Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಡಿಆರ್‌ಡಿಓದಿಂದ ಮಹತ್ವದ ಸಾಧನೆ:...

ಡಿಆರ್‌ಡಿಓದಿಂದ ಮಹತ್ವದ ಸಾಧನೆ: ನೌಕಾಪಡೆಯ ಸಹಯೋಗದಲ್ಲಿ ತಪಸ್ ಯುಎವಿ ಪ್ರಯೋಗಾರ್ಥ ಹಾರಾಟ ಯಶಸ್ವಿ

18 Jun 2023 11:21 PM IST
share
ಡಿಆರ್‌ಡಿಓದಿಂದ ಮಹತ್ವದ ಸಾಧನೆ: ನೌಕಾಪಡೆಯ ಸಹಯೋಗದಲ್ಲಿ ತಪಸ್ ಯುಎವಿ  ಪ್ರಯೋಗಾರ್ಥ ಹಾರಾಟ ಯಶಸ್ವಿ

ಹೊಸದಿಲ್ಲಿ: ಮಹತ್ವದ ಸಾಧನೆಯೊಂದರಲ್ಲಿ ಭಾರತೀಯ ನೌಕಾಪಡೆಯ ಸಹಭಾಗಿತ್ವದಲ್ಲಿ ತಪಸ್ ಮಾನವರಹಿತ ವೈಮಾನಿಕ ವಾಹನ (UAV)ದ ಕಮಾಂಡ್ ಮತ್ತು ಕಂಟ್ರೋಲ್ ಸಾಮರ್ಥ್ಯಗಳ ವರ್ಗಾವಣೆಯನ್ನು ಯಶಸ್ವಿಯಾಗಿ ಪ್ರದರ್ಶಿಸಲಾಗಿದೆ ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO)ಯು ರವಿವಾರ ತಿಳಿಸಿದೆ.

ಯುಎವಿಯನ್ನು ದೂರದ ಗ್ರೌಂಡ್ ಸ್ಟೇಷನ್ ನಿಂದ ಕಾರವಾರ ನೌಕಾನೆಲೆಯಿಂದ 148 ಕಿ.ಮೀ.ದೂರದಲ್ಲಿ ಸ್ಥಿತ ಐಎನ್ಎಸ್ ಸುಭದ್ರಾ ನೌಕೆಯಲ್ಲಿನ ಸ್ಟೇಷನ್ ಗೆ ಕಮಾಂಡ್ ಮಾಡುವುದನ್ನು ಜೂ.16ರಂದು ನಡೆದಿದ್ದ ಪ್ರಾತ್ಯಕ್ಷಿಕೆಯು ಒಳಗೊಂಡಿತ್ತು.

ಕಾರವಾರ ನೌಕಾ ನೆಲೆಯಿಂದ 285 ಕಿ.ಮೀ.ದೂರದ ಚಿತ್ರದುರ್ಗದ ವೈಮಾನಿಕ ಪರೀಕ್ಷಾ ವಲಯ (ಎಟಿಆರ್)ದಿಂದ ಬೆಳಿಗ್ಗೆ 7:35ಕ್ಕೆ ತಪಸ್ ಹಾರಾಟವನ್ನು ಪ್ರಾರಂಭಿಸಿತ್ತು.

‘ತಪಸ್ ಸಮುದ್ರ ಮಟ್ಟದಿಂದ 20,000 ಅಡಿ ಎತ್ತರದಲ್ಲಿ ದೋಷರಹಿತವಾಗಿ ಕಾರ್ಯಾಚರಿಸಿತ್ತು. ಐಎನ್ಎಸ್ ಸುಭದ್ರಾ 40 ನಿಮಿಷಗಳ ಅವಧಿಗೆ ತಪಸ್ನ ಕಾರ್ಯಾಚರಣೆಗಳ ನಿಯಂತ್ರಣವನ್ನು ವಹಿಸಿಕೊಳ್ಳುವುದರೊಂದಿಗೆ ಮೂರು ಗಂಟೆ ಮೂವತ್ತು ನಿಮಿಷಗಳ ಹಾರಾಟವನ್ನು ಪೂರ್ಣಗೊಳಿಸಿತು.

ನೆಲದಲ್ಲಿ ಒಂದು ನಿಯಂತ್ರಣ ಕೇಂದ್ರ ಮತ್ತು ಐಎನ್ ಎಸ್ ಸುಭದ್ರಾದಲ್ಲಿ ಎರಡು ಶಿಪ್ ಡೇಟಾ ಟರ್ಮಿನಲ್ ಗಳನ್ನು ಸ್ಥಾಪಿಸಲಾಗಿತ್ತು. ಯಶಸ್ವಿ ಪ್ರಯೋಗದ ಬಳಿಕ ತಪಸ್ ಎಟಿಆರ್ ಗೆ ವಾಪಸಾಗಿ ಸುರಕ್ಷಿತವಾಗಿ ಇಳಿಯಿತು ಎಂದು  ಡಿಆರ್‌ಡಿಓ ಸರಣಿ ಟ್ವೀಟ್ ಗಳಲ್ಲಿ ತಿಳಿಸಿದೆ.

30,000 ಸಾವಿರ ಅಡಿಗಳ ಎತ್ತರದಲ್ಲಿ ಹಾರಾಡಬಲ್ಲ ತಪಸ್ 250 ಕಿ.ಮೀ.ಗೂ ಹೆಚ್ಚಿನ ವ್ಯಾಪ್ತಿಯನ್ನು ಹೊಂದಿದೆ. ಗರಿಷ್ಠ 350 ಕೆ.ಜಿ.ಪೇಲೋಡ್ ಸಾಗಿಸುವ ಸಾಮರ್ಥ್ಯ ಹೊಂದಿರುವ ಅದನ್ನು ಭಾರತೀಯ ಸಶಸ್ತ್ರ ಪಡೆಗಳಿಗಾಗಿ ಬೇಹುಗಾರಿಕೆ, ಕಣ್ಗಾವಲು ಮತ್ತು ವಿಚಕ್ಷಣಾ ಕಾರ್ಯಾಚರಣೆಗಳಿಗಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಡಿಆರ್‌ಡಿಓ ತಿಳಿಸಿದೆ.

share
Next Story
X