ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ‘ಅರಿವು’ ಸಾಲ ಯೋಜನೆಗೆ ಆನ್ಲೈನ್ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನ

ಬೆಂಗಳೂರು, ಜೂ.16: ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಬೆಂಗಳೂರು ನಗರ ಕೇಂದ್ರೀಯ ವಿಭಾಗದ ವತಿಯಿಂದ 2023-24ನೆ ಸಾಲಿಗೆ ಅಲ್ಪಸಂಖ್ಯಾತರಾದ ಮುಸ್ಲಿಮ್, ಕ್ರಿಶ್ಚಿಯನ್, ಜೈನ್, ಬೌಧ್ಧ, ಸಿಖ್ ಹಾಗೂ ಫಾರ್ಸಿ ಜನಾಂಗದವರಿಗೆ ಅರಿವು ವಿಧ್ಯಾಭ್ಯಾಸ ಸಾಲ ಯೋಜನೆಯಡಿ ನಿಗಮದ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ.
ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅಅರಿವು ವಿಧ್ಯಾಭ್ಯಾಸ ಯೋಜನೆಯಡಿಯಲ್ಲಿ ರಾಜ್ಯ ಪರೀಕ್ಷಾ ಪ್ರಾಧಿಕಾರದಿಂದ(ಸಿಇಟಿ/ನೀಟ್) ಮುಖಾಂತರ ಎಂಬಿಬಿಎಸ್, ಬಿಡಿಎಸ್, ಆಯುಷ್, ಬ್ಯಾಚಲರ್ ಆಫ್ ಆರ್ಚ್, ಎಂಜಿನಿಯರಿಂಗ್, ಬ್ಯಾಚಲರ್ ಆಫ್ ಟೆಕ್ನಾಲಜಿ ಕೋರ್ಸ್ ಫಾರ್ಮಸಿ, ಕೃಷಿ ವಿಜ್ಞಾನ, ಪಶುವೈದ್ಯಕೀಯ ಹಾಗೂ ಫಾರ್ಮ ಸೈನ್ಸ್ ವ್ಯಾಸಂಗಗಳಿಗೆ ಆಯ್ಕೆಯಾದ ವಿಧ್ಯಾರ್ಥಿಗಳಿಗೆ ‘ಅರಿವು’ ಯೋಜನೆ ಯಡಿಯಲ್ಲಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದ್ದು ನಿಗಮದ ವೆಬ್ಸೈಟ್: https://kmdconline.karnataka.gov.in/Portal/home ಮೂಲಕ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್ ನಲ್ಲಿ ಭರ್ತಿ ಮಾಡಿದ ಕೂಡಲೆ ಅರ್ಜಿ ಪ್ರಿಂಟ್ಔಟ್ ಪಡೆದು ಕ್ಯೂ.ಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಎಸೆಸೆಲ್ಸಿ, ಪಿಯುಸಿ, ಅಂಕಪಟ್ಟಿ, ಆಧಾರ್ಕಾರ್ಡ್, 5 ಫೋಟೊ (ಪೋಷಕರು ಹಾಗೂ ವಿದ್ಯಾರ್ಥಿಯದ್ದು), ಸಿಇಟಿ ಹಾಲ್ಟಿಕೆಟ್ ಪ್ರತಿಗಳು ಮತ್ತು ನೋಟರಿ ಮಾಡಿಸಿದ 50 ರೂ.ಗಳ ಛಾಪಾಕಾಗದದಲ್ಲಿ ಇಂಡೆಮ್ನಿಟಿ ಬಾಂಡ್ ಈ ಎಲ್ಲ ದಾಖಲಾತಿಗಳನ್ನು ‘ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ(ನಿ)ಬೆಂಗಳೂರು ನಗರ ಕೇಂದ್ರಿಯ ಜಿಲ್ಲೆ ಕೊಠಡಿ ಸಂಖ್ಯೆ ಎಫ್.ಎಫ್-29/37, 1ನೆ ಮಹಡಿ, ಹಮೀದ್ ಷಾ ಕಾಂಪ್ಲೆಕ್ ಹಲಸೂರು ಗೇಟ್ ಪೊಲೀಸ್ ಠಾಣೆ ಹತ್ತಿರ, ಕಬ್ಬನ್ಪೇಟೆ ಮುಖ್ಯರಸ್ತೆ, ಬೆಂಗಳೂರು-02’ ಈ ಕಚೇರಿಗೆ ಸಲ್ಲಿಸಬಹುದು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜು.10 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿ ಪಡೆಯಲು ಈ ಕಚೇರಿಯ ದೂರವಾಣಿ ಸಂಖ್ಯೆ: 080-2211 4815ಗೆ ಮತ್ತು ಸಹಾಯವಾಣಿ ಸಂಖ್ಯೆ: 82777 99990ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.







