Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜೆಪ್ಪುಸಂತ ಅಂತೋನಿ ಆಶ್ರಮಕ್ಕೆ ಸ್ಪೀಕರ್...

ಜೆಪ್ಪುಸಂತ ಅಂತೋನಿ ಆಶ್ರಮಕ್ಕೆ ಸ್ಪೀಕರ್ ಯು.ಟಿ. ಖಾದರ್ ಭೇಟಿ

12 Jun 2023 7:59 PM IST
share
ಜೆಪ್ಪುಸಂತ ಅಂತೋನಿ ಆಶ್ರಮಕ್ಕೆ ಸ್ಪೀಕರ್ ಯು.ಟಿ. ಖಾದರ್ ಭೇಟಿ

ಮಂಗಳೂರು, ಜೂ. 12: ಕರ್ನಾಟಕ ವಿಧಾನ ಸಭೆಯ ನೂತನ  ಸ್ಪೀಕರ್ ಯು.ಟಿ. ಖಾದರ್  ಸೋಮವಾರ  ಮಂಗಳೂರಿನ ಜೆಪ್ಪುವಿನ ಸೈಂಟ್  ಅಂತೋನಿ ಆಶ್ರಮಕ್ಕೆ  ಭೇಟಿ ನೀಡಿದರು.

ಕೆಥೋಲಿಕ್ ಸಭಾ ಮಂಗಳೂರು ಪ್ರದೇಶದ ಅಧ್ಯಕ್ಷ  ಅಲ್ವಿನ್ ಡಿ ಸೋಜ  ಅವರು ಖಾದರ್‌ನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ  ಖಾದರ್ ಅವರು ಸ್ಪೀಕರ್ ಆಗಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವುದಾಗಿ  ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶಿಷ್ಟ ‘ಗ್ಯಾರಂಟಿ’ ಮೂಲಕ ರಾಜ್ಯದ ಹಿತ ಕಾಪಾಡುತ್ತಿ ದ್ದಾರೆ. ನೂರಾರು ವರ್ಷಗಳಿಂದ ಬಡಜನರಿಗೆ ಉಚಿತ ವಸತಿ, ಬಟ್ಟೆ, ಆಹಾರ ನೀಡುವ ಸಂತ ಅಂತೋನಿ ಚ್ಯಾರಿಟಿ ಸಂಸ್ಥೆ ಅತ್ಯಂತ  ಉತ್ತಮ  ಪುಣ್ಯಕ್ಷೇತ್ರವಾಗಿದೆ  ಎಂದು ಶ್ಲಾಘಿಸಿದರು.

ಸಂತ ಆಂತೊನಿ ವಾರ್ಷಿಕ ಮಹೋತ್ಸವಕ್ಕೆ  ಖಾದರ್ ಶುಭ ಹಾರೈಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿ ಸೋಜ ಮಾತನಾಡಿ, ವಿಧಾನ ಸಭೆಯ  ಸ್ಪೀಕರ್  ಖಾದರ್ ಅವರು ಜನಸ್ನೇಹಿ ವ್ಯಕ್ತಿ. ಶಾಸಕರಾಗಿ, ಸಚಿವರಾಗಿ ಯಶಸ್ವಿಯಾಗಿರುವ ಖಾದರ್ ಬಗ್ಗೆ ನಾವು ಹೆಮ್ಮೆಪಡುತ್ತೇವೆ ಎಂದರು.

ಅಭಿನಂದನಾ ಭಾಷಣ ಮಾಡಿದ ವಕೀಲ ಎಂ ಪಿ ನೊರೊನ್ಹಾ  ಅವರು ಯು.ಟಿ.ಖಾದರ್ ಜನಪ್ರೀಯ ನಾಯಕ ಮಾತ್ರವಲ್ಲ ಅವರುದ್ವನಿ ಇಲ್ಲದವರ  ಧ್ವನಿಯಾಗಿದ್ದಾರೆ. ಭಾರತದ ಸಂವಿಧಾನದ ಆಶಯ ಮತ್ತು ತತ್ವಗಳಿಗೆ ಗೌರವಕೊಡುವ ಸರಳ ಸಜ್ಜನಿಕೆಯ ಸುಜ್ಞಾನಿ ಎಂದು ಅಭಿಪ್ರಾಯಪಟ್ಟರು.

ಆಶ್ರಮದ ಟ್ರಸ್ಟಿಗಳಾದ ಡಾ. ಜಾನ್ ಡಿ ಸಿಲ್ವಾ ಮತ್ತು  ಮಾರ್ಸೆಲ್ ಮೊಂತೆರೊ, ಮನಪಾ ವಿಪಕ್ಷ ನಾಯಕ ನವೀನ್ ಡಿ ಸೋಜ,  ಮಾಜಿ ಮೇಯರ್ ಜೆಸಿಂತಾ ಅಲ್ಫ್ರೇಡ್, ಮಾಜಿ ಉಪ ಮೇಯರ್ ಲ್ಯಾನ್ಸ್‌ಲೋಟ್ ಪಿಂಟೊ, ಫಾದರ್ ಮುಲ್ಲರ್ ಚಾರಿಟಬಲ್ ಆಡಳಿತಾಧಿಕಾರಿ ಅಜಿತ್ ಮೆನೆಜಸ್, ಮಂಗಳೂರು ಧರ್ಮಪ್ರಾಂತ್ಯದ  ಪಿಆರ್‌ಒ ರಾಯ್ ಕ್ಯಾಸ್ಟಲಿನೊ, ಕೆನರಾ ಕಮ್ಯುನಿಕೇಶನ್  ಸೆಂಟರ್‌ನ  ನಿರ್ದೇಶಕ ಫಾ.ಅನಿಲ್ ಫೆರ್ನಾಂಡಿಸ್, ನಿರ್ದೇಶಕ , ಮತ್ತು ಫಾ. ನೆಲ್ಸನ್ ಪೆರಿಸ್, ಬೆಥನಿ ಸಭೆಯ ಪ್ರಾಂತೀಯ ಸುಪೀರಿಯರ್  ಭ. ಸಿಸಿಲಿಯಾ ಮೆಂಡೋನ್ಸಾ, ರೋಶೆಲ್ ಬಿ ಎಸ್ ಉಪಸ್ಥಿತರಿದ್ದರು.

ಸಂಸ್ಥೆಯ ನಿರ್ದೇಶಕ  ಫಾ. ಜೆ.ಬಿ. ಕ್ರಾಸ್ತಾ  ಸ್ವಾಗತಿಸಿ, ಆಡಳಿತ ಮಂಡಳಿಯ ಸದಸ್ಯ ಜಾನ್ ಡಿ ಸಿಲ್ವ  ವಂದಿಸಿ ದರು. ಆಶ್ರಮದ ಸಹಾಯಕ ನಿರ್ದೇಶಕ  ಫಾ. ಅವಿನಾಶ್ ಪಾಯ್ಸ್ ಕಾರ್ಯಕ್ರಮ ನಿರೂಪಿಸಿದರು.

share
Next Story
X