Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಕುಕಿಗಳ ಜನಾಂಗೀಯ ನಿರ್ಮೂಲನೆಗೆ ಕೇಂದ್ರ,...

"ಕುಕಿಗಳ ಜನಾಂಗೀಯ ನಿರ್ಮೂಲನೆಗೆ ಕೇಂದ್ರ, ಬಿರೇನ್ ಸಿಂಗ್ ಕೋಮುವಾದಿ ಕಾರ್ಯಸೂಚಿ"

ಮಣಿಪುರ ಬುಡಕಟ್ಟು ಜನರ ವೇದಿಕೆ ಆರೋಪ

15 Jun 2023 10:18 PM IST
share
ಕುಕಿಗಳ ಜನಾಂಗೀಯ ನಿರ್ಮೂಲನೆಗೆ ಕೇಂದ್ರ, ಬಿರೇನ್ ಸಿಂಗ್ ಕೋಮುವಾದಿ ಕಾರ್ಯಸೂಚಿ
ಮಣಿಪುರ ಬುಡಕಟ್ಟು ಜನರ ವೇದಿಕೆ ಆರೋಪ

ಹೊಸದಿಲ್ಲಿ: ಕುಕಿ ಬುಡಕಟ್ಟು ಜನತೆಯನ್ನು ಜನಾಂಗೀಯವಾಗಿ ನಿರ್ಮೂಲನೆಗೊಳಿಸುವ ಕೋಮುವಾದಿ ಕಾರ್ಯಸೂಚಿಯನ್ನು ಕೇಂದ್ರ ಸರಕಾರ ಹಾಗೂ ಮಣಿಪುರ ಮುಖ್ಯಮಂತ್ರಿ  ಜಾರಿಗೊಳಿಸಹೊರಟಿದ್ದಾರೆ ಎಂದು ಬುಡಕಟ್ಟು ಜನರಿಗಾಗಿನ ಎನ್‍ಜಿಓ ಸಂಘಟನೆಯೊಂದು ಸುಪ್ರೀಂಕೋರ್ಟ್ ನಲ್ಲಿ ಆಪಾದಿಸಿದೆ.

ಕುಕಿ ಬುಡಕಟ್ಟು ಜನರ ರಕ್ಷಣೆಯ ಬಗ್ಗೆ ಕೇಂದ್ರ ಸರಕಾರ ನೀಡುತ್ತಿರುವ ಪೊಳ್ಳು ಭರವಸೆಗಳ ಬಗ್ಗೆ ವಿಶ್ವಾಸವಿಡಬಾರದು ಹಾಗೂ ಕುಕಿಗಳಿಗೆ ಸೇನೆಯ ರಕ್ಷಣೆಯನ್ನು ಒದಗಿಸಬೇಕೆಂದು ಅದು ಆಗ್ರಹಿಸಿದೆ. ಮಣಿಪುರ ಹಿಂಸಾಚಾರವನ್ನು ತಡೆಗಟ್ಟಲು ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸಬೇಕೆಂದು ಕೋರಿ ತಾನು ಸಲ್ಲಿಸಿದ ‘ಸಂವಾದಾತ್ಮಕ ಅರ್ಜಿ’ಯ ಆಲಿಕೆಯ ವೇಳೆ ‘ಮಣಿಪುರ ಬುಡಕಟ್ಟುಜನರ ವೇದಿಕೆ’ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

‘‘ಕುಕಿ ಬುಡಕಟ್ಟು ಜನರ ರಕ್ಷಣೆ ಬಗ್ಗೆ ಅಧಿಕಾರಿಗಳು ನೀಡಿರುವ ಭರವಸೆಗಳಿಂದ ಯಾವುದೇ ಪ್ರಯೋಜನವಿಲ್ಲ ಮತ್ತು ಅವು ಗಂಭೀರ ಸ್ವರೂಪದ್ದವಲ್ಲ ಮತ್ತು ಅದನ್ನು ಜಾರಿಗೊಳಿಸುವ ಇಂಗಿತವೂ ಸರಕಾರಕ್ಕಿಲ್ಲವೆಂದು ಅದು ಹೇಳಿದೆ. ಸರಕಾರದ ಭರವಸೆಗಳ ಹೊರತಾಗಿಯೂ, ಮಣಿಪುರದ ಹಿಂಸಾಚಾರದಲ್ಲಿ  ಬುಡಕಟ್ಟು ಪಂಗಡಕ್ಕೆ ಸೇರಿದ 81 ಮಂದಿ ಹತ್ಯೆಯಾಗಿದ್ದಾರೆ ಹಾಗೂ 31,410 ಮಂದಿ ನಿರಾಶ್ರಿತರಾಗಿದ್ದಾರೆ ಎಂದು ಈ ಎನ್ಜಿಓ ಸಂಸ್ಥೆಯು ಸುಪ್ರೀಂಕೋರ್ಟ್ ಮೇ 17ರ ವಿಚಾರಣೆ  ಸಂದರ್ಭ ತಿಳಿಸಿತ್ತು.

ಪ್ರಸಕ್ತ ಮಣಿಪುರ ಹಿಂಸಾಚಾರವನ್ನು ಬಹುಸಂಖ್ಯಾತ ಮೈತೇಯಿಗಳು ಹಾಗೂ ಕುಕಿಗಳ ನಡುವಿನ ಸಂಘರ್ಷವೆಂದು ವ್ಯಾಖ್ಯಾನಿಸಕೂಡದು. ಇವೆರಡೂ ಪಂಗಡಗಳು ದೀರ್ಘಸಮಯದಿಂದ ಸಹಬಾಳ್ವೆ ನಡೆಸುತ್ತಾ ಬಂದಿವೆ ಎಂದು ಅರ್ಜಿಯಲ್ಲಿ ಗಮನಸೆಳೆಯಲಾಗಿದೆ.

ಮಣಿಪುರ ಹಿಂಸಾಚಾರದ ಬಗ್ಗೆ ತನಿಖೆಗಾಗಿ ಅಸ್ಸಾಂನ ಮಾಜಿ ಪೊಲೀಸ್ ವರಿಷ್ಠ ಹರೇಕೃಷ್ಣ ದೇಕಾ ನೇತೃತ್ವದ ವಿಶೇಷ ತನಿಖಾ(ಸಿಟ್) ತಂಡ ರಚನೆಯಾಗಬೇಕು ಹಾಗೂ ಹಿಂಸಾಚಾರದಲ್ಲಿ ಮೃತಪಟ್ಟವರ ಬಂಧುಗಳಿಗೆ ಮೂರು ತಿಂಗಳೊಳಗೆ ತಲಾ 2 ಕೋಟಿ ರೂ. ಪರಿಹಾರ ನೀಡಬೇಕೆಂದು ಅರ್ಜಿದಾರರು ಆಗ್ರಹಿಸಿದ್ದಾರೆ.

ಮಣಿಪುರ ಗಲಭೆಗೆ ಸಂಬಂಧಿಸಿ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂಬ ಅರ್ಜಿಯಲ್ಲಿ ಉಲ್ಲೇಖಿಸಿರುವುದನ್ನು  ಗಮನಕ್ಕೆ ತೆಗೆದುಕೊಂಡ ನ್ಯಾಯಾಲಯವು, ಸಂಯಮದಿಂದ ವರ್ತಿಸುವಂತೆ ಸಿಎಂಗೆ ಸಲಹೆ ನೀಡುವಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಸೂಚಿಸಿತು.

ಬಹುಸಂಖ್ಯಾತ ಮೈತೆ ಸಮುದಾಯಕ್ಕೆ  ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡಬೇಕೆಂಬ ಬೇಡಿಕೆಯ ಬಗ್ಗೆ ರಾಜ್ಯ ಸರಕಾರವು ನಾಲ್ಕು ವಾರಗಳೊಳಗೆ ತನ್ನ ಶಿಫಾರಸನ್ನು ಕೇಂದ್ರ ಸರಕಾರಕ್ಕೆ ಕಳುಹಿಸಿಕೊಡಬೇಕೆಂದು ಮಾರ್ಚ್ 27ರಂದು ಮಣಿಪುರ ಹೈಕೋರ್ಟ್ ಆದೇಶಿಸಿದ ಬಳಿಕ ಮೈತೆ ಹಾಗೂ ಕುಕಿ ಸಮುದಾಯಗಳ ನಡುವೆ ವ್ಯಾಪಕ ಹಿಂಸಾಚಾರ ಭುಗಿಲೆದ್ದಿತ್ತು.

share
Next Story
X