Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 7 ಭಾರತೀಯ ಕೆಮ್ಮು ಸಿರಪ್ ಗಳು ವಿಷಕಾರಿ:...

7 ಭಾರತೀಯ ಕೆಮ್ಮು ಸಿರಪ್ ಗಳು ವಿಷಕಾರಿ: ವಿಶ್ವ ಆರೋಗ್ಯ ಸಂಸ್ಥೆ

20 Jun 2023 10:40 PM IST
share
7 ಭಾರತೀಯ ಕೆಮ್ಮು ಸಿರಪ್ ಗಳು ವಿಷಕಾರಿ: ವಿಶ್ವ ಆರೋಗ್ಯ ಸಂಸ್ಥೆ

ಹೊಸದಿಲ್ಲಿ: ಭಾರತದಲ್ಲಿ ತಯಾರಾಗಿರುವ ಕನಿಷ್ಠ ಏಳು ಕೆಮ್ಮು ಸಿರಪ್ ಗಳು ವಿಷಕಾರಿಯಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಬೆಟ್ಟು ಮಾಡಿದೆ. 300ಕ್ಕೂ ಅಧಿಕ ಸಾವಿಗೆ ಕಾರಣವಾಗಿವೆ ಎಂದು ಭಾವಿಸಲಾಗಿರುವ ಔಷಧಿಗಳ ಬಗ್ಗೆ ನಡೆಸಲಾದ ತನಿಖೆಯಲ್ಲಿ ಅದು ಈ ನಿರ್ಣಯಕ್ಕೆ ಬಂದಿದೆ.

ಭಾರತ ಮತ್ತು ಇಂಡೋನೇಶ್ಯಗಳ 15 ಕಂಪೆನಿಗಳು ತಯಾರಿಸಿರುವ 20 ಔಷಧಿಗಳನ್ನು ವಿಷಕಾರಿ ಎಂಬುದಾಗಿ ಗುರುತಿಸಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ವಕ್ತಾರ ಕ್ರಿಶ್ಚಿಯನ್ ಲಿಂಡ್ಮೆಯರ್ ಹೇಳಿದ್ದಾರೆ. ಈ 20 ಔಷಧಿಗಳಲ್ಲಿ ಕೆಮ್ಮು ಸಿರಪ್ ಗಳು, ಪ್ಯಾರಾಸಿಟಮಾಲ್ ಮತ್ತು ವಿಟಮಿನ್ ಗಳು ಸೇರಿವೆ. ಇದರಲ್ಲಿ ಸಿರಪ್ ಗಳ ಸಂಖ್ಯೆ 15 ಆಗಿದೆ. ಈ ಪೈಕಿ ಏಳು ಸಿರಪ್ ಗಳನ್ನು ಹರ್ಯಾಣದ ಮೇಡನ್ ಫಾರ್ಮಾಸ್ಯೂಟಿಕಲ್ಸ್, ನೋಯ್ಡಾದ ಮರಿಯೊನ್ ಬಯೋಟೆಕ್ ಮತ್ತು ಪಂಜಾಬ್ ನ ಕ್ಯೂಪಿ ಫಾರ್ಮಾಕೆಮ್ ಕಂಪೆನಿಗಳು ತಯಾರಿಸಿವೆ.

ವಿಷಯುಕ್ತ ಕೆಮ್ಮು ಸಿರಪ್ ಗಳಿಂದ ಉದ್ಭವಿಸಿರುವ ಜಾಗತಿಕ ಬೆದರಿಕೆ ಬಗ್ಗೆ ತಾನು ತನಿಖೆ ನಡೆಸುತ್ತಿರುವುದಾಗಿ ಕಳೆದ ವಾರ ವಿಶ್ವ ಆರೋಗ್ಯ ಸಂಸ್ಥೆ ಹೇಳಿತ್ತು.

ಮೇಡನ್ ಫಾರ್ಮಾಸ್ಯೂಟಿಕಲ್ಸ್ ತಯಾರಿಸಿದ ಕೆಮ್ಮು ಸಿರಪ್ ಗಳನ್ನು ಸೇವಿಸಿ ಪಶ್ಚಿಮ ಆಫ್ರಿಕಾದ ದೇಶ ಗಾಂಬಿಯದಲ್ಲಿ 66 ಮಂದಿ ಮೃತಪಟ್ಟಿದ್ದಾರೆ ಎಂದು ಕಳೆದ ವರ್ಷದ ಅಕ್ಟೋಬರ್ ನಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿತ್ತು.

ಬಳಿಕ ಡಿಸೆಂಬರ್ ನಲ್ಲಿ, ಭಾರತದ ಮರಿಯೊನ್ ಬಯೋಟೆಕ್ ತಯಾರಿಸಿದ ಕೆಮ್ಮು ಸಿರಪ್ ಸೇವಿಸಿ ಉಝ್ಬೆಕಿಸ್ತಾನದಲ್ಲಿ 18 ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ ಎಂಬುದಾಗಿಯೂ WHO ಹೇಳಿತ್ತು.

ಎಪ್ರಿಲ್ ನಲ್ಲಿ, ಇನ್ನೊಂದು ಭಾರತೀಯ ಔಷಧ ತಯಾರಿಕಾ ಸಂಸ್ಥೆಯು ವಿಷಯುಕ್ತ ಕೆಮ್ಮು ಸಿರಪ್ ಗಳನ್ನು ಮಾರ್ಶಲ್ ಐಲ್ಯಾಂಡ್ಸ್ ಮತ್ತು ಮೈಕ್ರೋನೇಶ್ಯಕ್ಕೆ ರಫ್ತು ಮಾಡಿದೆ ಎಂದು ಅದು ಹೇಳಿತ್ತು.

share
Next Story
X