Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತೀಯ ಕ್ರೀಡೆಗೆ ಕರಾಳ ದಿನ:...

ಭಾರತೀಯ ಕ್ರೀಡೆಗೆ ಕರಾಳ ದಿನ: ಬ್ರಿಜ್‌ಭೂಷಣ್ ಸಿಂಗ್ ವಿರುದ್ಧದ ಪೊಕ್ಸೊ ಪ್ರಕರಣ ರದ್ದತಿ ಕುರಿತು ಕಾಂಗ್ರೆಸ್ ಆಕ್ರೋಶ

15 Jun 2023 9:56 PM IST
share
ಭಾರತೀಯ ಕ್ರೀಡೆಗೆ ಕರಾಳ ದಿನ: ಬ್ರಿಜ್‌ಭೂಷಣ್ ಸಿಂಗ್ ವಿರುದ್ಧದ ಪೊಕ್ಸೊ ಪ್ರಕರಣ ರದ್ದತಿ ಕುರಿತು ಕಾಂಗ್ರೆಸ್ ಆಕ್ರೋಶ

ಹೊಸದಿಲ್ಲಿ: ಬಿಜೆಪಿ ಸಂಸದ ಹಾಗೂ ನಿರ್ಗಮಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ ಸಿಂಗ್ ವಿರುದ್ಧ ಅಪ್ರಾಪ್ತ ವಯಸ್ಕ ಕುಸ್ತಿಪಟು ದಾಖಲಿಸಿರುವ ಲೈಂಗಿಕ ಕಿರುಕುಳ ದೂರನ್ನು ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಶಿಫಾರಸು ಮಾಡಿರುವ ದಿಲ್ಲಿ ಪೊಲೀಸರ ಕ್ರಮಕ್ಕೆ ಕಾಂಗ್ರೆಸ್ ಗುರುವಾರ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದೆ. ‌

ನ್ಯಾಯಕ್ಕಾಗಿ ದೇಶದ ಪುತ್ರಿಯರ ಕೂಗನ್ನು ಮೋದಿ ಸರಕಾರವು ಕಸದ ಬುಟ್ಟಿಯಲ್ಲಿ ಹೂತುಹಾಕಿದೆ ಎಂದು ಅದು ಆರೋಪಿಸಿದೆ. 

‘ಬೇಟಿ ಡರಾವೋ, ಬ್ರಿಜ್‌ಭೂಷಣ್ ಬಚಾವೊ (ಹೆಣ್ಣುಮಕ್ಕಳನ್ನು  ಹೆದರಿಸಿ, ಬ್ರಿಜ್‌ಭೂಷಣ್ ರಕ್ಷಿಸಿ) ’ಎನ್ನುವುದು ಬಿಜೆಪಿಯ ಹೊಸ ಘೋಷಣೆಯಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಟ್ವೀಟಿಸಿದ್ದಾರೆ. ಪ್ರಕರಣದಲ್ಲಿ ದೋಷಾರೋಪ ಪಟ್ಟಿಯನ್ನು ಜೂ.15ರೊಳಗೆ ಸಲ್ಲಿಸುವುದಾಗಿ ಸರಕಾರವು ಭರವಸೆ ನೀಡಿದ ಬಳಿಕ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರು.

ಇಂದು ದೇಶದಲ್ಲಿ ಕ್ರೀಡೆಗೆ ಕರಾಳ ದಿನವಾಗಿದೆ. ದೇಶದ ಕಾನೂನು ಬಿಜೆಪಿಯ ಬುಲ್ಡೋಜರ್ ನಡಿ ನಜ್ಜುಗುಜ್ಜಾಗಿದೆ ಎಂದು ಟ್ವೀಟಿಸಿರುವ ಸುರ್ಜೆವಾಲಾ, ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಶೋಷಣೆಯ ಆರೋಪಿ ಸಿಂಗ್ ರಕ್ಷಣೆಗಾಗಿ ಇಡೀ ಸರಕಾರಿ ಯಂತ್ರವನ್ನು ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.

ಅಪ್ರಾಪ್ತ ವಯಸ್ಕ ಬಾಲಕಿಯೋರ್ವಳು ಲೈಂಗಿಕ ಶೋಷಣೆಯನ್ನು ಆರೋಪಿಸಿ ಬ್ರಿಜ್‌ಭೂಷಣ್ರಂತಹ ಪ್ರಬಲ ವ್ಯಕ್ತಿಯ ವಿರುದ್ಧ ಪೊಕ್ಸೊ ಕಾಯ್ದೆಯಡಿ ದೂರು ದಾಖಲಿಸಿದ್ದಳು. ಬಳಿಕ ಇಡೀ ವ್ಯವಸ್ಥೆ,ಸರಕಾರದ ಸಚಿವರು ಮತ್ತು ಸಂಸದರು ಒಂದಾಗಿ ಬಾಲಕಿಯ ವಿರುದ್ಧ ನಿಂತಿದ್ದಾರೆ ಮತ್ತು ಬ್ರಿಜ್ಭೂಷಣಗೆ ರಕ್ಷಣೆಯನ್ನು ನೀಡಲಾಗಿದೆ. ‘ಬೇಟಿ ಡರಾವೊ, ಬ್ರಿಜ್‌ಭೂಷಣ್ ಬಚಾವೊ’ ಎನ್ನುವುದು ಇಂದು ಬಿಜೆಪಿಯ ಘೋಷಣೆಯಾಗಿದೆ ಎಂದು ಕಾಂಗ್ರೆಸ್ ವಕ್ತಾರರಾದ ಸುಪ್ರಿಯಾ ಶ್ರೀನಾಠೆ ಹೇಳಿದರು.

ಈಗಷ್ಟೇ ಬ್ರಿಜ್‌ಭೂಷಣ್ ವಿರುದ್ಧ 1,000 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಮತ್ತು 500 ಪುಟಗಳನ್ನು ಹೇಗೆ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ ಮತ್ತು ಪೊಕ್ಸೊದಡಿ ಇಡೀ ಪ್ರಕರಣವನ್ನು ಹಿಂದೆಗೆದುಕೊಳ್ಳಲಾಗಿದೆ ಎನ್ನುವುದನ್ನು ವಿವರಿಸಲು ಮೀಸಲಿರಿಸಲಾಗಿದೆ ಎಂದ ಅವರು,ಪ್ರಕರಣ ದಾಖಲಾದ ತಕ್ಷಣ ಆರೋಪಿಯನ್ನು ಬಂಧಿಸಬೇಕು ಎಂದು ಪೊಕ್ಸೊ ಕಾಯ್ದೆಯು ಹೇಳುತ್ತದೆ. ಆದರೆ ಬ್ರಿಜ್ಭೂಷಣ ಜೊತೆ ಅದು ಸಂಭವಿಸಿಲ್ಲ.

ಕಳೆದ 45 ದಿನಗಳಿಂದಲೂ ಮುಕ್ತವಾಗಿ ತಿರುಗಾಡುತ್ತಿರುವ ಅವರು ಟಿವಿ ಸಂದರ್ಶನಗಳನ್ನು ನೀಡುತ್ತಿದ್ದಾರೆ,ಕುಸ್ತಿಪಟುಗಳು ಗೆದ್ದಿರುವ ಪದಕಗಳು ಕೇವಲ 15 ರೂ.ಮೌಲ್ಯದ್ದು ಎಂದು ಟೀಕಿಸುತ್ತಿದ್ದಾರೆ ಎಂದರು.

ದೇಶದ ಪ್ರಧಾನಿ ಅಥವಾ ಗೃಹಸಚಿವರು ತುಟಿಪಿಟಕ್ಕೆಂದಿಲ್ಲ. ಇದೇ ದಿಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಲು ಒಂದು ತಿಂಗಳು ತೆಗೆದುಕೊಂಡಿದ್ದರು,ಅದೂ ಸರ್ವೋಚ್ಚ ನ್ಯಾಯಾಲಯದ ಮಧ್ಯಪ್ರವೇಶದ ಬಳಿಕ. ಆದರೆ ಕ್ಲೀನ್ ಚಿಟ್ ನೀಡುವಲ್ಲಿ ಮಾತ್ರ ಚುರುಕಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಶ್ರೀನೇತ ಕಿಡಿಕಾರಿದರು.

share
Next Story
X