Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನೈಜೀರಿಯ: ದೋಣಿ ಮಗುಚಿ 103 ಮಂದಿ ಮೃತ್ಯು

ನೈಜೀರಿಯ: ದೋಣಿ ಮಗುಚಿ 103 ಮಂದಿ ಮೃತ್ಯು

14 Jun 2023 3:54 PM IST
share
ನೈಜೀರಿಯ: ದೋಣಿ ಮಗುಚಿ 103 ಮಂದಿ ಮೃತ್ಯು

ಅಬುಜಾ: ವಿವಾಹ ಕಾರ್ಯಕ್ರಮದಿಂದ ದೋಣಿಯೊಂದು ಮರಳುವಾಗ ನೀರಿನಲ್ಲಿ ಮಗುಚಿಕೊಂಡು ಮಕ್ಕಳೂ ಸೇರಿದಂತೆ ಕನಿಷ್ಠ 103 ಮಂದಿ ಅತಿಥಿಗಳು ಮೃತಪಟ್ಟಿದ್ದಾರೆ ಎಂದು ಮಂಗಳವಾರ ಅಧಿಕಾರಿಗಳು ತಿಳಿಸಿದ್ದಾರೆ ಎಂದು hindustantimes.com ವರದಿ ಮಾಡಿದೆ.

ಕ್ವಾರಾ ರಾಜ್ಯ ರಾಜಧಾನಿ ಇಲೋರಿನ್‌ನಿಂದ 160 ಕಿಮೀ ದೂರ ಇರುವ ಕ್ವಾರಾ ರಾಜ್ಯದ ಪಟೇಗಿ ಜಿಲ್ಲೆಯ ನೈಗರ್ ನದಿಯಲ್ಲಿ ಸೋಮವಾರ ಜನರಿಂದ ಕಿಕ್ಕಿರಿದು ತುಂಬಿದ್ದ ದೋಣಿಯು ಮಗುಚಿಕೊಂಡು ನದಿಯಲ್ಲಿ ಕಾಣೆಯಾಗಿರುವ ಸ್ಥಳೀಯ ನಿವಾಸಿಗಳ ಪತ್ತೆ ಕಾರ್ಯಾಚರಣೆ ಮುಂದುವರಿದಿದೆ. ಈವರೆಗೆ ನೂರು ಮಂದಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸ್ ವಕ್ತಾರ ಒಕಾಸನ್ಮಿ ಅಜಯಿ ತಿಳಿಸಿದ್ದಾರೆ.

ಸ್ಥಳೀಯ ಗ್ರಾಮದ ಮುಖ್ಯಸ್ಥ ಅಬ್ದುಲ್ ಗಾನಾ ಲುಕ್ಪಾಡಾ ಪ್ರಕಾರ, ನದಿಯಲ್ಲಿ ಮುಳುಗಿರುವ ಬಹುತೇಕರು ವಿವಿಧ ಗ್ರಾಮಗಳಲ್ಲಿನ ಸಂಬಂಧಿಕರಾಗಿದ್ದು, ಒಟ್ಟಾಗಿ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ರಾತ್ರಿ ವೇಳೆ ಬೇರ್ಪಟ್ಟಿದ್ದರು ಎಂದು ಹೇಳಿದ್ದಾರೆ. ಅವರೆಲ್ಲ ಮೋಟರ್ ಬೈಕ್‌ನಲ್ಲಿ ವಿವಾಹ ಕಾರ್ಯಕ್ರಮಕ್ಕೆ ಆಗಮಿಸಿದ್ದರಾರಾದರೂ, ಭಾರಿ ಮಳೆ ಸುರಿದು ರಸ್ತೆಯಲ್ಲಿ ಮಳೆ ನೀರು ಪ್ರವಾಹ ಸ್ವರೂಪ ಪಡೆದಿದ್ದರಿಂದ ಅವರೆಲ್ಲ ಸ್ಥಳೀಯವಾಗಿ ನಿರ್ಮಾಣಗೊಂಡಿದ್ದ ದೋಣಿಯಲ್ಲಿ ತೆರಳಿದ್ದರು ಎಂದೂ ಹೇಳಿದ್ದರು.

"ಸುಮಾರು 300 ಮಂದಿಯಿಂದ ಕಿಕ್ಕಿರಿದು ತುಂಬಿದ್ದ ದೋಣಿಯಲ್ಲಿ ತೆರಳುವಾಗ ನದಿಯಲ್ಲಿ ದೋಣಿಗೆ ದೊಡ್ಡ ದಿಮ್ಮಿಯೊಂದು ಬಡಿದು ಅದು ಇಬ್ಭಾಗವಾಯಿತು" ಎಂದು ಲುಕ್ಪಾಡಾ ತಿಳಿಸಿದ್ದಾರೆ.

ನೈಗರ್ ರಾಜ್ಯದ ನೆರೆ ಗ್ರಾಮವಾದ ಎಗ್ಬೋಟಿಯಲ್ಲಿ ವಿವಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಅಪಘಾತವು ಮಧ್ಯರಾತ್ರಿ ಮೂರು ಗಂಟೆಗೆ ಸಂಭವಿಸಿದ್ದರಿಂದ ಅನೇಕ ಮಂದಿಗೆ ತಡವಾಗಿ ಅಪಘಾತದ ಬಗ್ಗೆ ತಿಳಿಯುವಂತಾಯಿತು" ಎಂದು ಸ್ಥಳೀಯ ನಿವಾಸಿಯಾದ ಉಸ್ಮಾನ್ ಇಬ್ರಾಹಿಂ ಮಾಹಿತಿ ನೀಡಿದ್ದಾರೆ.

ಗ್ರಾಮಸ್ಥರು ಮೊದಲಿಗೆ 50 ಮಂದಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಆ ಆರಂಭದಲ್ಲಿನ ಪ್ರಯತ್ನವು ನಿಧಾನ ಹಾಗೂ ತೀರಾ ಕ್ಲಿಷ್ಟಕರವಾಗಿತ್ತು ಎಂದು ಲುಕ್ಪಾಡಾ ಹೇಳಿದ್ದಾರೆ.

ಈ ಅಪಘಾತವು ನೈಜೀರಿಯಾ ಇತಿಹಾಸದಲ್ಲೇ ದೊಡ್ಡ ದೋಣಿ ದುರಂತವಾಗಿದ್ದು, ಮಂಗಳವಾರ ಮಧ್ಯಾಹ್ನದವರೆಗೂ ಅಧಿಕಾರಿಗಳು ಹಾಗೂ ಸ್ಥಳೀಯರು ನದಿಯಲ್ಲಿ ಮೃತದೇಹಗಳ ಶೋಧ ಕಾರ್ಯ ಮುಂದುವರಿಸಿದ್ದರು.‌ ಬುಧವಾರ ರಾತ್ರಿಯವರೆಗೂ ರಕ್ಷಣಾ ಕಾರ್ಯ ಮುಂದುವರಿಯಲಿದೆ ಎಂದು ಪೊಲೀಸ್ ವಕ್ತಾರ ಅಜಯಿ ತಿಳಿಸಿದ್ದಾರೆ.

ಹಲವಾರು ವರ್ಷಗಳ ನಂತರ ನಡೆದಿರುವ ಭೀಕರ ದೋಣಿ ದುರಂತವಿದು ಎಂದು ಸ್ಥಳೀಯರು ಹೇಳಿದ್ದಾರೆ.

share
Next Story
X