Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಸವ ಸಂದರ್ಭ ಮೃತಪಟ್ಟ ಶಿಶುವನ್ನು ಕಸದ...

ಪ್ರಸವ ಸಂದರ್ಭ ಮೃತಪಟ್ಟ ಶಿಶುವನ್ನು ಕಸದ ತೊಟ್ಟಿಗೆ ಎಸೆದು ಸುಟ್ಟು ಹಾಕಿದ ಆಸ್ಪತ್ರೆ ಸಿಬ್ಬಂದಿ

11 Jun 2023 10:23 PM IST
share
ಪ್ರಸವ ಸಂದರ್ಭ ಮೃತಪಟ್ಟ ಶಿಶುವನ್ನು ಕಸದ ತೊಟ್ಟಿಗೆ ಎಸೆದು ಸುಟ್ಟು ಹಾಕಿದ ಆಸ್ಪತ್ರೆ ಸಿಬ್ಬಂದಿ

ರಾಂಚಿ: ಇಲ್ಲಿನ ಗರವಾದ ಮಾಝಿಯಾನ್ ರೆಫರಲ್ ಆಸ್ಪತ್ರೆಯ ಸಿಬ್ಬಂದಿ ಪ್ರಸವ ಸಂದರ್ಭ ಮೃತಪಟ್ಟ ಶಿಶುವನ್ನು ಅದರ ಕುಟುಂಬಕ್ಕೆ ಹಸ್ತಾಂತರಿಸದೆ  ಉರಿಯುತ್ತಿರುವ ಕಸದ ತೊಟ್ಟಿಗೆ ಎಸೆದು ಸುಟ್ಟು ಹಾಕಿದ ಘಟನೆ ನಡೆದಿದೆ. 

‘‘ನಾವು ಶಿಶುವಿನ ಅಂತಿಮ ವಿಧಿ ವಿಧಾನ ನೆರವೇರಿಸಲು ಬಟ್ಟೆ ತರಲು ಮಾರುಕಟ್ಟೆಗೆ ತೆರಳಿದ್ದೆವು. ಈ ಸಂದರ್ಭ ಆಸ್ಪತ್ರೆಯ ಸಿಬ್ಬಂದಿ ಶಿಶುವಿನ ಮೃತದೇಹವನ್ನು ಉರಿಯುತ್ತಿರುವ ಕಸದ ತೊಟ್ಟಿಗೆ ಎಸೆದಿದ್ದಾರೆ. ಶಿಶು ಜನಿಸಿದ ಗಂಟೆಗಳ ಬಳಿಕ ಈ ಘಟನೆ ನಡೆದಿದೆ’’ ಎಂದು ಕುಟುಂಬ ಹೇಳಿದೆ. 

‘‘ನಾವು ಶಿಶುವಿನ ಮೃತದೇಹದ ಬಗ್ಗೆ ಪ್ರಶ್ನಿಸಿದಾಗ  ಸಿಬ್ಬಂದಿ, ಶಿಶುವನ್ನು ಕಸದೊಂದಿಗೆ ಸುಟ್ಟು ಹಾಕಿದ್ದೇವೆ ಎಂದು ತಿಳಿಸಿದ್ದರು’’ ಎಂದು ಕುಟುಂಬ ಹೇಳಿದೆ. 

‘‘ನಾನು ನನ್ನ ಗರ್ಭಿಣಿ ಮಗಳು ಮಧು ದೇವಿಯನ್ನು ಶನಿವಾರ ಅಪರಾಹ್ನ 3 ಗಂಟೆಗೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದೆ. ಒಂದೂವರೆ ಗಂಟೆಗಳ ಬಳಿಕ ಪ್ರಸವದ ಸಂದರ್ಭ ಶಿಶು ಮೃತಪಟ್ಟಿತ್ತು. ಆದರೆ, ಆಸ್ಪತ್ರೆಯ ಸಿಬ್ಬಂದಿ ದೌಲತ್ ದೇವಿಯವರೊಂದಿಗೆ ನಿರ್ಮಲಾ ಕುಮಾರಿ ಹಾಗೂ ಮಂಜು ಕುಮಾರಿ  ಸೇರಿ ಶಿಶುವಿನ ಮೃತದೇಹವನ್ನು ಆಸ್ಪತ್ರೆಯ ಕ್ಯಾಂಪಸ್ ನಲ್ಲಿರುವ  ಕಸದ ತೊಟ್ಟಿಗೆ ಎಸೆದಿದ್ದಾರೆ. 

ಈ ಸಂದರ್ಭ ಕಸದ ತೊಟ್ಟಿಯಲ್ಲಿ ಬೆಂಕಿ ಉರಿಯುತ್ತಿತು. ಶಿಶುವಿನ ಮೃತದೇಹ ಕಸದೊಂದಿಗೆ ಸುಟ್ಟು ಬೂದಿಯಾಯಿತು ಎಂದು ಶಿಶುವಿನ ಅಜ್ಜಿ ರಾಜಮತಿ ದೇವಿ ಹೇಳಿದ್ದಾರೆ. 

ಈ ನಡುವೆ ಘಟನೆ ಕುರಿತಂತೆ ಸಿಬ್ಬಂದಿ ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿದ್ದಾರೆ. ಘಟನೆ ಕುರಿತಂತೆ ಸಂತಾಪ ವ್ಯಕ್ತಪಡಿಸಿರುವ ಗರವಾ ಸಿವಿಲ್ ಸರ್ಜನ್ ಡಾ. ಅನಿಲ್ ಸಿಂಗ್, ಆಸ್ಪತ್ರೆಯ ಸಿಬ್ಬಂದಿಯ ವರ್ತನೆಯನ್ನು ಅಮಾನವೀಯ ಎಂದು ಹೇಳಿದ್ದಾರೆ.  

‘‘ನಿಸ್ಸಂಶಯವಾಗಿ ಇದು ಅಮಾನವೀಯ ಕೃತ್ಯವಾಗಿದೆ. ಈ ಘೋರ ಕೃತ್ಯದಲ್ಲಿ ಭಾಗಿಯಾದವರನ್ನು ಸುಮ್ಮನೆ ಬಿಡುವುದಿಲ್ಲ. ಇದರಲ್ಲಿ ಭಾಗಿಯಾದವರ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು ಹಾಗೂ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು’’ ಎಂದು ಸಿವಿಲ್ ಸರ್ಜನ್ ಡಾ. ಅನಿಲ್ ಸಿಂಗ್ ತಿಳಿಸಿದ್ದಾರೆ. 

ಶಿಶುವಿನ ಮೃತದೇಹವನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಬೇಕಿತ್ತು ಎಂದು ಅವರು ಹೇಳಿದ್ದಾರೆ. ‘‘ನಮ್ಮ ಆಸ್ಪತ್ರೆಯಲ್ಲಿ ಇಂತಹ ಅಸೂಕ್ಷ್ಮ ಸಿಬ್ಬಂದಿಯ ಅಗತ್ಯ ಇಲ್ಲ. ಅವರನ್ನು ಕೆಲಸದಿಂದ ವಜಾಗೊಳಿಸಲು ಪರಿಶೀಲನೆ ನಡೆಸುತ್ತೇವೆ’’ ಎಂದು ಅವರು ತಿಳಿಸಿದ್ದಾರೆ.  


ಮೃತಪಟ್ಟ ನವಜಾತ ಶಿಶುವನ್ನು ಕಸದ ತೊಟ್ಟಿಗೆ ಎಸೆದು ಸುಟ್ಟು ಹಾಕಿರುವುದು   ಮಾನವತೆಗೆ ಮಾಡಿದ ಅವಮಾನ. ಈ ಘಟನೆ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಆಸ್ಪತ್ರೆಯ ಉಸ್ತುವಾರಿ ಡಾ. ಗೋವಿಂದ ಸೇಥ್ ಹೇಳಿದ್ದಾರೆ. 

share
Next Story
X