Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರೈತರ ಪ್ರತಿಭಟನೆ ವೇಳೆ ಭಾರತದ ಸರಕಾರದಿಂದ...

ರೈತರ ಪ್ರತಿಭಟನೆ ವೇಳೆ ಭಾರತದ ಸರಕಾರದಿಂದ ಒತ್ತಡ, ದಾಳಿ ಬೆದರಿಕೆ: ಟ್ವಿಟರ್‌ ನ ಮಾಜಿ ಸಿಇಒ ಜಾಕ್ ಡೋರ್ಸಿ ಆರೋಪ

13 Jun 2023 11:19 AM IST
share
ರೈತರ ಪ್ರತಿಭಟನೆ ವೇಳೆ ಭಾರತದ ಸರಕಾರದಿಂದ ಒತ್ತಡ, ದಾಳಿ ಬೆದರಿಕೆ: ಟ್ವಿಟರ್‌ ನ ಮಾಜಿ ಸಿಇಒ ಜಾಕ್ ಡೋರ್ಸಿ ಆರೋಪ

ಹೊಸದಿಲ್ಲಿ: ರೈತರ ಪ್ರತಿಭಟನೆಗಳು ಹಾಗೂ  ಕೇಂದ್ರವನ್ನು ಟೀಕಿಸುವ ಪತ್ರಕರ್ತರಿಗೆ ಸಂಬಂಧಿಸಿದಂತೆ ಭಾರತ ಸರಕಾರ ಟ್ವಿಟರ್‌ಗೆ ಹಲವಾರು ವಿನಂತಿಗಳನ್ನು ಮಾಡಿದೆ.  ಆ ನಂತರ  ಒತ್ತಡ ಹೇರಲಾಯಿತು ಹಾಗೂ  ಟ್ವಿಟರ್ ಉದ್ಯೋಗಿಗಳ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕಲಾಯಿತು  ಎಂದು ಟ್ವಿಟರ್‌ ನ ಮಾಜಿ ಸಿಇಒ ಜಾಕ್ ಡೋರ್ಸಿ ಆರೋಪಿಸಿದ್ದಾರೆ.

ಜೂನ್ 12 ರಂದು ಡೋರ್ಸಿ  ಅವರು ಯೂಟ್ಯೂಬ್ ಚಾನೆಲ್ ಬ್ರೇಕಿಂಗ್ ಪಾಯಿಂಟ್ಸ್‌ಗೆ ನೀಡಿದ ಸಂದರ್ಶನದಲ್ಲಿ ಈ ಆರೋಪಗಳನ್ನು ಮಾಡಿದರು.

 ಟ್ವಿಟರ್‌ನ ಸಿಇಒ ಆಗಿದ್ದ ಸಮಯದಲ್ಲಿ ವಿದೇಶಿ ಸರಕಾರಗಳಿಂದ   ಎದುರಿಸಿದ  ಒತ್ತಡಗಳ ಬಗ್ಗೆ ಡೋರ್ಸಿ ಅವರನ್ನು ಸಂದರ್ಶನದಲ್ಲಿ ಪ್ರಶ್ನಿಸಲಾಯಿತು.

ರೈತರ ಪ್ರತಿಭಟನೆಯ ಕುರಿತು, ಸರಕಾರವನ್ನು ಟೀಕಿಸುವ ನಿರ್ದಿಷ್ಟ ಪತ್ರಕರ್ತರಿಗೆ  ಸಂಬಂಧಿಸಿ  ಭಾರತದಿಂದ   ನಮಗೆ ಅನೇಕ ಬೇಡಿಕೆಗಳನ್ನು ಬಂದಿದೆ.   ನಮಗೆ ಬಹಳ ದೊಡ್ಡ ಮಾರುಕಟ್ಟೆಯಾಗಿರುವ ಭಾರತದಲ್ಲಿ ಟ್ವಿಟರ್ ಅನ್ನು ನಾವು ಮುಚ್ಚುತ್ತೇವೆಯೋ ಎಂಬ ಭಾವನೆ ನಮಗೆ ಬಂದಿತ್ತು. ನಾವು  ನಿಮ್ಮ ಉದ್ಯೋಗಿಗಳ ಮನೆಗಳ ಮೇಲೆ  ದಾಳಿ ಮಾಡುತ್ತೇವೆ ಎಂದು ಬೆದರಿಸಿದರು.   ದಾಳಿ  ಕೂಡಾ ಮಾಡಿದ್ದಾರೆ. ನೀವು ನಮ್ಮ ಸೂಚನೆಗಳನ್ನು  ಪಾಲಿಸದಿದ್ದರೆ ನಾವು ನಿಮ್ಮ ಕಚೇರಿಗಳನ್ನು ಮುಚ್ಚುತ್ತೇವೆ ಎಂದು ಬೆದರಿಸಲಾಗಿತ್ತು.ಇದು ಭಾರತ, ಪ್ರಜಾಪ್ರಭುತ್ವ ದೇಶ ಎಂದು  ಡೋರ್ಸಿ ಹೇಳಿದರು.

ಟರ್ಕಿ ಸೇರಿದಂತೆ ಇತರ ದೇಶಗಳಲ್ಲಿ ಆಗಿರುವ ತನ್ನ ಅನುಭವವನ್ನು ಹಂಚಿಕೊಂಡ ಅವರು  ಭಾರತವನ್ನು ಟರ್ಕಿಗೆ ಹೋಲಿಸಿದರು. ಟರ್ಕಿ ಕೂಡ ಭಾರತದಂತೆಯೇ ಇತ್ತು ಎಂದರು.

ಕೇಂದ್ರ ಎಲೆಕ್ಟ್ರಾನಿಕ್ಸ್ ಹಾಗೂ  ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು  ಟ್ವಿಟರ್ ನ ಮಾಜಿ ಸಿಇಒ ಹೇಳಿಕೆಯನ್ನು  ನಿರಾಕರಿಸಿದ್ದಾರೆ ಮತ್ತು ಇದು ಸಂಪೂರ್ಣ ಸುಳ್ಳು ಎಂದು ಹೇಳಿದ್ದಾರೆ.

 ಡೋರ್ಸಿ  ಅವರು  ಆರೋಪಿಸಿದಂತೆ  ಯಾರ ಮೇಲೂ  ದಾಳಿ ಮಾಡಿಲ್ಲ ಅಥವಾ ಯಾರನ್ನೂ ಜೈಲಿಗೆ ಕಳುಹಿಸಲಾಗಿಲ್ಲ. ಯಾರೂ ಜೈಲಿಗೆ ಹೋಗಲಿಲ್ಲ ಅಥವಾ ಟ್ವಿಟರ್ ಸ್ಥಗಿತಗೊಳಿಸಲಿಲ್ಲ. ಡೋರ್ಸಿಯವರ ಆರೋಪಗಳು "ಟ್ವಿಟ್ಟರ್ ಇತಿಹಾಸದ ಅತ್ಯಂತ ಸಂಶಯಾಸ್ಪದ ಅವಧಿಯನ್ನು ಹೊರಹಾಕುವ ಪ್ರಯತ್ನ"ವಾಗಿದೆ ಎಂದರು.

 "ನಮ್ಮ ಗಮನವು ಭಾರತೀಯ ಕಾನೂನುಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳುವುದರ ಮೇಲೆ ಮಾತ್ರ ಇತ್ತು.  ಡೋರ್ಸಿಯ ನಾಯಕತ್ವದಲ್ಲಿ ಟ್ವಿಟರ್  ಭಾರತೀಯ ಕಾನೂನನ್ನು ಪದೇ ಪದೇ  ಉಲ್ಲಂಘಿಸಿದೆ.  ವಾಸ್ತವವಾಗಿ ಅವರು 2020 ರಿಂದ 2022 ರವರೆಗೆ ಪದೇ ಪದೇ ಕಾನೂನನ್ನು ಅನುಸರಿಸಲಿಲ್ಲ ಹಾಗೂ ಅಂತಿಮವಾಗಿ ಜೂನ್ 2022 ಮಾತ್ರ ಕಾನೂನು ಪಾಲಿಸಿದರು’’ ಎಂದರು.

ಡೋರ್ಸಿ ಅವರ ಟ್ವಿಟರ್ ಆಡಳಿತವು ಭಾರತೀಯ ಕಾನೂನಿನ ಸಾರ್ವಭೌಮತ್ವವನ್ನು ಒಪ್ಪಿಕೊಳ್ಳುವಲ್ಲಿ ಸಮಸ್ಯೆ ಎದುರಿಸುತ್ತಿತ್ತು.  ಭಾರತೀಯ ಕಾನೂನುಗಳು ನಮಗೆ ಅನ್ವಯಿಸುವುದಿಲ್ಲ ಎಂಬಂತೆ ವರ್ತಿಸಿದರು ಎಂದು ಚಂದ್ರಶೇಖರ್ ಹೇಳಿದರು.

2021 ರ ಜನವರಿಯಲ್ಲಿ ರೈತರ ಪ್ರತಿಭಟನೆಯ ಸಮಯದಲ್ಲಿ "ಹಲವಾರು ತಪ್ಪು ಮಾಹಿತಿಗಳು ಹರಡಲಾಗಿತ್ತು. ನರಮೇಧದ ವರದಿಗಳು ಖಚಿತವಾಗಿ ನಕಲಿಯಾಗಿದ್ದವು" ಎಂದು ಚಂದ್ರಶೇಖರ್ ಹೇಳಿದರು.

share
Next Story
X