Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಕ್ಕಿ ನಿರಾಕರಣೆಯ ಹಿಂದೆ ಕೇಂದ್ರ ಸರಕಾರ...

ಅಕ್ಕಿ ನಿರಾಕರಣೆಯ ಹಿಂದೆ ಕೇಂದ್ರ ಸರಕಾರ ದೊಡ್ಡ ಪಿತೂರಿ: ಮಾಜಿ ಸಚಿವ ರಮಾನಾಥ ರೈ ಆರೋಪ

20 Jun 2023 9:33 PM IST
share
ಅಕ್ಕಿ ನಿರಾಕರಣೆಯ ಹಿಂದೆ ಕೇಂದ್ರ ಸರಕಾರ ದೊಡ್ಡ ಪಿತೂರಿ: ಮಾಜಿ ಸಚಿವ ರಮಾನಾಥ ರೈ ಆರೋಪ

ಮಂಗಳೂರು, ಜೂ.20: ಕೇಂದ್ರ ಸರಕಾರ ರಾಜ್ಯ ಸರಕಾರಕ್ಕೆ ಅಕ್ಕಿ ನಿರಾಕರಿಸಿರುವುದರ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ, ಬಹಳ ದೊಡ್ಡ  ಪಿತೂರಿ ಇದೆ  ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸರಕಾರದ ಪ್ರತಿಷ್ಠಿತ ‘ಅನ್ನಭಾಗ್ಯ’ ಯೋಜನೆಗೆ ಅಕ್ಕಿ ಪೂರೈಕೆ ಮಾಡಲು ನಿರಾಕರಿಸಿದ ಕೇಂದ್ರ ಬಿಜೆಪಿ ಸರಕಾರದ ದ್ವೇಷ ರಾಜಕಾರಣ ಹಾಗೂ ಬಡವರ ವಿರೋಧಿ ನೀತಿಯನ್ನು ಖಂಡಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಂಗಳವಾರ ಬೆಳಗ್ಗೆ ಮಂಗಳೂರಿನ ಮಿನಿವಿಧಾನ ಸೌಧದ ಎದುರು ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಕಾಂಗ್ರೆಸ್ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಅಕ್ಕಿ ಉಚಿತವಾಗಿ ಕೊಟ್ಟರೆ, ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದರೆ ದೇಶ ದಿವಾಳಿಯಾಗುತ್ತದೆ ಎಂದು  ಬಿಜೆಪಿ ಹೇಳುತ್ತಿದೆ. ಅಕ್ಕಿ ಯಾರಿಗೆ ಅಗತ್ಯವಿಲ್ಲವೊ ಅವರು ಅರ್ಜಿ ಹಾಕಬೇಕಿಲ್ಲ. ಬಡವರ ಅನ್ನಕ್ಕೆ ನೀವು ಕಲ್ಲು ಹಾಕಬೇಡಿ, ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಕಾರ್ಯಕ್ರಮಕ್ಕೆ ಕಲ್ಲು ಹಾಕಬೇಡಿ, ಬಡವರ  ಹೊಟ್ಟಿಗೆ ಹೊಡೆಯಬೇಡಿ. ಬಡವರ ಶಾಪ ತಟ್ಟುತ್ತದೆ ಎಂದು  ಬಿಜೆಪಿ ನಾಯಕರನ್ನು ಎಚ್ಚರಿಸಿದರು.

ಹಿಂದೆ ಕಲ್ಲಡ್ಕದಲ್ಲಿ ಶಾಲೆಗೆ ಕೊಲ್ಲೂರಿನಿಂದ ನೀಡುವ ಅಕ್ಕಿಯನ್ನು ನಿಲ್ಲಿಸಿದರು ಎಂದು ತನ್ನ ವಿರುದ್ಧ ಬಿಜೆಪಿ ನಾಯಕರು ಅಪಪ್ರಚಾರ ಮಾಡಿ ಚುನಾವಣೆಯಲ್ಲಿ ಗೆದ್ದರು. ಈಗ ಅದೇ ವಿಚಾರವನ್ನು ಹಿಡಿದುಕೊಂಡು ಮಾತನಾಡುತ್ತಿದ್ದಾರೆ. ಆದರೆ ನಾವು ಒಂದು ಹಿಡಿ ಅಕ್ಕಿಯನ್ನು ನಿಲ್ಲಿಸಲಿಲ್ಲ. ಪ್ರತಿ ತಿಂಗಳು 4 ಲಕ್ಷ ರೂ. ದೇವಸ್ಥಾನದಿಂದ ಚೆಕ್‌ನ ಮೂಲಕ ರವಾನೆಯಾಗುತ್ತಿದೆ. ಅದು ಎಲ್ಲಿಗೆ ಹೋಗುತ್ತದೆ ಎಂದು ಗೊತ್ತಿಲ್ಲ. ದೇವಸ್ಥಾನದ ದುಡ್ಡು ದುರುಪಯೋಗ ಮಾಡಲಾಗುತ್ತಿದೆ. ತಾನು ಅಕ್ಕಿ ನಿರಾಕರಿಸಿದೆ ಎಂದು ಹಿಂದೆ ಬಂಟ್ವಾಳ ದಲ್ಲಿ  ತಟ್ಟೆ ಹಿಡಿದು ತನ್ನ ವಿರುದ್ಧ ಪ್ರತಿಭಟನೆ ಮಾಡಿದ್ದರು ಎಂದು ರೈ ನೆನಪಿಸಿಕೊಂಡರು.

ರಾಜ್ಯ ಸರಕಾರದ ಬಡವರ ಪರ ಯಾವುದೇ ಯೋಜನೆ ಜಾರಿಗೊಳಿಸುವುದಿದ್ದರೆ ಅದಕ್ಕೆ ಕೇಂದ್ರ ಸಂಪೂರ್ಣ ಸರಕಾರ ನೀಡಬೇಕಿತ್ತು. ಆದರೆ ಇವತ್ತು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರಕಾರಕ್ಕೆ ಬಡವರ ಕಾಳಜಿ ಇಲ್ಲ. ಅದು ಯಾವತ್ತೂ ಬಡವರ ಪರ ಕೆಲಸ ಮಾಡಿದ ಪಕ್ಷವಲ್ಲ. ಬಿಜೆಪಿ ಬಡವರ ಪಕ್ಷವಲ್ಲ. ಅದು   ಬಂಡವಾಳ ಶಾಹಿಗಳ, ಜಮೀನುದ್ದಾರರ, ಶ್ರೀಮಂತರ,  ವ್ಯಾಪಾರಿಗಳ, ಅಂಬಾನಿ, ಅದಾನಿಯ ಪಕ್ಷವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ ಕುಮಾರ್,  ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕ ಜೆ.ಆರ್.ಲೋಬೊ , ಮಾಜಿ ಜಿ.ಪಂ ಅಧ್ಯಕ್ಷೆ ಮಮತಾ ಗಟ್ಟಿ, ಪಕ್ಷದ ಧುರೀಣರಾದ ಸುರೇಶ್ ಬಳ್ಳಾಲ್, ಬೇಬಿ ಕುಂದರ್, ಚಂದ್ರಪ್ರಕಾಶ್ ಶೆಟ್ಟಿ, ಪ್ರಥ್ವಿರಾಜ್, ಸಂತೋಷ್ ಕುಮಾರ್ ಶೆಟ್ಟಿ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಭಾಗವಹಿಸಿದ್ದರು.

share
Next Story
X