Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಂದೇ ಒಂದು ಪೈಸೆ ಪಾವತಿಸದೆ 2 ವರ್ಷ...

ಒಂದೇ ಒಂದು ಪೈಸೆ ಪಾವತಿಸದೆ 2 ವರ್ಷ ಪಂಚತಾರಾ ಹೊಟೇಲ್‌ನಲ್ಲಿ ವಾಸ್ತವ್ಯ!: ಗ್ರಾಹಕನ ವಿರುದ್ಧ ಎಫ್‌ಐಆರ್

►ಹೊಟೇಲ್‌ಗೆ 58 ಲಕ್ಷ ರೂ. ನಷ್ಟ ► ಹೊಟೇಲ್ ಸಿಬ್ಬಂದಿ ಶಾಮೀಲಾಗಿರುವ ಶಂಕೆ

21 Jun 2023 11:19 PM IST
share
ಒಂದೇ ಒಂದು ಪೈಸೆ ಪಾವತಿಸದೆ 2 ವರ್ಷ ಪಂಚತಾರಾ ಹೊಟೇಲ್‌ನಲ್ಲಿ ವಾಸ್ತವ್ಯ!:  ಗ್ರಾಹಕನ ವಿರುದ್ಧ ಎಫ್‌ಐಆರ್
►ಹೊಟೇಲ್‌ಗೆ 58 ಲಕ್ಷ ರೂ. ನಷ್ಟ ► ಹೊಟೇಲ್ ಸಿಬ್ಬಂದಿ ಶಾಮೀಲಾಗಿರುವ ಶಂಕೆ

ಹೊಸದಿಲ್ಲಿ: ರಾಜಧಾನಿಯ ಪಂಚತಾರಾ ಹೊಟೇಲೊಂದರಲ್ಲಿ ತನ್ನ ಸಿಬ್ಬಂದಿಯೊಂದಿಗೆ ಶಾಮೀಲಾಗಿ ಗ್ರಾಹಕನೊಬ್ಬ ಒಂದೇ ಒಂದು ಪೈಸೆ ಪಾವತಿಸದೆಯೇ  ಎರಡು ವರ್ಷಗಳ ಕಾಲ ತಂಗಿದ್ದು, ಸುಮಾರು 58 ಲಕ್ಷ ರೂ.ನಷ್ಟು ವುಂಟು ಮಾಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

ಇಂದಿರಾಗಾಂಧಿ ಅಂತಾರ್ ರಾಷ್ಟ್ರೀಯ ವಿಮಾನನಿಲ್ದಾಣದ ಸಮೀಪದ ಏರೋಸಿಟಿ ಪ್ರದೇಶದಲ್ಲಿರುವ ರೊಸಿಯೆಟ್ ಹೊಟೇಲ್‌ನಲ್ಲಿ ಈ ವಂಚನೆ ನಡೆದಿದೆ.

ಅಂಕುಶ್‌ದತ್ತಾ ಎಂಬಾತ 603 ದಿನಗಳ ಕಾಲ ರೊಸಿಯೆಟ್ ಹೊಟೇಲ್‌ನಲ್ಲಿ ತಂಗಿದ್ದು, ಯಾವುದೇ ಹಣ ಪಾವತಿಸದೆಯೇ ಹೊಟೇಲ್ ರೂಂ ಖಾಲಿ ಮಾಡಿದ್ದಾನೆಂದು ಮಾಲಕ ಸಂಸ್ಥೆಯಾದ ಬರ್ಡ್ ಏರ್‌ಪೋರ್ಟ್ಸ್ ಹೊಟೇಲ್ ಪ್ರೈ.ಲಿಮಿಟೆಡ್‌ನ ಪ್ರತಿನಿಧಿ ವಿನೋದ್‌ಮಲ್ಹೋತ್ರಾ ಇತ್ತೀಚೆಗೆ ದೂರು ನೀಡಿರುವುದಾಗಿ ಐಜಿಐ ವಿಮಾನನಿಲ್ದಾಣ ಪೊಲೀಸರು ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.

ಹೊಟೇಲ್‌ನ ಫ್ರಂಟ್ ಆಫೀಸ್ ವಿಭಾಗದ ವರಿಷ್ಠ ಪ್ರೇಮ್ ಪ್ರಕಾಶ್ ಎಂಬಾತ ಹೊಟೇಲ್‌ನ ನಿಯಮಗಳನ್ನು ಉಲ್ಲಂಘಿಸಿ ದೀರ್ಘಾವಧಿಯ ಕಾಲ ದತ್ತಾ ಹೊಟೇಲ್‌ನಲ್ಲಿ ಉಳಿಯುವುದಕ್ಕೆ ಅವಕಾಶ ನೀಡಿದ್ದನೆಂದು ಎಫ್‌ಐಆರ್ ಆಪಾದಿಸಿದೆ. ಹೊಟೇಲ್ ಕೊಠಡಿಯ ದರಗಳನ್ನು ನಿಗದಿಪಡಿಸುವ ಹಾಗೂ ಗ್ರಾಹಕರಿಂದ ಪಾವತಿ ಬಾಕಿಯನ್ನು ಪತ್ತೆಹಚ್ಚುವ ಹೊಟೇಲ್‌ನ ಕಂಪ್ಯೂಟರ್ ವ್ಯವಸ್ಥೆಯೊಂದಿಗೆ ಸಂಪರ್ಕ ಸಾಧಿಸುವ ಅಧಿಕಾರವನ್ನು ಆತ ಹೊಂದಿದ್ದ.

ದತ್ತಾ ಹೊಟೇಲ್‌ನಲ್ಲಿ ಉಳಿದುಕೊಳ್ಳುವುದಕ್ಕಾಗಿ ಆತನಿಂದ ಪ್ರಕಾಶ್ ಒಂದಿಷ್ಟು ಹಣ ಪಡೆದಿರಬಹುದೆಂದು ಹೊಟೇಲ್‌ನ ಆಡಳಿತವರ್ಗ ಶಂಕಿಸಿದೆ. ಗ್ರಾಹಕರ ವಾಸ್ತವ್ಯ ಹಾಗೂ ಅವರ ಹಣಪಾವತಿಯ ಲೆಕ್ಕಪತ್ರಗಳನ್ನು ನಿರ್ವಹಿಸುವ ಹೊಟೇಲ್‌ನ ಸಾಫ್ಟ್‌ವೇರ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ದತ್ತಾ ಹೊಟೇಲ್‌ನಲ್ಲಿ ತಂಗುವುದಕ್ಕೆ ಪ್ರಕಾಶ್‌ನೆರವಾಗಿರಬಹುದೆಂದು ಶಂಕಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಗ್ರಾಹಕ ಅಂಕುಶ್ ದತ್ತಾ ಹಾಗೂ ಪ್ರೇಮ್ ಪ್ರಕಾಶ್ ಸೇರಿದಂತೆ ಇತರ ಅಜ್ಞಾತ ಹೊಟೇಲ್‌ಸಿಬ್ಬಂದಿಯ ವಿರುದ್ಧ ಕ್ರಿಮಿನಲ್‌ಸಂಚಿನ ಆರೋಪ ಹೊರಿಸಲಾಗಿದೆಯೆಂದು ಪೊಲೀಸರು ಹೇಳಿದ್ದಾರೆ.

share
Next Story
X