ್ನು ಬಲಿತೆಗೆದುಕೊಂಡ ಹಾಗೂ ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡ ತ್ರಿವಳಿ ರೈಲುದುರಂತವು  ಉದ್ದೇಶಪೂರ್ವಕವಾಗಿ ನಡೆಸಲಾದ ‘ಮಾನವ ಹಸ್ತಕ್ಷೇಪ’ದಿಂದಾಗಿ ಸಂಭವಿಸಿದೆ ಹಾಗೂ  ಅದು ಉಗ್ರಗಾಮಿ ಸಂಘಟನೆಗಳ ಕುಮ್ಮಕ್ಕಿನಿಂದಾಗಿ ನಡೆದ ವಿಧ್ವಂಸಕ ಕೃತ್ಯವಾಗಿರಬಹುದು ಎಂದು  ಪ್ರಧಾನಿಗೆ ಬರೆದ ಪತ್ರದಲ್ಲಿ ಸಂದೇಹ ವ್ಯಕ್ತಪಡಿಸಿದ್ದಾರೆ.

‘‘ ನಮ್ಮಲ್ಲಿ ಕೆಲವರು ಜಮ್ಮುಕಾಶ್ಮೀರ ಹಾಗೂ ಈಶಾನ್ಯ ಭಾರತದಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯಲ್ಲಿ ಕೆಲಸ ಮಾಡಿದ್ದು, ಅಲ್ಲಿ ರೈಲ್ವೆ ಜಾಲಗಳ ಮೇಲೆ ವಿಧ್ವಂಸಕಕೃತ್ಯಗಳು ನಡೆದಿರುವಂತಹ ಸನ್ನಿವೇಶಗಳನ್ನು ಎದುರಿಸಿದ್ದೇವೆ. ರೈಲ್ವೆ ಜಾಲಗಳಿಗೆ ಹಾನಿ ಮಾಡಲು ಹಾಗೂ ಎಂಟು ಭೀಕರ ಅವಘಡಗನ್ನು ನಡೆಸುವ ಉಗ್ರರ ಪ್ರಯತ್ನಗಳು ಸಮರ್ಪಕ ಭದ್ರತಾ ನಿಯೋಜನೆಗಳನ್ನು ಮಾಡಿದ್ದರಿಂದ ವಿಫಲವಾಗಿದ್ದವು ಎಂದವರು ನೆನಪಿಸಿದ್ದಾರೆ.ಜಮ್ಮುವಿನಲ್ಲಿ 1990 ಹಾಗೂ 2000ನೇ ಇಸವಿಯ ಆರಂಭದಲ್ಲಿ ಕೆಲವು ರೈಲ್ವೆ ಹಳಿಗಳಿಗೆ ಹಾನಿಯುಂಟು ಮಾಡಿದ ಕೆಲವು ಘಟನೆಗಳನ್ನು  ಕೂಡಾ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಭಾರತೀಯ ರೈಲ್ವೆಯು ಸರಕುಗಳು ಹಾಗೂ ಮಾನವರ ಸಾಗಣೆಯ ಜೀವಜಾಲವಾಗಿದೆ ಎಂದು ಬಣ್ಣಿಸಿದ ಅವರು ದೇಶದ ಪ್ರಗತಿಯನ್ನು ಸಹಿಸದಕೆಲವು ಶಕ್ತಿಗಳು ರೈಲ್ವೆ ಜಾಲಗಳಿಗೆ ಹಾನಿಯುಂಟು ಮಾಡಲು ಹಾಗೂ ಭೀಕರ ಮಾನವ ದುರಂತವನ್ನು ಸೃಷ್ಟಿಸಲು ಬಯಸುತ್ತಿವೆ ಎಂದು ಪತ್ರವು ಹೇಳಿದೆ.

ತಥಾಕಥಿತ ಚಿಕನ್ ನೆಕ್ ಪ್ರದೇಶ (ಪ.ಬಂಗಾಳದ ಸಿಲಿಗುರಿ ನಗರದ ಸುತ್ತಲಿನ 20-22 ಕಿ.ಮೀ.ಪ್ರದೇಶವಾಗಿದ್ದು, ಭಾರತದ ಮುಖ್ಯಭೂಮಿಯೊಂದಿಗೆ ಈಶಾನ್ಯದ ಎಂಟು ರಾಜ್ಯಗಳನ್ನು ಸಂಪರ್ಕಿಸುತ್ತದೆ) ಸೇರಿದಂತೆ ಪೂರ್ವ ಹಾಗೂ ಈಶಾನ್ಯರಾಜ್ಯಗಳಲ್ಲಿ ಇಡೀ ರೈಲ್ವೆ ಜಾಲವು ದಾಳಿಗೆ ಸುಲಭದಲ್ಲಿ ತುತ್ತಾಗುವಂತಹ ಸ್ಥಿತಿಯಲ್ಲಿದೆ. ಅಕ್ರಮವಲಸಿಗರು ಸೇರಿದಂತೆ ರೈಲ್ವೆ ಹಳಿಗಳಲ್ಲಿ ಅಕ್ರಮವಾಗಿ ಅಲೆದಾಡುವವರನ್ನು  ತೆರವುಗೊಳಿಸಬೇಕು ಹಾಗೂ ನಮ್ಮ ರೈಲು ಹಳಿಗಳ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದವರು ಹೇಳಿದರು.

ರಾಜಸ್ತಾನ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಅನಿಲ್ ದಿಯೋ ಸಿಂಗ್, ಗುಜರಾತ್ ಹೈಕೋರ್ಟ್ನ ಮಾಜಿ ನ್ಯಾಯಾಧೀಶ ಎಸ್.ಎಂ. ಸೋನಿ, ಉತ್ತರಪ್ರದೇಶದ ಮಾಜಿ ಡಿಜಿಪಿ ವಿಕ್ರಂ ಸಿಂಗ್, ಮಹಾರಾಷ್ಟ್ರದ ಮಾಜಿ ಡಿಜಿಪಿ ಪ್ರವೀಣ್ ದೀಕ್ಷಿತ್ ಮತ್ತಿತರರು ಪತ್ರಕ್ಕೆ ಸಹಿಹಾಕಿದವರಲ್ಲಿ ಸೇರಿದ್ದಾರೆ.

share
Next Story
X