Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಕೃತಿ ವಿಕೋಪಗಳಿಗೆ ನೀಡುವ ಪರಿಹಾರ...

ಪ್ರಕೃತಿ ವಿಕೋಪಗಳಿಗೆ ನೀಡುವ ಪರಿಹಾರ ಹೆಚ್ಚಿಸಲು ಕೇಂದ್ರಕ್ಕೆ ಸಚಿವ ಕೃಷ್ಣ ಭೈರೇಗೌಡ ಒತ್ತಾಯ

13 Jun 2023 11:50 PM IST
share
ಪ್ರಕೃತಿ ವಿಕೋಪಗಳಿಗೆ ನೀಡುವ ಪರಿಹಾರ ಹೆಚ್ಚಿಸಲು ಕೇಂದ್ರಕ್ಕೆ ಸಚಿವ ಕೃಷ್ಣ ಭೈರೇಗೌಡ ಒತ್ತಾಯ

ಹೊಸದಿಲ್ಲಿ, ಜೂ.13: ಬೆಳೆ ಹಾನಿ, ಬರಗಾಲ, ಅತಿವೃಷ್ಟಿ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳಿಗೆ ನೀಡುವ ಪರಿಹಾರ ಹಣ ಬಹಳಷ್ಟು ಕಡಿಮೆ ಪ್ರಮಾಣದಲ್ಲಿದ್ದು ಅದನ್ನು ಪರಿಷ್ಕರಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಮನವಿ ಮಾಡಿದ್ದಾರೆ.

ಮಂಗಳವಾರ ವಿವಿಧ ರಾಜ್ಯಗಳ ವಿಪತ್ತು ನಿರ್ವಹಣಾ ಸಚಿವರ ಜೊತೆಗೆ ಅಮಿತ್ ಶಾ ನಡೆಸಿದ ಸಭೆಯಲ್ಲಿ ಭಾಗಿಯಾದ ಅವರು, ಕೇಂದ್ರ ಸರಕಾರದಿಂದ ಬಿಡುಗಡೆಯಾಗುವ ಬರಗಾಲ, ಅತಿವೃಷ್ಠಿ, ಮಳೆ ಹಾನಿ, ಬೆಳೆ ಪರಿಹಾರ ಮೊತ್ತ ಕಡಿಮೆ ಇದ್ದು ಅದನ್ನು ಪರಿಷ್ಕರಣೆಯಾಗಬೇಕು ಎಂದು ಒತ್ತಾಯಿಸಿದರು.

ಸಭೆ ಬಳಿಕ ಕರ್ನಾಟಕ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೂರು ಅಂಶಗಳನ್ನು ಸಭೆಯಲ್ಲಿ ಪ್ರಸ್ತಾಪಿಸಿದ್ದೇನೆ. ಮೊದಲನೆಯದಾಗಿ ಮಳೆ ಆಶ್ರಿತ ಪ್ರತಿ ಹೆಕ್ಟೇರ್ ಭೂಮಿಗೆ 8500 ರೂ.ಬೆಳೆ ಹಾನಿ ಪರಿಹಾರ ನೀಡಲಾಗುತ್ತಿದೆ ಅದನ್ನು 20 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು, ನೀರಾವರಿ ಭೂಮಿಗೆ 17 ಸಾವಿರ ರೂ. ನೀಡಲಾಗುತ್ತಿದೆ ಇದನ್ನು 35 ಸಾವಿರರೂ.ಗೆ ಹೆಚ್ಚಿಸಬೇಕು. ತೋಟಗಾರಿಕೆ ಬೆಳೆ ಹಾನಿಗೆ 22 ಸಾವಿರ ರೂ.ಗಳಿಂದ 49 ಸಾವಿರರೂ.ಗಳಿಗೆ ಹೆಚ್ಚಿಸಲು ಮನವಿ ಮಾಡಿದ್ದೇನೆ ಎಂದರು.

ಇದು ಬಹಳಷ್ಟು ವರ್ಷಗಳಿಂದಿರುವ ಸಾರ್ವಜನಿಕರ ಒತ್ತಾಯವಾಗಿದೆ. ಸದ್ಯ ರಾಜ್ಯ ಸರಕಾರ ಕೈಯಿಂದ ಹಣ ಹಾಕಿ ಹೆಚ್ಚಿನ ಪರಿಹಾರ ನೀಡಲಾಗುತ್ತಿದೆ. ಇದು ರಾಜ್ಯ ಸರಕಾರಗಳಿಗೆ ಹೊರೆಯಾಗುತ್ತಿದೆ. ಕರ್ನಾಟಕದ ಎಸ್‍ಡಿಆರ್‍ಎಫ್‍ಗೆ ಈಗಾಗಲೆ ಅನುದಾನ ಕಡಿಮೆ ಬರುತ್ತಿದೆ. ಹೀಗಾಗಿ ಕೇಂದ್ರದಿಂದ ನೀಡುವ ಪರಿಹಾರ ಮೊತ್ತ ಹೆಚ್ಚಿಸಬೇಕೆಂದು ಆಗ್ರಹಿಸಲಾಗಿದೆ ಎಂದು ಕೃಷ್ಣ ಭೈರೇಗೌಡ ಹೇಳಿದರು.

ಅಕ್ಟೋಬರ್ ನಲ್ಲಿ ಕೇಂದ್ರ ಸರಕಾರ ಪಕೃತಿ ವಿಕೋಪ ಮಾರ್ಗಸೂಚಿಯಲ್ಲಿ ನಿಯಮ ಬದಲಾಯಿಸಿದೆ. ಸರಕಾರ ನೀಡುವ ಪರಿಹಾರ ಮೊತ್ತದಲ್ಲಿ ವಿಮಾ ಕಂಪನಿಗಳು ವಿಮಾ ಮೊತ್ತವನ್ನು ಕಡಿತಗೊಳಿಸಿ ನೀಡುವ ನಿಯಮವನ್ನು ತೆಗೆದು ಹಾಕಬೇಕು, ಇದರಿಂದ ರೈತರು ಮತ್ತು ಸರಕಾರಕ್ಕೆ ನಷ್ಟವಾಗುತ್ತಿದ್ದು ವಿಮಾ ಕಂಪನಿಗಳಿಗೆ ದೊಡ್ಡ ಲಾಭವಾಗುತ್ತಿದೆ ಇದನ್ನು ಬದಲಾಯಿಸಬೇಕು ಎಂದು ಅವರು ಹೇಳಿದರು.

ಕಡೆಯದಾಗಿ ಸಿಡಿಲು ಮಳೆ ಜಾಸ್ತಿಯಾಗುತ್ತಿರುವ ಹಿನ್ನಲೆ ಅದರ ಮುನ್ಸೂಚನೆ ಪತ್ತೆ ಹಚ್ಚಬೇಕಿದೆ. ಅದಕ್ಕಾಗಿ ಡಾಪ್ಲರ್ ರಾಡಾರ್ ಅಳವಡಿಸಬೇಕು. ರಾಡಾರ್ ಅಳವಡಿಸಲು ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿದೆ ಎಂದು ಕೃಷ್ಣ ಭೈರೇಗೌಡ ಹೇಳಿದರು.

share
Next Story
X