Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕುಷ್ಟ ರೋಗ ನಿರ್ಮೂಲನಾ ಅಭಿಯಾನದಲ್ಲಿ...

ಕುಷ್ಟ ರೋಗ ನಿರ್ಮೂಲನಾ ಅಭಿಯಾನದಲ್ಲಿ ಖಾಸಗಿ ವೈದ್ಯರನ್ನು ಸೇರಿಸಿಕೊಳ್ಳಿ: ಗಿರೀಶ್ ನಂದನ್

19 Jun 2023 9:04 PM IST
share
ಕುಷ್ಟ ರೋಗ ನಿರ್ಮೂಲನಾ ಅಭಿಯಾನದಲ್ಲಿ ಖಾಸಗಿ ವೈದ್ಯರನ್ನು ಸೇರಿಸಿಕೊಳ್ಳಿ: ಗಿರೀಶ್ ನಂದನ್

ಪುತ್ತೂರು: ಇಂದಿನಿಂದ ಜು. 6ರ ತನಕ ತಾಲೂಕಿನಾದ್ಯಂತ ನಡೆಯಲಿರುವ ಕುಷ್ಟ ರೋಗ ನಿವಾರಣಾ ಅಭಿಯಾನದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರನ್ನು ಸೇರಿಸಿಕೊಳ್ಳಬೇಕು. ಮನೆ ಭೇಟಿ ಸಂದರ್ಭದಲ್ಲಿ ಮನೆಗಳಿಗೆ ಮೊದಲೇ ಮಾಹಿತಿ ನೀಡಬೇಕು. ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಮಾಹಿತಿ ಶಿಬಿರ ಗಳನ್ನು ನಡೆಸಬೇಕು. ಜನರ ಮನವೊಲಿಕೆ ಮಾಡಿ ರೋಗಲಕ್ಷಣ ಪತ್ತೆ ಮಾಡಿ ಎಂದು ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಗಿರೀಶ್ ನಂದನ್ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ರಾಷ್ಟ್ರೀಯ ಕುಷ್ಟರೋಗ ನಿರ್ಮೂಲನಾ ಕಾರ್ಯಕ್ರಮದ ಅಡಿಯಲ್ಲಿ ಜೂ. 19ರಿಂದ ಜು. 6ರ ತನಕ  ನಡೆಯಲಿ ರುವ ಅಭಿಯಾನಕ್ಕೆ ಸಂಬಂಧಿಸಿದಂತೆ ಸೋಮವಾರ ಪುತ್ತೂರಿನ ಮಿನಿವಿಧಾನ ಸೌಧದ ಸಹಾಯಕ ಕಮಿಷನರ್ ನ್ಯಾಯಾಲಯದ ಸಭಾಂಗಣದಲ್ಲಿ ಸಹಾಯಕ ಕಮೀಷನರ್ ಗಿರೀಶ್ ನಂದನ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಗಿರೀಶ್ ನಂದನ್ ಅವರು ಈ ಅಭಿಯಾನದಲ್ಲಿ ಖಾಸಗಿ ವೈದ್ಯರು, ಚರ್ಮರೋಗ ತಜ್ಞ ವೈದ್ಯರನ್ನು ಬಳಸಿಕೊಂಡು ಯೋಜನೆಯನ್ನು ಕಾರ್ಯಗತಗೊಳಿಸಬೇಕು. ಮನೆ ಭೇಟಿಯ ವಿಚಾರವನ್ನು ಮೊದಲೇ ಮನೆಗಳಿಗೆ ತಿಳಿಸಿ ಅವರಿಗೆ ಸಮಗ್ರ ಮಾಹಿತಿ ನೀಡಬೇಕು. ಜನರ ಮನವೊಲಿಸುವ ಕೆಲಸವನ್ನು ಇಲಾಖೆಯ ಅಧಿಕಾರಿಗಳು ಮಾಡಬೇಕು. ಅಲ್ಲದೆ ಶಾಲೆ ಕಾಲೇಜ್‍ಗಳಲ್ಲಿ ಕುಷ್ಟ ರೋಗದ ನಿರ್ಮೂಲನೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಅಭಿಯಾನದ ಬಗ್ಗೆ ಪಿಪಿಟಿ ಮೂಲಕ ಮಾಹಿತಿ ನೀಡಿದ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಅವರು ಪುತ್ತೂರು ತಾಲೂಕಿನಲ್ಲಿ ಕಳೆದ ಎರಡು ವರ್ಷಗಳಿಂದ ಮತ್ತೆ ಕುಷ್ಟರೋಗ ಕಾಣಿಸಿಕೊಂಡಿದ್ದು, ಪ್ರಸ್ತುತ ವರ್ಷ ಅದರ ಪ್ರಮಾಣದಲ್ಲಿ ಏರಿಕೆ ಕಂಡಿದೆ. 2021ರಲ್ಲಿ ಮೊದಲು ಪುತ್ತೂರು ತಾಲೂಕಿನಲ್ಲಿ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. 21ರಲ್ಲಿ 2 ಪ್ರಕರಣಗಳು ಪತ್ತೆಯಾಗಿದ್ದವು. ಈ ವರ್ಷ 6 ಪ್ರಕರಣಗಳು ಪತ್ತೆಯಾಗಿವೆ. ಪತ್ತೆಯಾಗಿರುವ 6 ಕುಷ್ಟರೋಗ ಪೀಡಿತರ ಪೈಕಿ ಮೂರು ಮಂದಿ ಗುಣಮುಖರಾಗಿದ್ದಾರೆ. ಉಳಿದ 3 ಮಂದಿಗೆ ಚಿಕಿತ್ಸೆ ನಡೆಯುತ್ತಿದೆ. ಪುತ್ತೂರು ತಾಲೂಕಿನ ತಿಂಗಳಾಡಿ ಪ್ರಾಥಮಿಕ ಆರೋಗ್ಯ ವ್ಯಾಪ್ತಿಯಲ್ಲಿ ಎರಡು ಕುಷ್ಟರೋಗ ಪೀಡಿತರು ಹಾಗೂ ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಓರ್ವ ಕುಷ್ಟರೋಗ ಲಕ್ಷಣ ಹೊಂದಿರುವ ವ್ಯಕ್ತಿ ಪತ್ತೆಯಾಗಿದ್ದಾರೆ. ಈ ಮೂವರಿಗೂ ಚಿಕಿತ್ಸೆ ನೀಡಲಾಗುತ್ತಿದೆ ಎಂದರು. 

ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖಾ ಸಿಬಂಧಿಗಳು(ಮೇಲ್ ಒಲೆಂಟಿಯರ್ಸ್) ಮನೆ ಮನೆ ಭೇಟಿ ನಡೆಸಿ ರೋಗ ಲಕ್ಷಣಗಳ ಬಗ್ಗೆ ಪ್ರತಿಯೊಬ್ಬರನ್ನು ವೈಯಕ್ತಿಕವಾಗಿ ತಪಾಸಣೆ ನಡೆಸಲಿದ್ದಾರೆ. ರೋಗ ಲಕ್ಷಣಗಳು ಕಂಡು ಬಂದಲ್ಲಿ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಇದಕ್ಕೆ ಜನತೆಯ ಸಹಕಾರ ಬೇಕಾಗಿದೆ ಎಂದು ತಿಳಿಸಿದರು.

ದೇಹದ ಮೇಲಿರುವ ಕಪ್ಪು ಚುಕ್ಕೆಗಳು ಹಾಗೂ ಬಿಳಿಬಣ್ಣದ ಚುಕ್ಕೆಗಳು ಕಂಡು ಬಂದರೆ ಅಂತಹ ವ್ಯಕ್ತಿಗಳು ತಕ್ಷಣವೇ ವೈದ್ಯರನ್ನು ಕಾಣಬೇಕು. ಇದು ಕುಷ್ಟರೋಗದ ಲಕ್ಷಣವಾಗಿರುವ ಸಾಧ್ಯತೆ ಇದೆ. ಕುಷ್ಟ ರೋಗದ ಬಗ್ಗೆ ಜನತೆಯಲ್ಲಿ ಮೂಢನಂಬಿಕೆ ಇದೆ. ಇದು ದೇವರ ಶಾಪ ಎಂಬ ನಂಬಿಕೆ ಇದೆ. ಈ ರೋಗ ಯಾವುದೇ ದೇವರ ಶಾಪವಲ್ಲ ಇದೊಂದು ಗುಣವಾಗಬಲ್ಲ ರೋಗ ಎಂಬುದು ಜನರು ಅರಿತುಕೊಳ್ಳಬೇಕಾಗಿದೆ ಎಂದು ತಿಳಿಸಿದರು.  

ರಾಷ್ಟ್ರೀಯ ಕುಷ್ಟರೋಗ ನಿವಾರಣಾ ಅಭಿಯಾನದಡಿಯಲ್ಲಿ ಈ ಶಾಲಾ ಕಾಲೇಜುಗಳಲ್ಲಿ  ಮಾಹಿತಿ ಅರಿವು ಕಾರ್ಯಕ್ರಮ ನಡೆಸಲಾಗುವುದು. ದೇಹದ ಮುಂಭಾಗದಲ್ಲಿ ಕಂಡು ಬರುವ ಮಚ್ಚೆಗಳು ಜನತೆಯ ಅರಿವಿಗೆ ಬರು ತ್ತದೆ. ಆದರೆ ವ್ಯಕ್ತಿಯ ದೇಹದ ಹಿಂಭಾಗದಲ್ಲಿ ಈ ಮಚ್ಚೆಗಳಿದ್ದರೆ ಅದನ್ನು ಕಾಣಲು ಸಾಧ್ಯವಾಗುತ್ತಿಲ್ಲ. ಇದೀಗ ಆಶಾ ಕಾರ್ಯಕರ್ತೆಯರು ಹಾಗೂ ಸ್ವಯಂಸೇವಕರು ಮನೆ ಭೇಟಿಗೆ ಬಂದಾಗ ಅದನ್ನು ಗುರುತಿಸಿ ಪತ್ತೆ ಹಚ್ಚಲಿದ್ದಾರೆ. ಈ ನಿಟ್ಟಿನಲ್ಲಿ ಜನತೆಯ ಪೂರ್ಣ ಸಹಕಾರ ಬೇಕಾಗಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭಾರತಿ ಕೆ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ, ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷ ಣಾಧಿಕಾರಿ ಸುಂದರ ಗೌಡ, ಡಾ. ಭವ್ಯಾ, ಡಾ.ಶಿಶಿರ, ಡಾ,ಕೃಷ್ಣಾನಂದ ಮತ್ತಿತರರು ಉಪಸ್ಥಿತರಿದ್ದರು. 
ಹಿರಿಯ ಆರೋಗ್ಯ ನಿರೀಕ್ಷಕಿ ಪದ್ಮಾವತಿ ಸ್ವಾಗತಿಸಿ, ವಂದಿಸಿದರು.

share
Next Story
X