Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಿಕ್ಷಣದ ಅಮಿಷವೊಡ್ಡಿ ಕರೆತಂದ ಮಕ್ಕಳಿಗೆ...

ಶಿಕ್ಷಣದ ಅಮಿಷವೊಡ್ಡಿ ಕರೆತಂದ ಮಕ್ಕಳಿಗೆ ಬಲವಂತದ ದುಡಿಮೆ: ರಾಜಸ್ತಾನದ ಬಳೆ ತಯಾರಿಕಾ ಘಟಕದ 22 ಮಕ್ಕಳ ರಕ್ಷಣೆ

ಬಿಹಾರದಿಂದ ಕರೆತಂದ ಮಕ್ಕಳಿಗೆ ದಿನಕ್ಕೆ 18 ತಾಸುಗಳ ದುಡಿಮೆ

16 Jun 2023 10:35 PM IST
share
ಶಿಕ್ಷಣದ ಅಮಿಷವೊಡ್ಡಿ ಕರೆತಂದ ಮಕ್ಕಳಿಗೆ ಬಲವಂತದ ದುಡಿಮೆ: ರಾಜಸ್ತಾನದ ಬಳೆ ತಯಾರಿಕಾ ಘಟಕದ 22 ಮಕ್ಕಳ ರಕ್ಷಣೆ
ಬಿಹಾರದಿಂದ ಕರೆತಂದ ಮಕ್ಕಳಿಗೆ ದಿನಕ್ಕೆ 18 ತಾಸುಗಳ ದುಡಿಮೆ

ಜೈಪುರ: ಶಿಕ್ಷಣ ಹಾಗೂ ಉದ್ಯೋಗದ ಭರವಸೆ ನೀಡಿ ಬಿಹಾರದ 22 ಮಂದಿ ಮಕ್ಕಳನ್ನು ಬಳೆ ತಯಾರಿಕಾ ಘಟಕದ ಕಿರಿದಾದ ಕೋಣೆಯಲ್ಲಿ ಕೂಡಿಹಾಕಿ, ದಿನಕ್ಕೆ 18 ತಾಸುಗಳ ದುಡಿಸುತ್ತಿದ್ದ ಜಾಲವೊಂದನ್ನು ರಾಜಸ್ತಾನದಲ್ಲಿ ಭೇದಿಸಲಾಗಿದೆ.

ತಮಗೆ ದೊರೆತ ಮಾಹಿತಿಯ ಆಧಾರದಲ್ಲಿ ರಾಜಸ್ಥಾನ ಮಕ್ಕಳ ಕಲ್ಯಾಣ ಸಮಿತಿ ಹಾಗೂ ಎನ್ಜಿಓ ನಯಾ ಸವೇರಾದ ಜಂಟಿ ತಂಡವು ಜೂನ್ 11ರಂದು ಜೈಪುರದ ಭಟ್ಟಾ ಬಸ್ತಿ ಪ್ರದೇಶದ ಬಳೆ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ ಈ ಮಕ್ಕಳನ್ನು ರಕ್ಷಿಸಿದೆ.

ಬಳೆ ತಯಾರಿಕಾ ಘಟಕದಿಂದ 26 ಮಂದಿಯನ್ನು ರಕ್ಷಿಸಿದ್ದು, ಅವರಲ್ಲಿ 22 ಮಂದಿ ಅಪ್ರಾಪ್ತ ವಯಸ್ಕರಾಗಿದ್ದಾರೆ. ಅವರಲ್ಲಿ ಹೆಚ್ಚಿನವರು 7ರಿಂದ 11 ವರ್ಷದೊಳಗಿನವರಾಗಿದ್ದಾರೆ. ಇನ್ನು ಕೆಲವರು ಕಳೆದ ಎರಡು ಮೂರು ತಿಂಗಳುಗಳಿಂದ ಈ ಕೊಠಡಿಯಲ್ಲಿಯೇ ವಾಸಿಸುತ್ತಾ ಕೆಲಸ ಮಾಡುತ್ತಿದ್ದಾರೆ. ಇತರರು 10-15 ದಿನಗಳ ಹಿಂದೆ ಬಂದವರಾಗಿದ್ದಾರೆ.  ಒಂದು ವೇಳೆ ಈ ಮಕ್ಕಳು ಅಸ್ವಸ್ಥರಾದಲ್ಲಿ ಅಥವಾ ದೂರು ನೀಡಿದಲ್ಲಿ, ಅವರನ್ನು ಮಾಲಕನನ್ನು ಹಿಗ್ಗಾಮುಗ್ಗಾ ಥಳಿಸುತ್ತಿದ್ದನೆನ್ನಲಾಗಿದೆ.

ತಮಗೆ ಕೆಲಸದ ಜೊತೆ ಶಿಕ್ಷಣವನ್ನು ಕೊಡಿಸುವುದಾಗಿ ಹೆತ್ತವರಿಗೆ ಅಮಿಷವೊಡ್ಡಿ ಏಜೆಂಟರುಗಳು ತಮ್ಮನ್ನು ಜೈಪುರಕ್ಕೆ ಕರೆತಂದಿರುವುದಾಗಿ ರಕ್ಷಿಸಲ್ಪಟ್ಟ ಮಕ್ಕಳು ತಿಳಿಸಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.

ಮೂರು ಅಂತಸ್ತುಗಳ ಕಟ್ಟಡದ ಈ ಕೊಠಡಿಗೆ ಬೀಗಜಡಿದಿದ್ದರಿಂದ ಮಕ್ಕಳನ್ನು ರಕ್ಷಿಸಲು ತಾವು ಕಿಟಕಿ ಮೂಲಕ ಜಿಗಿಯಬೇಕಾಯಿತೆಂದು ತಂಡದ ಸದಸ್ಯರು ತಿಳಿಸಿದ್ದಾರೆ. ಬಳೆ ತಯಾರಿಕೆ ಘಟಕದ ಮಾಲಕನನ್ನು ಗುಡ್ಡು ಎಂದು ಗುರುತಿಸಲಾಗಿದ್ದು, ಆತ ಈಗ ತಲೆಮರೆಸಿಕೊಂಡಿದ್ದು, ಆತನಿಗೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

share
Next Story
X