Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿಯ...

ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಹೊಂಡವನ್ನು ಮುಚ್ಚಿಸಿ, ಇಲ್ಲದಿದ್ದರೆ ಅಪಾಯ: ಸಂಸದೆ ಶೋಭಾ ಕರಂದ್ಲಾಜೆ

ದಿಶಾ ಸಭೆ

14 Jun 2023 9:51 PM IST
share
ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಹೊಂಡವನ್ನು ಮುಚ್ಚಿಸಿ, ಇಲ್ಲದಿದ್ದರೆ ಅಪಾಯ: ಸಂಸದೆ ಶೋಭಾ ಕರಂದ್ಲಾಜೆ
ದಿಶಾ ಸಭೆ

ಉಡುಪಿ, ಜೂ.14: ಅಂಡರ್‌ ಪಾಸ್ ಕಾಮಗಾರಿಗಾಗಿ ಸಂತೆಕಟ್ಟೆ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ರಸ್ತೆಯನ್ನು ಅಗೆದು ಮಾಡಿರುವ 15ರಂದ 20 ಅಡಿ ಆಳದ ಗುಂಡಿಯನ್ನು ಮಳೆಗಾಲದ ಕಾರಣಕ್ಕಾಗಿ ಮುಚ್ಚಿ,  ಮಳೆಗಾಲ ಮುಗಿದ ಬಳಿಕ ಮತ್ತೆ ಕೆಲಸ ಮುಂದುವರಿಸಿ ಎಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯೆ ಹಾಗೂ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಉಡುಪಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. 

ಈ ಕಾಮಗಾರಿಯನ್ನು ವೇಗವಾಗಿ ನಡೆಸಿ ಮೇ 30ರೊಳಗೆ ತಡೆಗೋಡೆ ಕಟ್ಟಿಕೊಡುವುದಾಗಿ ಗುತ್ತಿಗೆದಾರರು ನೀಡಿದ ಭರವಸೆಯಂತೆ ಕೆಲಸ ನಡೆದಿಲ್ಲ. ಇದರಿಂದ ಮಳೆಗಾಲದಲ್ಲಿ ನೀರು ತುಂಬಿದರೆ ಹೆದ್ದಾರಿಯೂ ಕುಸಿದು ಬೀಳುವ ಸಾಧ್ಯತೆ ಇರುವುದರಿಂದ ಸೆಪ್ಟೆಂಬರ್‌ವರೆಗೆ ಹೊಂಡಗಳನ್ನು ಮುಚ್ಚುವಂತೆ ಅವರು ಎನ್‌ಎಚ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕರಾವಳಿ ಜಿಲ್ಲೆಗಳಲ್ಲಿ ಸುರಿಯುವ ಮಳೆಯ ಪ್ರಮಾಣದ ಬಗ್ಗೆ ಅಧಿಕಾರಿಗಳಿಗೆ ಯಾವುದೇ ಅರಿವು, ಮಾಹಿತಿ ಇರುವುದಿಲ್ಲ. ಇನ್ನು ಅಲ್ಲಿ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಅಷ್ಟು ಉದ್ದದ ಹೊಂಡದಲ್ಲಿ ನೀರು ತುಂಬಿದರೆ ಈಗಿರುವ ಹೆದ್ದಾರಿಯೂ ಕುಸಿದು ಬೀಳುವ ಅಪಾಯವಿದೆ. ಹೀಗಾಗಿ ಹೊಂಡಗಳನ್ನು ಮುಚ್ಚಲೇ ಬೇಕಾಗುತ್ತದೆ ಎಂದವರು ನುಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹಾಕೆ ಅವರು ಮಾತನಾಡಿ, ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಯುದ್ದಕ್ಕೂ ಜಿಲ್ಲಾ ಪೊಲೀಸ್ ಇಲಾಖೆ 50ಕ್ಕೂ ಅಧಿಕ ಅಪಘಾತ ವಲಯಗಳನ್ನು ಗುರುತಿಸಿ ಸುರಕ್ಷತಾ ಕ್ರಮಗಳನ್ನು ಅಳವಡಿಸುವಂತೆ ತಿಳಿಸಿದೆ. ಅದಕ್ಕೆ ಗುತ್ತಿಗೆದಾರರು ಸಮರ್ಪಕ ವಾಗಿ ಸ್ಪಂದಿಸುತ್ತಿಲ್ಲ. ನಾವು ಕರೆದ ಸಭೆಗೂ ಬರುವುದಿಲ್ಲ. ಈ ಬಗೆ ತಿಳಿದಿರುವ ಅಧಿಕಾರಿಗಳನ್ನು ಸಭೆಗೆ ಕಳುಹಿಸುವುದಿಲ್ಲ ಎಂದು ಅವರು ದೂರಿದರು.

ಇನ್ನೆರಡು ದಿನದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು, ಅಧಿಕಾರಿಗಳು ಗುತ್ತಿಗೆದಾರರು ಸಭೆ ನಡೆಸಿ, ಸೂಕ್ತ ಕ್ರಮಕೈಗೊಳ್ಳಬೇಕು. ನಂತರವೂ ಯಾವುದೇ ಕ್ರಮ ಕೈಗೊಳ್ಳದಿದ್ದರೆ ಅಂಥ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ತಾನು ಸಾರಿಗೆ ಸಚಿವರ ಕಚೇರಿಯಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಶೋಭಾ ಹೇಳಿದರು.

ರಾ.ಹೆದ್ದಾರಿಯಲ್ಲಿ ಈ ವರ್ಷದ ಆರಂಭದಿಂದ ಇದುವರೆಗೆ ರಸ್ತೆ ದಾಟುವ ಸಂದರ್ಭದಲ್ಲಿ ಒಟ್ಟು 78 ಅಪಘಾತಗಳು ನಡೆದಿದ್ದು, ಇದರಲ್ಲಿ 12 ಮಂದಿ ಪಾದಚಾರಿಗಳು ಪ್ರಾಣ ಕಳೆದುಕೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಮುಖ 5 ಸ್ಥಳಗಳಲ್ಲಿ ಪುಟ್‌ಬ್ರಿಡ್ಜ್‌ಗಳನ್ನು ನಿರ್ಮಿಸಿ ಅದಕ್ಕೆ ಎಸ್ಕಲೇಟರ್ಸ್‌ಗಳನ್ನು ಅಳವಡಿಸುವುದು ಉತ್ತಮ. ಇದನ್ನು ಬೇಕಿದ್ದರೆ ಪಿಪಿಪಿ ಮಾದರಿಯಲ್ಲಿ ನಿರ್ಮಿಸಬಹುದು ಎಂದು ಎಸ್ಪಿ ಅಕ್ಷಯ ಹಾಕೆ ಸಲಹೆ ನೀಡಿದರು.

ಹೆಬ್ರಿ ಕಡೆಯಿಂದ ಬರುವ ಘನವಾಹನಗಳು ಸಾಸ್ತಾನ ಟೋಲ್ ತಪ್ಪಿಸುವ ಸಲುವಾಗಿ ಒಳರಸ್ತೆಗಳಲ್ಲಿ ಸಂಚರಿಸು ತ್ತಿದ್ದು, ಇದರಿಂದಲೂ ಅಪಘಾತಗಳು ಹೆಚ್ಚುತ್ತಿದೆ. ಇದಕ್ಕಾಗಿ ರಸ್ತೆಗಳಲ್ಲಿ ಕಮಾನುಗಳನ್ನು ಅಳವಡಿಸುವಂತೆ ಎಸ್ಪಿ ನೀಡಿದ ಸಲಹೆಯಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಅದನ್ನು ಅಳವಡಿಸುವಂತೆ ಶೋಭಾ ತಿಳಿಸಿದರು.

ಇಂದ್ರಾಳಿ ರೈಲ್ವೆ ಬ್ರಿಜ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಎನ್‌ಎಚ್ ಅಧಿಕಾರಿ ನಾಗರಾಜ್, ಇದಕ್ಕೆ 485 ಟನ್ ಸ್ಟೀಲ್ ಬೇಕಾಗುತ್ತದೆ. ಸೈಲ್‌ಗೆ ಮೂರು ಕೋಟಿ ರೂ.ಗಳನ್ನು ಪಾವತಿಸಲಾಗಿದೆ. ಈಗಾಗಲೇ 375 ಟನ್ ಸ್ಟೀಲ್ ಸಿದ್ಧವಿದೆ. ಇದರಲ್ಲಿ 95 ಟನ್ ಸ್ಟೀಲ್‌ನ್ನು ಹುಬ್ಬಳ್ಳಿಗೆ ಕಳುಹಿಸಲಾಗಿದೆ. ಅಲ್ಲೇ ಎಲ್ಲವನ್ನೂ ಸಿದ್ಧಪಡಿಸಿ ಇಲ್ಲಿಗೆ ತಂದು ಜೋಡಿಸುವ ಕೆಲಸ ಮಾಡಲಾಗುವುದು. ಮುಂದಿನ ಡಿಸೆಂಬರ್ ವೇಳೆ ಇಂದ್ರಾಳಿ ರೈಲ್ವೆ ಬ್ರಿಜ್ ಖಂಡಿತ ಸಂಚಾರಕ್ಕೆ ಸಿದ್ಧಗೊಳ್ಳಲಿದೆ ಎಂದು ನಾಗರಾಜ್ ವಿವರಿಸಿದರು.

103 ಗ್ರಾಮಗಳಲ್ಲಿ ನೀರಿನ ಕೊರತೆ: ಈ ಬೇಸಿಗೆಯಲ್ಲಿ ಜಿಲ್ಲೆಯ 60 ಗ್ರಾಪಂ ವ್ಯಾಪ್ತಿಯ 103 ಗ್ರಾಮಗಳಲ್ಲಿ ನೀರಿನ ಕೊರತೆ ಕಾಣಿಸಿಕೊಂಡಿದೆ. ಇಲ್ಲಿಗೆ ಒಟ್ಟು 50 ಟ್ಯಾಂಕರ್‌ಗಳಲ್ಲಿ ಕುಡಿಯುವ ನೀರನ್ನು ನೀಡಲಾಗಿದೆ. ಇದಕ್ಕಾಗಿ 77.16 ಲಕ್ಷ ರೂ. ಖರ್ಚು ಮಾಡಲಾಗಿದೆ ಎಂದು ಉಡುಪಿ ಜಿಪಂ ಸಿಇಒ ಪ್ರಸನ್ನ ಎಚ್ ವಿವರಿಸಿದರು.

ಈಗಾಗಲೇ ಅನೇಕ ಗ್ರಾಪಂಗಳು ಹಣದ ಕೊರತೆಯಿಂದ ಟ್ಯಾಂಕರ್ ನೀರು ಪೂರೈಸಲು ಸಾಧ್ಯವಿಲ್ಲವೆಂದು ತಿಳಿಸಿದ್ದಾರೆ. ಸರಕಾರ ಬರ ಎಂದು ಘೋಷಣೆ ಮಾಡದೇ ಇರುವುದರಿಂದ ಪ್ರಕೃತಿ ವಿಕೋಪ ನಿಧಿಯಲ್ಲಿ ಹಣ ಕೊಡಲು ಸಾಧ್ಯವಾಗುತ್ತಿಲ್ಲ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಶೋಭಾ, ಗ್ರಾಪಂಗಳು ನೀರಿನ ಪೂರೈಕೆಗೆ ಸ್ವಂತ ಅನುದಾನಗಳನ್ನು ಬಳಸಿಕೊಳ್ಳಲು ಸೂಚನೆ ನೀಡಿ, ನಂತರ ಸರ್ಕಾರಕ್ಕೆ ಪತ್ರ ಬರೆದು ನೀರು ಪೂರೈಕೆಗೆ ವೆಚ್ಚದ ಮಾಡಿದ ಹಣವನ್ನು ಮರುಪಾವತಿ ಮಾಡುವ ವ್ಯವಸ್ಥೆ ಮಾಡಿ ಎಂದರು.

ಸಭೆಯಲ್ಲಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮತ್ತು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್, ಪ್ರೊಬೇಷನರಿ ಐಎಎಸ್ ಅಧಿಕಾರಿ ಯತೀಶ್, ಎಡಿಸಿ ವೀಣಾ  ಮುಂತಾದವರು ಉಪಸ್ಥಿತರಿದ್ದರು.

share
Next Story
X