Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕದ ಸ್ವಾರ್ಥದ ಆಟದ ದಾಳವಾಗಬೇಡಿ;...

ಅಮೆರಿಕದ ಸ್ವಾರ್ಥದ ಆಟದ ದಾಳವಾಗಬೇಡಿ; ಭಾರತಕ್ಕೆ ಚೀನಾ ಆಗ್ರಹ

20 Jun 2023 11:12 PM IST
share

ಬೀಜಿಂಗ್: ಭಾರತವನ್ನು ಪ್ರಚೋದಿಸುವ ಮತ್ತು ಚೀನಾದ ಆರ್ಥಿಕ ಪ್ರಗತಿಗೆ ಕಿರುಕುಳ ನೀಡುವ ತನ್ನ ಪ್ರಯತ್ನವನ್ನು ಅಮೆರಿಕ ತೀವ್ರಗೊಳಿಸಿದೆ. ಭಾರತವು  ಅಮೆರಿಕದ ಸ್ವಾರ್ಥದ ಆಟದ ದಾಳವಾಗಬಾರದು ಎಂದು ಚೀನಾದ ಕೇಂದ್ರ ವಿದೇಶಾಂಗ ವ್ಯವಹಾರಗಳ ಆಯೋಗದ ನಿರ್ದೇಶಕ ವಾಂಗ್ ಯಿ ಬುಧವಾರ ಆಗ್ರಹಿಸಿದ್ದಾರೆ.

ಭೌಗೋಳಿಕ ರಾಜಕೀಯ ಲೆಕ್ಕಾಚಾರದೊಂದಿಗೆ ಅಮೆರಿಕವು ಭಾರತದೊಂದಿಗಿನ ಆರ್ಥಿಕ ಮತ್ತು ವ್ಯಾಪಾರ ಸಂವಹನಗಳನ್ನು ಬಲಪಡಿಸುವ ಪ್ರಯತ್ನಗಳಿಗೆ ಚಾಲನೆ ನೀಡಿದೆ. ಆದರೆ ಇದು ಖಂಡಿತಾ ವಿಫಲವಾಗಲಿದೆ ಎಂದವರು ಹೇಳಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ನೀಡಲಿರುವ ಮಹತ್ವದ ಭೇಟಿಯ ಬಗ್ಗೆ  ಚೀನಾ ಖಾರವಾಗಿ ಪ್ರತಿಕ್ರಿಯಿಸಿದೆ. ಅಮೆರಿಕದ ಭೌಗೋಳಿಕ ರಾಜಕೀಯ ಲೆಕ್ಕಾಚಾರವನ್ನು ಸುಲಭದಲ್ಲಿ ಅರ್ಥ ಮಾಡಿಕೊಳ್ಳಬಹುದು. ಅನೇಕ ಭಾರತೀಯ ಗಣ್ಯರು ಭಯಪಡುವಂತೆ, ಭಾರತದೊಂದಿಗೆ ಆರ್ಥಿಕ ಮತ್ತು ವ್ಯಾಪಾರ ಸಹಕಾರವನ್ನು ಬಲಪಡಿಸಲು  ಅಮೆರಿಕದ ಹುರುಪಿನ ಪ್ರಯತ್ನಗಳ ಮೂಲ ಉದ್ದೇಶ ಚೀನಾದ ಆರ್ಥಿಕ ಪ್ರಗತಿಯ ವೇಗವನ್ನು ತಗ್ಗಿಸುವುದಾಗಿದೆ. ಆದರೆ ಅಮೆರಿಕದ ಈ ಭೌಗೋಳಿಕ ರಾಜಕೀಯ ಲೆಕ್ಕಾಚಾರ ಖಂಡಿತಾ ಫಲನೀಡದು.

ಯಾಕೆಂದರೆ ಜಾಗತಿಕ ಪೂರೈಕೆ ಸರಪಳಿಯಲ್ಲಿ ಚೀನಾದ ಸ್ಥಾನಮಾನವನ್ನು ಭಾರತ ಅಥವಾ ಇತರ ಯಾವುದೇ ಆರ್ಥಿಕತೆ ಬದಲಿಸಲು ಸಾಧ್ಯವಿಲ್ಲ. ಅಮೆರಿಕನ್ ಕಂಪೆನಿಗಳು ಭಾರತದಲ್ಲಿ ಹೂಡಿಕೆಯನ್ನು ಹೆಚ್ಚಿಸಿದರೂ ಆ್ಯಪಲ್ನಂತಹ ಸಂಸ್ಥೆಗಳನ್ನು ಚೀನಾದ ಪೂರೈಕೆ ಸರಪಳಿಯಿಂದ ಬೇರ್ಪಡಿಸಲಾಗದು. ವಾಸ್ತವವಾಗಿ ಅಮೆರಿಕದೊಂದಿಗಿನ ಭಾರತದ ವ್ಯಾಪಾರವು ಚೀನಾದೊಂದಿಗಿನ ಅದರ ವ್ಯಾಪಾರವನ್ನು ಬದಲಿಸಲು ಸಾಧ್ಯವಿಲ್ಲ ಅಥವಾ ಜಾಗತಿಕ ಪೂರೈಕೆ ಸರಪಳಿಯಲ್ಲಿ ಚೀನಾವನ್ನು ಭಾರತ ಬದಲಿಸಲು ಸಾಧ್ಯವಿಲ್ಲ ಎಂದು ವಾಂಗ್ ಯಿ ಹೇಳಿದ್ದಾರೆ

share
Next Story
X