Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಲೇಶ್ಯಾದಲ್ಲಿ ವಲಸೆ ಕಾರ್ಮಿಕರಿಂದ...

ಮಲೇಶ್ಯಾದಲ್ಲಿ ವಲಸೆ ಕಾರ್ಮಿಕರಿಂದ ಬಲವಂತದ ದುಡಿಮೆ: ವಿಶ್ವಸಂಸ್ಥೆ ವರದಿ

15 Jun 2023 10:48 PM IST
share
ಮಲೇಶ್ಯಾದಲ್ಲಿ ವಲಸೆ ಕಾರ್ಮಿಕರಿಂದ ಬಲವಂತದ  ದುಡಿಮೆ: ವಿಶ್ವಸಂಸ್ಥೆ ವರದಿ

ಕೌಲಲಾಂಪುರ: ಮಲೇಶ್ಯಾದಲ್ಲಿ ದೇಶೀಯ ಕುಟುಂಬಗಳಲ್ಲಿ ಕೆಲಸ ಮಾಡುವ ಸುಮಾರು ಮೂರನೇ ಒಂದರಷ್ಟು ವಲಸೆ ಕಾರ್ಮಿಕರು ಬಲವಂತದ ಕಾರ್ಮಿಕ ಪರಿಸ್ಥಿತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ವಿಶ್ವಸಂಸ್ಥೆಯ ಕಾರ್ಮಿಕ ಸಂಘಟನೆ ಗುರುವಾರ ಬಿಡುಗಡೆಗೊಳಿಸಿದ ಸಮೀಕ್ಷಾ ವರದಿ ಹೇಳಿದೆ.

ವಲಸೆ ಕಾರ್ಮಿಕರು ಅಧಿಕ ಕೆಲಸದ ಅವಧಿ, ಹೆಚ್ಚುವರಿ ದುಡಿಮೆಗೆ(ಓವರ್ಟೈಮ್) ವೇತನ ನೀಡದಿರುವುದು, ಕಡಿಮೆ ಸಂಬಳ, ಚಲನವಲನಕ್ಕೆ ನಿರ್ಬಂಧ ಮತ್ತು ಬಲವಂತದ ಕಾರ್ಮಿಕರ ಸೂಚಕಗಳಲ್ಲಿ ಉಲ್ಲೇಖಿಸಿರುವ ಪರಿಸ್ಥಿತಿಯಲ್ಲಿ ಇರುವುದನ್ನು  ಅಂತರಾಷ್ಟ್ರೀಯ ಕಾರ್ಮಿಕ ಸಂಘಟನೆ(ಐಎಲ್ಒ) ಗುರುತಿಸಿದೆ. ಆಗ್ನೇಯ ಏಶ್ಯಾದಲ್ಲಿ 1,201 ಮನೆಗೆಲಸದವರನ್ನು ಸಂದರ್ಶಿಸಿ ನಡೆಸಿರುವ ಸಮೀಕ್ಷೆಯ ಪ್ರಕಾರ, ಮಲೇಶ್ಯಾದಲ್ಲಿನ ವಲಸೆ ಕಾರ್ಮಿಕರಲ್ಲಿ 29%ದಷ್ಟು ಮಂದಿ ಬಲವಂತದ ದುಡಿಮೆಯ ಸಂಕಷ್ಟದಲ್ಲಿದ್ದರೆ, ನೆರೆಯ ದೇಶಗಳಾದ ಸಿಂಗಾಪುರ ಮತ್ತು ಥೈಲ್ಯಾಂಡ್ ದೇಶಗಳಲ್ಲಿ ಈ ಪ್ರಮಾಣ ಅನುಕ್ರಮವಾಗಿ 7% ಮತ್ತು 4%ದಷ್ಟಿವೆ. ಈ ಮೂರೂ ದೇಶಗಳಲ್ಲಿ ಸಮೀಕ್ಷೆಗೆ ಒಳಪಟ್ಟ ಮನೆಗೆಲಸದವರ ಸರಾಸರಿ ಕೆಲಸದ ಅವಧಿ ಇತರ ಕಾರ್ಮಿಕರಿಗೆ ನಿಗದಿಪಡಿಸಿದ್ದಕ್ಕಿಂತ ಬಹಳಷ್ಟು ಅಧಿಕವಾಗಿದೆ ಮತ್ತು ಯಾರು ಕೂಡಾ ಕನಿಷ್ಟ ವೇತನ ಸಂಪಾದಿಸಿಲ್ಲ ಎಂದು ಐಎಲ್ಒ ಹೇಳಿದೆ.

ಮನೆಕೆಲಸವು ನಮ್ಮ ಸಮಾಜದಲ್ಲಿ ಅತ್ಯಂತ ಪ್ರಮುಖ ಕಾರ್ಯಗಳಲ್ಲಿ ಒಂದಾಗಿದ್ದರೂ ಮನೆಕೆಲಸದವರಿಗೆ  ಇನ್ನೂ ಕನಿಷ್ಟ ರಕ್ಷಣೆಯನ್ನು ಒದಗಿಸಲಾಗಿದೆ. ಇದನ್ನು ಇನ್ನು ಮುಂದೆ ಸಹಿಸಿಕೊಂಡಿರಲು ಸಾಧ್ಯವಿಲ್ಲ ಎಂದು ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆಯ ಮುಖ್ಯ ತಾಂತ್ರಿಕ ಮಾರ್ಗದರ್ಶಕಿ ಅನ್ನಾ ಎಂಗ್ಬ್ಲೋಮ್ ಹೇಳಿದ್ದಾರೆ. ಗೃಹ ಕಾರ್ಮಿಕರು ಮತ್ತು ಬಲವಂತದ ದುಡಿಮೆ ಮಾಡುತ್ತಿರುವವರಿಗೆ ವಿಶ್ವಸಂಸ್ಥೆಯ ಅಧಿವೇಶನ ಸೂಚಿಸಿರುವ ವ್ಯವಸ್ಥೆ ಒದಗಿಸುವಂತೆ , ಮನೆಗೆಲಸದ ಕೌಶಲ್ಯವನ್ನು ಗುರುತಿಸುವಂತೆ, ಮತ್ತು ಜೀತ ಕಾರ್ಮಿಕ ಪ್ರಕ್ರಿಯೆಗೆ ಅವಕಾಶ ಕೊಡದಂತೆ ವಲಸೆ ಮಾರ್ಗಗಳನ್ನು ಖಚಿತಪಡಿಸುವಂತೆ ಅಂತರಾಷ್ಟ್ರೀಯ ಕಾರ್ಮಿಕ ಸಂಘಟನೆ  ಮಲೇಶ್ಯಾ, ಸಿಂಗಾಪುರ ಮತ್ತು ಥೈಲ್ಯಾಂಡ್ ದೇಶಗಳನ್ನು ಆಗ್ರಹಿಸಿದೆ.

ಏಶ್ಯಾದ ಕುಟುಂಬಗಳು ಸಾಮಾನ್ಯವಾಗಿ ಇಂಡೊನೇಶ್ಯಾ, ಮ್ಯಾನ್ಮಾರ್ ಮತ್ತು ಫಿಲಿಪ್ಪೀನ್ಸ್ನಂತಹ ಅಭಿವೃದ್ಧಿಶೀಲ ರಾಷ್ಟ್ರಗಳಿಂದ  ಮನೆಗೆಲಸದವರನ್ನು(ಹೆಚ್ಚಾಗಿ ಮಹಿಳೆಯರನ್ನು) ಅಡುಗೆ, ಸ್ವಚ್ಛತೆ, ಮಗುವಿನ ಪಾಲನೆ, ತೋಟಗಾರಿಕೆ ಮತ್ತಿತರ  ಕೆಲಸಕ್ಕೆ ನೇಮಿಸಿಕೊಳ್ಳುತ್ತವೆ. ಮಲೇಶ್ಯಾದಲ್ಲಿ ಮನೆಕೆಲಸದವರಿಗೆ ದೌರ್ಜನ್ಯ ಎಸಗಿದ ಹಲವು ಪ್ರಕರಣಗಳು ಇತ್ತೀಚೆಗೆ ವರದಿಯಾಗಿದ್ದರೆ, ಮಲೇಶ್ಯಾದ ಸಂಸ್ಥೆಗಳು ವಲಸೆ ಕಾರ್ಮಿಕರಿಂದ ಹೆಚ್ಚುವರಿ ಕೆಲಸ ಮಾಡಿಸಿಕೊಳ್ಳುತ್ತಿವೆ ಎಂಬ ಆರೋಪ ಕೇಳಿಬಂದಿದೆ.

ಅಂತರಾಷ್ಟ್ರೀಯ ಕಾರ್ಮಿಕ ಸಂಘಟನೆಯ ಪ್ರಕಾರ, ಮಲೇಶ್ಯಾದಲ್ಲಿ ಮನೆಕೆಲಸ ಮಾಡುತ್ತಿರುವವರಲ್ಲಿ ಸುಮಾರು 80%ದಷ್ಟು ಇಂಡೊನೇಶ್ಯದವರು. ಮನೆಕೆಲಸದವರಿಗೆ ರಕ್ಷಣೆ ಒದಗಿಸುವ ಬಗ್ಗೆ ಕಳೆದ ವರ್ಷ ಮಲೇಶ್ಯಾ ಮತ್ತು ಇಂಡೊನೇಶ್ಯಾ ನಡುವೆ ಒಪ್ಪಂದ ಏರ್ಪಟ್ಟಿದೆ. ಥೈಲ್ಯಾಂಡ್ನಲ್ಲಿ ಮನೆಕೆಲಸದವರ ರಕ್ಷಣೆಗೆ ಸಂಬಂಧಿಸಿದ ಕಾಯ್ದೆಯನ್ನು 2012ರಲ್ಲಿ ಜಾರಿಗೊಳಿಸಿದ ಬಳಿಕ ಮನೆಕೆಲಸದವರ ಪರಿಸ್ಥಿತಿ ಸುಧಾರಿಸಿದೆ ಎಂದು ಥೈಲ್ಯಾಂಡ್ನ ಕಾರ್ಮಿಕ ಸಚಿವಾಲಯ ಹೇಳಿದೆ.‌

share
Next Story
X