Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಲ ಮಾಲಿನ್ಯಕ್ಕೆ ಕಾರಣವಾದ ಭಾರತೀಯ...

ಜಲ ಮಾಲಿನ್ಯಕ್ಕೆ ಕಾರಣವಾದ ಭಾರತೀಯ ಸೇನೆಗೆ ದಂಡ ವಿಧಿಸಿದ ಲಡಾಖ್ ಕೇಂದ್ರಾಡಳಿತ ಪ್ರದೇಶ

14 Jun 2023 11:20 AM IST
share
ಜಲ ಮಾಲಿನ್ಯಕ್ಕೆ ಕಾರಣವಾದ ಭಾರತೀಯ ಸೇನೆಗೆ ದಂಡ ವಿಧಿಸಿದ ಲಡಾಖ್ ಕೇಂದ್ರಾಡಳಿತ ಪ್ರದೇಶ

ಹೊಸದಿಲ್ಲಿ: ಅಸಾಮಾನ್ಯ ಬೆಳವಣಿಗೆಯೊಂದರಲ್ಲಿ ಲಡಾಖ್ ಕೇಂದ್ರಾಡಳಿತ ಪ್ರದೇಶವು ಭಾರತೀಯ ಸೇನೆಗೆ ದಂಡ ವಿಧಿಸಿದೆ ಹಾಗೂ  ಜಲ ಮಾಲಿನ್ಯಕ್ಕೆ ಕಾರಣವಾಗಿದ್ದಕ್ಕೆ ಶೋಕಾಸ್ ನೋಟಿಸ್ ನೀಡಿದೆ.

ಕಳೆದ ವಾರ ನೀಡಲಾಗಿರುವ ಶೋಕಾಸ್ ನೋಟಿಸ್  ಅನ್ನು ಲಡಾಖ್‌ನ ಲೇಹ್‌ನಲ್ಲಿರುವ ಸ್ಟೇಷನ್ ಕಮಾಂಡರ್‌ಗೆ ಕಳುಹಿಸಲಾಗಿದೆ,  ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊ ಕ್ಲಿಪ್ ಅನ್ನು ಉಲ್ಲೇಖಿಸಿದೆ. 

 “ಸೇನೆಯ ಕೊಳಚೆ ನೀರು ಸಾಗಿಸುವ ಕಂಟೈನರ್  ಸಂಸ್ಕರಿಸದ ಕೊಳಚೆ ನೀರನ್ನು G.H. ರಸ್ತೆಯ ಸ್ಕಾರ ಸ್ಟ್ರೀಮ್ ನಲ್ಲಿ ನೇರವಾಗಿ ಹೊರಹಾಕುವ ಕೆಲಸಯಲ್ಲಿ ತೊಡಗಿದೆ.  ಇದು ತೀವ್ರ ಜಲಮಾಲಿನ್ಯಕ್ಕೆ ಕಾರಣವಾಗುತ್ತದೆ" ಎಂದು ತಿಳಿಸಲಾಗಿದೆ.

" ವೀಡಿಯೊ ಕ್ಲಿಪ್ ವೇಗವಾಗಿ ಹರಡಿದೆ, ಸಾಕಷ್ಟು ಸಂಖ್ಯೆಯ ವೀಕ್ಷಕರನ್ನು ಆಕರ್ಷಿಸುತ್ತಿದೆ ಹಾಗೂ ಆನ್‌ಲೈನ್ ಸಮುದಾಯದಲ್ಲಿ ಸಾಕಷ್ಟು  ಕಳವಳಕ್ಕೆ ಕಾರಣವಾಗಿದೆ'' ಎಂದು  ನೋಟಿಸ್ ಹೇಳಿದೆ.

ಪರಿಸರ (ರಕ್ಷಣೆ) ಕಾಯಿದೆ, 1986 ರ ಅಡಿಯಲ್ಲಿ ವಿವಿಧ ಮೂಲಗಳಿಂದ ಪರಿಸರ ಮಾಲಿನ್ಯಕಾರಕಗಳ ಸಾಮಾನ್ಯ ವಿಸರ್ಜನೆಯ ಮಾನದಂಡಗಳನ್ನು ವಿವರಿಸುವ ಕೇಂದ್ರ ಸರಕಾರದ ಆದೇಶವನ್ನು ಲಡಾಖ್ ಆಡಳಿತ ಮತ್ತು ಮಾಲಿನ್ಯ ನಿಯಂತ್ರಣ ಸಮಿತಿಯು ಉಲ್ಲೇಖಿಸಿದೆ.

ಮಾಲಿನ್ಯ ನಿಯಂತ್ರಣ ಸಮಿತಿಯು ಪರಿಸರ ಹಾನಿಗೆ ಕಾರಣವಾಗಿದ್ದಕ್ಕೆ  5,000 ರೂಪಾಯಿಗಳ "ಪರಿಸರ ಪರಿಹಾರ" (EC) ಠೇವಣಿ ಇಡಲು ಸೇನಾ ಘಟಕಕ್ಕೆ ನಿರ್ದೇಶನ ನೀಡಿದೆ.

ಸೇನೆಯ ಕಂಟೈನರ್‌ನಲ್ಲಿ ಸಂಸ್ಕರಿಸದ ಕೊಳಚೆ ನೀರನ್ನು ಸ್ಟ್ರೀಮ್‌ಗೆ ಬಿಡುವ ವೀಡಿಯೊವನ್ನು ಟ್ವಿಟರ್ ಸೇರಿದಂತೆ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಲವಾರು ಬಳಕೆದಾರರು ಹಂಚಿಕೊಂಡಿದ್ದಾರೆ.

ಟ್ವಿಟರ್ ವೊಂದಕ್ಕೆ  ಪ್ರತಿಕ್ರಿಯಿಸಿದ ಲಡಾಖ್‌ನಲ್ಲಿರುವ ಭಾರತೀಯ ಸೇನಾ ಘಟಕದ ಫೈರ್ ಮತ್ತು ಫ್ಯೂರಿ ಕಾರ್ಪ್ಸ್, “ಫೈರ್ ಅಂಡ್ ಫ್ಯೂರಿ ಕಾರ್ಪ್ಸ್‌ನ ಭಾವನೆಗಳನ್ನು ಪ್ರತಿಬಿಂಬಿಸದ ಈ ಒಂದು ಘಟನೆಗೆ ನಾವು ವಿಷಾದಿಸುತ್ತೇವೆ. ನಾವು ನಗರಾಡಳಿತದೊಂದಿಗೆ ನಿಕಟ ಸಮನ್ವಯದೊಂದಿಗೆ ಕ್ಲೀನ್ ಮತ್ತು ಗ್ರೀನ್ ಲಡಾಖ್‌ಗೆ ಬದ್ಧರಾಗಿರುತ್ತೇವೆ. ಅಗತ್ಯ ಸರಿಪಡಿಸುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ'' ಎಂದಿದೆ.

share
Next Story
X