Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂಡೋನೇಶ್ಯ ಓಪನ್ ಬ್ಯಾಡ್ಮಿಂಟನ್ ಟೂರ್ನಿ:...

ಇಂಡೋನೇಶ್ಯ ಓಪನ್ ಬ್ಯಾಡ್ಮಿಂಟನ್ ಟೂರ್ನಿ: ಲಕ್ಷ್ಯ ಸೇನ್, ಶ್ರೀಕಾಂತ್ ಶುಭಾರಂಭ

14 Jun 2023 11:16 PM IST
share
ಇಂಡೋನೇಶ್ಯ ಓಪನ್ ಬ್ಯಾಡ್ಮಿಂಟನ್ ಟೂರ್ನಿ: ಲಕ್ಷ್ಯ ಸೇನ್, ಶ್ರೀಕಾಂತ್ ಶುಭಾರಂಭ

ಜಕಾರ್ತ: ಇಂಡೋನೇಶ್ಯ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಲಕ್ಷ್ಯಸೇನ್ ಹಾಗೂ ಕೆ.ಶ್ರೀಕಾಂತ್ ಮೊದಲ ಸುತ್ತಿನಲ್ಲಿ ನೇರ ಗೇಮ್‌ಗಳ ಅಂತರದಿಂದ ಜಯ ಸಾಧಿಸಿ ಶುಭಾರಂಭ ಮಾಡಿದರು.

ಬಿಡಬ್ಲುಎಫ್ ವರ್ಲ್ಡ್ ಟೂರ್‌ನಲ್ಲಿ ವರ್ಷದ ಮೂರನೇ ಹಾಗೂ ಅಂತಿಮ ಸೂಪರ್ 1000 ಟೂರ್ನಿಯಾಗಿರುವ ಇಂಡೋನೇಶ್ಯ ಓಪನ್‌ನಲ್ಲಿ ಬುಧವಾರ ವಿಶ್ವದ ನಂ.19ನೇ ಆಟಗಾರ ಲಕ್ಷ ಕೇವಲ 33 ನಿಮಿಷಗಳ ಹೋರಾಟದಲ್ಲಿ ವಿಶ್ವದ ನಂ.11ನೇ ಆಟಗಾರ ಲೀ ಝಿ ಜಿಯಾರನ್ನು 21-17 ಹಾಗೂ 21-13 ಗೇಮ್‌ಗಳ ಅಂತರದಿಂದ ಮಣಿಸಿದರು. ಭಾರತದ ಯುವ ಆಟಗಾರ ಸೇನ್ ಥಾಯ್ಲೆಂಡ್ ಓಪನ್‌ನಲ್ಲಿ ಮೂರನೇ ಸ್ಥಾನ ಪಡೆದಿದ್ದರೆ, ಸಿಂಗಾಪುರ ಓಪನ್‌ನಲ್ಲಿ ಮೊದಲ ಸುತ್ತಿನಲ್ಲಿಯೇ ಸೋತು ನಿರ್ಗಮಿಸಿದ್ದರು.

ಮಲೇಶ್ಯದ ಲೀ ಹಾಗೂ ಸೇನ್ ಜೋಡಿ ಈ ವರ್ಷ ಮೊದಲ ಬಾರಿ ಮುಖಾಮುಖಿಯಾಗಿದ್ದಾರೆ. 2022ರ ಮೇನಲ್ಲಿ ಥಾಮಸ್ ಕಪ್‌ನಲ್ಲಿ ಕೊನೆಯಬಾರಿ ಮುಖಾಮುಖಿಯಾಗಿದ್ದರು. ಆಗ ಸೇನ್ ಭಾರತದ ನಿರ್ಣಾಯಕ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ವಿಶ್ವದ ಮಾಜಿ ನಂ. 2ನೇ ಆಟಗಾರ ಲೀ ವಿರುದ್ಧ ಸೋತಿದ್ದರು. ಇಂದಿನ ಗೆಲುವಿನೊಂದಿಗೆ ಲಕ್ಷ ಸೇನ್ ಅವರು ಲೀ ವಿರುದ್ಧ 3-1 ಹೆಡ್-ಟು-ಹೆಡ್ ದಾಖಲೆ ಹೊಂದಿದ್ದಾರೆ.

ಇದೇ ವೇಳೆ ಮತ್ತೊಂದು ಪುರುಷರ ಸಿಂಗಲ್ಸ್‌ನ ಮೊದಲ ಸುತ್ತಿನ ಪಂದ್ಯದಲ್ಲಿ ಶ್ರೀಕಾಂತ್ ಕೇವಲ 46 ನಿಮಿಷಗಳಲ್ಲಿ ಚೀನಾದ ಲು-ಗ್ವಾಂಗ್ ಝು ಅವರನ್ನು 21-13, 21-19 ಗೇಮ್‌ಗಳ ಅಂತರದಿಂದ ಸೋಲಿಸಿದ್ದಾರೆ. ಶ್ರೀಕಾಂತ್ ಪ್ರಿ-ಕ್ವಾರ್ಟರ್ ಫೈನಲ್‌ನಲ್ಲಿ ಲಕ್ಷರನ್ನು ಎದುರಿಸುವ ಸಾಧ್ಯತೆಯಿದೆ.

ಥಾಯ್ಲೆಂಡ್‌ನ ಕುನ್ಲವುಟ್ ವಿಟಿಡಸರ್ನ್ ಗಾಯದ ಸಮಸ್ಯೆಯ ಕಾರಣಕ್ಕೆ ವಾಕ್‌ಓವರ್ ಪಡೆದಿದ್ದು, ಕ್ವಾಲಿಫೈಯರ್ ಪ್ರಿಯಾಂಶು ರಾಜಾವತ್ ಪ್ರಿ-ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಪ್ರಿಯಾಂಶು ಅಂತಿಮ-16ರ ಪಂದ್ಯದಲ್ಲಿ ಅಂಥೋನಿ ಸಿನಿಸುಕ ಜಿಂಟಿಂಗ್ ಹಾಗೂ ಹ್ಯಾನ್ಸ್ -ಕ್ರಿಸ್ಟಿಯನ್ ವಿಟಿಂಘಸ್ ನಡುವಿನ ಪಂದ್ಯದಲ್ಲಿನ ವಿಜೇತರನ್ನು ಎದುರಿಸಲಿದ್ದಾರೆ.

share
Next Story
X