Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಧ್ಯಪ್ರದೇಶ: ಪ್ರಮುಖ ಇಲಾಖೆಗಳ ದಾಖಲೆ...

ಮಧ್ಯಪ್ರದೇಶ: ಪ್ರಮುಖ ಇಲಾಖೆಗಳ ದಾಖಲೆ ಇರುವ ಕಟ್ಟಡದಲ್ಲಿ ಅಗ್ನಿ ಅವಘಡ; ಹಲವು ಮಹತ್ವದ ದಾಖಲೆಗಳು ನಾಶ

ಕೋವಿಡ್‌ ಪಾವತಿ ಸೇರಿದಂತೆ ಸುಟ್ಟುಹೋದ 12,000 ಕ್ಕೂ ಅಧಿಕ ಪ್ರಮುಖ ಕಡತಗಳು

13 Jun 2023 7:51 PM IST
share
ಮಧ್ಯಪ್ರದೇಶ: ಪ್ರಮುಖ ಇಲಾಖೆಗಳ ದಾಖಲೆ ಇರುವ ಕಟ್ಟಡದಲ್ಲಿ ಅಗ್ನಿ ಅವಘಡ; ಹಲವು ಮಹತ್ವದ ದಾಖಲೆಗಳು ನಾಶ
ಕೋವಿಡ್‌ ಪಾವತಿ ಸೇರಿದಂತೆ ಸುಟ್ಟುಹೋದ 12,000 ಕ್ಕೂ ಅಧಿಕ ಪ್ರಮುಖ ಕಡತಗಳು

ಭೋಪಾಲ್‌: ಮಧ್ಯಪ್ರದೇಶದ ಭೋಪಾಲ್‌ ನಲ್ಲಿರುವ ಸಾತ್ಪುರ ಭವನದಲ್ಲಿ ಸೋಮವಾರ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, 25 ಕೋಟಿ ರೂಪಾಯಿ ಮೌಲ್ಯದ ಪೀಠೋಪಕರಣಗಳು ಮತ್ತು 12,000 ಕ್ಕೂ ಹೆಚ್ಚು ಪ್ರಮುಖ ಕಡತಗಳು ಸುಟ್ಟುಹೋಗಿವೆ ಎಂದು ವರದಿಯಾಗಿವೆ.

ಅಗ್ನಿ ಅವಘಡದ ಹಿಂದೆ ಷಡ್ಯಂತ್ರವಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಬಿಜೆಪಿ ಸರ್ಕಾರವು ಯಾವುದೇ ಸೂಕ್ಷ್ಮ ಅಥವಾ ಮಹತ್ವದ ಕಡತಗಳು ಬೆಂಕಿಯಲ್ಲಿ ನಾಶವಾಗಿಲ್ಲ ಎಂದು ಪ್ರತಿಪಾದಿಸಿದೆ.

ಸಾತ್ಪುರ ಭವನದಲ್ಲಿ ಮಧ್ಯಪ್ರದೇಶ ಸರ್ಕಾರದ ಹಲವಾರು ಇಲಾಖೆಗಳ ಕಛೇರಿ ಕಾರ್ಯ ನಿರ್ವಹಿಸುತ್ತಿದೆ. ಸೋಮವಾರ ಮೂರನೇ ಮಹಡಿಯಲ್ಲಿ ಪ್ರಾರಂಭವಾದ ಬೆಂಕಿಯು ಕಟ್ಟಡದ ನಾಲ್ಕು, ಐದನೇ ಮತ್ತು ಆರನೇ ಮಹಡಿಗಳಿಗೆ ವ್ಯಾಪಿಸಿದೆ.

ಈ ವರ್ಷದ ಕೊನೆಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿರುವುದರಿಂದ ಸರ್ಕಾರದ ಪ್ರಮುಖ ಕಡತಗಳಿರುವ ಕಟ್ಟಡವು ಅಗ್ನಿಗಾಹುತಿಯಾಗಿರುವುದು ಹಲವು ಚರ್ಚೆಗೆ ಕಾರಣವಾಗಿದೆ. 

ಕಳೆದ ಹತ್ತು ವರ್ಷಗಳಲ್ಲಿ ಇದು ಮೂರನೇ ಬಾರಿಗೆ ಸಾತ್ಪುರ ಭವನದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ. ಕಾಕತಾಳೀಯವೆಂಬಂತೆ, 2012 ಮತ್ತು 2018 ರಲ್ಲಿ ಕೂಡಾ ವಿಧಾನಸಭಾ ಚುನಾವಣೆ ನಡೆಯುವ ಮುನ್ನವೇ ಅಗ್ನಿ ಅವಗಢ ನಡೆದಿದೆ. 

ಪ್ರಾಥಮಿಕ ಮಾಹಿತಿ ಪ್ರಕಾರ ಕಟ್ಟಡದ ಮೂರನೇ ಮಹಡಿಯಲ್ಲಿರುವ ಬುಡಕಟ್ಟು ಕಲ್ಯಾಣ ಇಲಾಖೆಯ ಪ್ರಾದೇಶಿಕ ಕಚೇರಿಯಲ್ಲಿ ಸಂಜೆ 4 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ.  ಬೆಂಕಿಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ. ಆದಾಗ್ಯೂ, ಪ್ರಾಥಮಿಕ ಮಾಹಿತಿಯು ಎಸಿಯಲ್ಲಿನ ತಾಂತ್ರಿಕ ದೋಷದಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. 

ಬುಡಕಟ್ಟು ವ್ಯವಹಾರಗಳು, ಆರೋಗ್ಯ, ಅರಣ್ಯ, ಸಾರ್ವಜನಿಕ ಕುಂದುಕೊರತೆಗಳು ಮತ್ತು ರಾಷ್ಟ್ರೀಯ ಮಾಹಿತಿ ವ್ಯವಸ್ಥೆ ಮುಂತಾದ ಇಲಾಖೆಗಳು ಸಾತ್ಪುರ ಭವನದ ಆರು ಮಹಡಿಗಳಲ್ಲಿ ಕಾರ್ಯನಿರ್ವಹಿಸುತ್ತವೆ. ವರದಿಗಳ ಪ್ರಕಾರ, ಕಟ್ಟಡದ ನಾಲ್ಕು ಮಹಡಿಗಳಲ್ಲಿದ್ದ ನೌಕರರ ಸೇವಾ ದಾಖಲೆಗಳು, ದೂರು ದಾಖಲೆಗಳು ಮತ್ತು ಬಜೆಟ್ ಲೆಕ್ಕಪತ್ರ ದಾಖಲೆಗಳು ಸುಟ್ಟು ಭಸ್ಮವಾಗಿವೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ದೂರುಗಳ ಶಾಖೆಯಲ್ಲಿ ದಾಖಲಾದ ದೂರುಗಳ ಕಡತಗಳು ಮತ್ತು ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಆಸ್ಪತ್ರೆಗಳಿಗೆ ಮಾಡಿದ ಪಾವತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸಹ ನಾಶವಾಗಿದೆ ಎಂದು ವರದಿಯಾಗಿದೆ.

share
Next Story
X