Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾಲಕನನ್ನು ತಿಂದಿದ್ದ ಮೊಸಳೆಯನ್ನು...

ಬಾಲಕನನ್ನು ತಿಂದಿದ್ದ ಮೊಸಳೆಯನ್ನು ನದಿಯಿಂದ ಹೊರಗೆಳೆದು ಥಳಿಸಿ ಕೊಂದ ಕುಟುಂಬಸ್ಥರು: ವೀಡಿಯೊ ವೈರಲ್

14 Jun 2023 12:26 PM IST
share
ಬಾಲಕನನ್ನು ತಿಂದಿದ್ದ ಮೊಸಳೆಯನ್ನು ನದಿಯಿಂದ ಹೊರಗೆಳೆದು ಥಳಿಸಿ ಕೊಂದ ಕುಟುಂಬಸ್ಥರು: ವೀಡಿಯೊ ವೈರಲ್

ಪಾಟ್ನಾ: ಹೊಸದಾಗಿ ಮೋಟರ್ ಬೈಕ್ ಖರೀದಿಸಿದ ಖುಷಿಯಲ್ಲಿ ಗಂಗಾ ನದಿಯಲ್ಲಿ ಸ್ನಾನ ಮಾಡಿ, ಬೈಕ್‌ಗೆ ಪೂಜೆ ನೆರವೇರಿಸಲು ಗಂಗಾ ಜಲ ತರಲು ಹೋಗಿದ್ದ 14 ವರ್ಷದ ಬಾಲಕನೊಬ್ಬನು ಮೊಸಳೆಗೆ ಆಹಾರವಾಗುವ ಮೂಲಕ ತನ್ನ ಕುಟುಂಬದ ಸದಸ್ಯರನ್ನು ಕಣ್ಣೀರಾಗಿಸಿರುವ ಘಟನೆ ನಡೆದಿದೆ ಎಂದು ndtv.com ವರದಿ ಮಾಡಿದೆ.

ಇದರ ಬೆನ್ನಿಗೇ ಬಾಲಕನನ್ನು ಕಬಳಿಸಿದ ಮೊಸಳೆಯನ್ನು ನದಿಯಿಂದ ಹೊರಗೆಳೆದಿರುವ ಆತನ ಸಂಬಂಧಿಕರು ಹಾಗೂ ಗ್ರಾಮಸ್ಥರು ಅದನ್ನು ದೊಣ್ಣೆಗಳಿಂದ ಥಳಿಸಿ ಹತ್ಯೆ ಮಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಬಿಹಾರದ ವೈಶಾಲಿ ಜಿಲ್ಲೆಯ ರಘೋಪುರ್ ದಿಯಾರಾ ಗ್ರಾಮದ ಐದನೆಯ ತರಗತಿಯ ವಿದ್ಯಾರ್ಥಿಯಾದ ಅಂಕಿತ್ ಕುಮಾರ್ ಎಂಬ ಬಾಲಕ ಹೊಸ ಬೈಕ್ ಅನ್ನು ಖರೀದಿಸಿದ್ದ ಮತ್ತು ಅದನ್ನು ಗಂಗಾ ನದಿಯ ನೀರಿನಲ್ಲಿ ತೋಯಿಸಿ, ಅದಕ್ಕೆ ಪೂಜೆ ಸಲ್ಲಿಸಲು ಗಂಗಾ ಜಲವನ್ನೂ ತರಲು ಹೋಗಿದ್ದ.

ಆತನ ಕುಟುಂಬದ ಸದಸ್ಯರು ನದಿಯಲ್ಲಿ ಸ್ನಾನ ಮಾಡುವಾಗ ಅಂಕಿತ್ ಮೇಲೆ ದಾಳಿ ಮಾಡಿರುವ ಮೊಸಳೆಯು, ಆತನನ್ನು ನೀರಿನಾಳಕ್ಕೆ ಎಳೆದುಕೊಂಡು ಹೋಗಿ, ಆತನನ್ನು ಜೀವಂತವಾಗಿಯೇ ಭಕ್ಷಿಸಿದೆ.

ಇದಾದ ಒಂದು ಗಂಟೆಯ ನಂತರ ಅಂಕಿತ್ ಕುಟುಂಬದ ಸದಸ್ಯರು ಆತನ ದೇಹದ ಅಳಿದುಳಿದ ಅವಶೇಷವನ್ನು ಗಂಗಾನದಿಯಿಂದ ಹೊರಗೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ನದಿ ತೀರದಲ್ಲಿ ಜನಜಂಗುಳಿ ನೆರೆದಿದೆ. ಆಗ ಅಂಕಿತ್ ಕುಟುಂಬದ ಸದಸ್ಯರು ಹಾಗೂ ಜನಜಂಗುಳಿಯು ನೀರಿನಿಂದ ಮೊಸಳೆಯನ್ನು ಹೊರಗೆಳೆದು, ಅದು ಸಾಯುವವರೆಗೂ ಅದನ್ನು ದೊಣ್ಣೆ ಹಾಗೂ ಕಬ್ಬಿಣದ ಸಲಾಕೆಗಳಿಂದ ಥಳಿಸಿದ್ದು, ಅದು ಕೊನೆಯುಸಿರೆಳೆದ ನಂತರವೇ ತಮ್ಮ ಥಳಿತವನ್ನು ನಿಲ್ಲಿಸಿರುವುದು ವಿಡಿಯೊವೊಂದರಲ್ಲಿ ಸೆರೆಯಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಅಂಕಿತ್‌ನ ಅಜ್ಜ ಸಕಲ್‌ದೀಪ್ ದಾಸ್, "ನಾವು ಹೊಸ ಮೋಟರ್ ಬೈಕ್ ತಂದಿದ್ದೆವು ಮತ್ತು ಗಂಗಾನದಿಯಲ್ಲಿ ಸ್ನಾನ ಮಾಡಿ, ಪೂಜೆಗೆ ಗಂಗಾಜಲ ತರಲು ನದಿಗೆ ತೆರಳಿದ್ದೆವು. ಆದರೆ, ಮೊಸಳೆಯೊಂದು ಆತನನ್ನು ಹಿಡಿದು, ಕೊಂದು ಹಾಕಿತು. ಒಂದು ಗಂಟೆಯ ನಂತರ ನಾವು ಅಂಕಿತ್‌ನ ಮೃತದೇಹದ ಅಳಿದುಳಿದ ಅವಶೇಷಗಳನ್ನು ನೀರಿನಿಂದ ಹೊರ ತಂದೆವು. ನಂತರ ಮೊಸಳೆಯನ್ನೂ ಹೊರಗೆಳೆದು ಹತ್ಯೆಗೈದೆವು" ಎಂದು ತಿಳಿಸಿದ್ದಾರೆ

share
Next Story
X