Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಲಾಂತರ್ಗಾಮಿ 'ಟೈಟನ್' ನಾಪತ್ತೆಯಾದ...

ಜಲಾಂತರ್ಗಾಮಿ 'ಟೈಟನ್' ನಾಪತ್ತೆಯಾದ ಸ್ಥಳದಲ್ಲಿ 'ಬಡಿಯುವ ಶಬ್ಧ' !

21 Jun 2023 6:25 PM IST
share
ಜಲಾಂತರ್ಗಾಮಿ ಟೈಟನ್ ನಾಪತ್ತೆಯಾದ ಸ್ಥಳದಲ್ಲಿ ಬಡಿಯುವ ಶಬ್ಧ !

ಲಂಡನ್:‌ ಟೈಟಾನಿಕ್‌ ಹಡಗಿನ ಅವಶೇಷಗಳನ್ನು ನೋಡಲೆಂದು ತೆರಳಿ ನಾಪತ್ತೆಯಾಗಿರುವ ಜಲಾಂತರ್ಗಾಮಿ ನೌಕೆ “ಟೈಟನ್‌” ನಲ್ಲಿರುವವರು ಜೀವಂತವಾಗಿರಬಹುದೆಂದು ಕುರುಹುಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿರುವ ತಂಡಗಳಿಗೆ ಸಿಲುಕಿದೆ.

ಈ ಜಲಾಂತರ್ಗಾಮಿ ಹಡಗಿನಲ್ಲಿ ಐದು ಜನರಿದ್ದರು. ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಹಡಗಿನಲ್ಲಿರುವವರಿಗೆ ಪ್ರತಿ 30 ನಿಮಿಷಗಳಿಗೊಮ್ಮೆ “ಬಡಿಯುವ ಸದ್ದು” ಕೇಳಿಸುತ್ತಿದೆ ಎಂದು ತಿಳಿದು ಬಂದಿದೆ.

ಈ ಆರ್ಕಾ ಗಾತ್ರದ ಜಲಾಂತರ್ಗಾಮಿ ಎಲ್ಲಿದೆ ಎಂದು ಪತ್ತೆಹಚ್ಚಲು ಅಮೆರಿಕಾದ ಕೋಸ್ಟ್‌ ಗಾರ್ಡ್‌, ಕೆನಡಾದ ಜಂಟಿ ರಕ್ಷಣಾ ಕೇಂದ್ರದ ತಂಡ ಹಾಗೂ ಫ್ರಾನ್ಸಿನಿಂದ ಹಡಗುಗಳು ಆಗಮಿಸಿವೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಎಕ್ಸ್‌ಪ್ಲೋರರ್ಸ್‌ ಕ್ಲಬ್‌ ನೀಡಿದ ಮಾಹಿತಿಯಂತೆ ನೀರಿನೊಳಗಿನಿಂದ ಬಡಿಯುವ ಸದ್ದು, ಈ ಜಲಾಂತರ್ಗಾಮಿ ಎರಡು ದಿನಗಳ ಹಿಂದೆ ನಾಪತ್ತೆಯಾದ ಸ್ಥಳದ ಸಮೀಪದಿಂದ ಕೇಳಿಸುತ್ತಿದೆ.

ಈ ಜಲಾಂತರ್ಗಾಮಿಯಲ್ಲಿದ್ದ ಐದು ಮಂದಿಯ ಬಳಿ ಇರುವ ಆಮ್ಲಜನಕ 24 ಗಂಟೆಗೂ ಕಡಿಮೆ ಅವಧಿಗೆ ಸಾಕಾಗಬಹುದು ಎಂದು ಅಮೆರಿಕಾದ ಕೋಸ್ಟ್‌ ಗಾರ್ಡ್‌ ಹೇಳಿದೆ. ಟೈಟನ್‌ ಎಂಬ ಈ ಜಲಾಂತರ್ಗಾಮಿ ತುರ್ತು ಸಂದರ್ಭದಲ್ಲಿ 96 ಗಂಟೆಗಳ ತನಕ ಸಾಕಾಗುವ ಆಮ್ಲಜನಕ ಹೊಂದಲು ವಿನ್ಯಾಸಗೊಳಿಸಲಾಗಿದೆ. ಈ ಮಿಷನ್‌ ನಡೆಸುತ್ತಿದ್ದ ಓಶಿಯನ್‌ಗೇಟ್‌ ಎಕ್ಸ್‌ಪೆಡಿಶನ್ಸ್‌ ಈ ರಕ್ಷಣಾ ಕಾರ್ಯಾಚರಣೆಯ ಭಾಗವಾಗಿದೆ ಹಾಗೂ ಅದನ್ನು ಮುನ್ನಡೆಸುತ್ತಿದೆ.

ಕಾರ್ಬನ್‌ ಫೈಬರ್‌ ಮತ್ತು ಟೈಟಾನಿಯಂನಿಂದ ನಿರ್ಮಿತ ಈ 6.7 ಮೀಟರ್‌ ಉದ್ದದ ಜಲಾಂತರ್ಗಾಮಿಯನ್ನು ಪತ್ತೆಹಚ್ಚಲು ವೈಮಾನಿಕ ಶೋಧಗಳು ವಿಫಲವಾಗಿವೆ ಎಂದು ತಿಳಿದು ಬಂದಿದೆ.

ರಕ್ಷಣಾ ತಂಡಗಳು ಪ್ರತಿಕೂಲ ಹವಾಮಾನದ ಹೊರತಾಗಿಯೂ ಉತ್ತರ ಅಟ್ಲಾಂಟಿಕ್‌ ಸಾಗರದ 20,000 ಚದರ ಕಿಮೀ ವ್ಯಾಪ್ತಿ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ.

“ಅಲ್ಲಿ ಕರ್ಗತ್ತಲು ತುಂಬಿದೆ, ಥರಗಟ್ಟುವ ಚಳಿಯಿದೆ. ಮುಖದ ಎದುರು ಹಿಡಿದ ಕೈ ಕೂಡ ಕಾಣಿಸುತ್ತಿಲ್ಲ,” ಎಂದು ಟೈಟಾನಿಕ್‌ ತಜ್ಞ ಟಿಮ್‌ ಮಾಲ್ಟಿನ್‌ ಹೇಳುತ್ತಾರೆ.

ನಾಪತ್ತೆಯಾಗಿರುವ ಜಲಾಂತರ್ಗಾಮಿಯಲ್ಲಿ ಪಾಕಿಸ್ತಾನದ ಖ್ಯಾತ ಉದ್ಯಮಿ  ಶಾಹ್‌ಝಾದಾ ದಾವೂದ್‌ ಮತ್ತವರ ಪುತ್ರನಿದ್ದರು. ಆಕ್ಷನ್‌ ಏವ್ಯೇಶನ್‌ ಅಧ್ಯಕ್ಷ ಹರ್ನಿಷ್‌ ಹಾರ್ಡಿಂಗ್‌ ಕೂಡ ಈ ಜಲಾಂತರ್ಗಾಮಿಯಲ್ಲಿದ್ದರು.

share
Next Story
X