Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಲಪಂಥೀಯ ಸುದರ್ಶನ್‌ ಟಿವಿಯ ಸುರೇಶ್‌...

ಬಲಪಂಥೀಯ ಸುದರ್ಶನ್‌ ಟಿವಿಯ ಸುರೇಶ್‌ ಚಾವ್ಹಂಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಯುಎಇ ರಾಜಕುಮಾರಿ

"ಇನ್ನೊಬ್ಬರನ್ನು ಹೇಗೆ ಗೌರವಿಸಬೇಕೆಂಬುವುದನ್ನು ತಿಳಿದುಕೊಳ್ಳಿ"

14 Jun 2023 6:27 PM IST
share
ಬಲಪಂಥೀಯ ಸುದರ್ಶನ್‌ ಟಿವಿಯ ಸುರೇಶ್‌ ಚಾವ್ಹಂಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಯುಎಇ ರಾಜಕುಮಾರಿ
"ಇನ್ನೊಬ್ಬರನ್ನು ಹೇಗೆ ಗೌರವಿಸಬೇಕೆಂಬುವುದನ್ನು ತಿಳಿದುಕೊಳ್ಳಿ"

ದುಬೈ: ಯುಎಇ ರಾಜಕುಟುಂಬದ ರಾಜಕುಮಾರಿ ಶೇಖಾ ಹಿಂದ್‌ ಬಿಂತ್‌ ಫೈಸಲ್‌ ಅಲ್‌ ಖಾಸಿಮಿ ಅವರು ಜಾತ್ಯತೀತೆಯ ಬಗ್ಗೆ ಸುದರ್ಶನ ಟಿವಿಯ ಮುಖ್ಯ ಸಂಪಾದಕ ಸುರೇಶ್‌ ಚಾವ್ಹಂಕೆ  ಅವರು ಮಾಡಿರುವ ಟ್ವೀಟ್‌ ಒಂದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಮುಸ್ಲಿಂ ಚಾಲಕನೊಬ್ಬ ಹವಾನಿಯಂತ್ರಿತ ಬಸ್ಸಿನೊಳಗಡೆ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ  ಪ್ರಯಾಣಿಕರು ಹೊರಗೆ ಬಿಸಿಲಿನಲ್ಲಿ ಬವಣೆ ಪಡುವಂತಾಗಿದೆ ಎಂದು ಚಾವ್ಹಂಕೆ ಆರೋಪಿಸಿ ಟ್ವೀಟ್‌ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರಾಜಕುಮಾರಿ ಈ ಘಟನೆ ಕುರಿತು ಸ್ಪಷ್ಟೀಕರಣ ನೀಡಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಮಾಡಿದ ಟ್ವೀಟ್‌ ಅನ್ನು ಶೇರ್‌ ಮಾಡಿದ್ದಾರೆ.

ಈ ಸಂದರ್ಭ ಬಸ್‌ ಕಾರ್ಯಾಚರಿಸುತ್ತಿರಲಿಲ್ಲ ಹಾಗೂ ಟ್ರಿಪ್‌ ಆರಂಭ ಸಮಯಕ್ಕಿಂತ ಮೊದಲು ಅಥವಾ ನಂತರ ಯಾರಿಗೂ ಬಸ್‌ ಪ್ರವೇಶಿಸಲು ಸುರಕ್ಷತೆಯ ಕಾರಣಗಳಿಗಾಗಿ ಅನುಮತಿಸಲಾಗುವುದಿಲ್ಲ ಎಂದು ಆರ್‌ಟಿಎ ಸ್ಪಷ್ಟೀಕರಣ ನೀಡಿದ್ದನ್ನು ರಾಜಕುಮಾರಿ ಶೇರ್‌ ಮಾಡಿದ್ದರು.

ಯುಎಇ ಒಂದು ಜಾತ್ಯತೀತ ರಾಷ್ಟ್ರವಲ್ಲ ಎಂದು ಚಾವ್ಹಂಕೆ ಟೀಕಿಸಿರುವುದನ್ನೂ ಖಂಡಿಸಿರುವ ರಾಜಕುಮಾರಿ ಅವರು ನಿಖರ ಮಾಹಿತಿ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. ಬಸ್‌ ಚಾಲಕನನ್ನು ಬೆಂಬಲಿಸಿದ ರಾಜಕುಮಾರಿ, ಚಾಲಕ ಧಾರ್ಮಿಕ ಸಹಿಷ್ಣುತೆ ಇರುವ ಮುಸ್ಲಿಂ ರಾಷ್ಟ್ರದಲ್ಲಿ ಕೆಲಸದ ಅವಧಿ ನಂತರ ಪ್ರಾರ್ಥನೆ ಸಲ್ಲಿಸುತ್ತಿದ್ದಾನೆ ಎಂದು ಹೇಳಿದರು. ಮೇಲಾಗಿ ಚಾಲಕ ಯಾರಿಗೂ ಹಾನಿಯುಂಟು ಮಾಡುವ ಕೃತ್ಯದಲ್ಲಿ ತೊಡಗಿಲ್ಲ ಎಂದೂ ಹೇಳಿದರಲ್ಲದೆ ಇತರರನ್ನು ಹೇಗೆ ಗೌರವಿಸಬೇಕೆಂದು ಚಾವ್ಹಂಕೆ ಕಲಿಯಬೇಕೆಂದು ಸಲಹೆಯನ್ನೂ ನೀಡಿದ್ದಾರೆ.

मुस्लिम ड्राइवर A/C बस में नमाज़ पढ़ रहा है
इस लिए पैसेंजर बाहर धुप में खड़े हैं। #Jago #Secularism pic.twitter.com/tcEYUkLAaA

— Suresh Chavhanke “Sudarshan News” (@SureshChavhanke) June 13, 2023
share
Next Story
X