Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತಪ್ಪು ಮಾಡಿ ಕೇಂದ್ರದ ಮೇಲೆ ಗೂಬೆ...

ತಪ್ಪು ಮಾಡಿ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿರುವ ಕಾಂಗ್ರೆಸ್: ಎಚ್.ಡಿ.ಕುಮಾರಸ್ವಾಮಿ

''ಕೇಂದ್ರ ಸರಕಾರ ನಿಮಗೆ ಏಕೆ ಅಕ್ಕಿ ಕೊಡಬೇಕು?''

21 Jun 2023 11:42 PM IST
share
ತಪ್ಪು ಮಾಡಿ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿರುವ ಕಾಂಗ್ರೆಸ್: ಎಚ್.ಡಿ.ಕುಮಾರಸ್ವಾಮಿ
''ಕೇಂದ್ರ ಸರಕಾರ ನಿಮಗೆ ಏಕೆ ಅಕ್ಕಿ ಕೊಡಬೇಕು?''

ಬೆಂಗಳೂರು, ಜೂ. 21: ‘ಪಡಿತರ ಚೀಟಿದಾರರಿಗೆ ಅಕ್ಕಿ ನೀಡುವ ವಿಚಾರದ ಬಗ್ಗೆ ದಿನಕ್ಕೊಂದು ನೆಪ ಹೇಳುತ್ತಿರುವ ಕಾಂಗ್ರೆಸ್ ಸರಕಾರ ತಾನು ಎಸಗಿದ ಸ್ವಯಂಕೃತ ತಪ್ಪಿಗೆ ಕೇಂದ್ರ ಸರಕಾರ ಮೇಲೆ ಗೂಬೆ ಕೂರಿಸುತ್ತಾ ಜನರನ್ನು ವಂಚಿಸುತ್ತಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುಧವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಚುನಾವಣಾ ತಂತ್ರಗಾರರ ಮಾತು ಕೇಳಿಕೊಂಡು ಗ್ಯಾರಂಟಿ ಘೋಷಣೆ ಮಾಡಿದಾಗ, ಯೋಜನೆ ಜಾರಿಗೆ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಅಕ್ಕಿ ಗ್ಯಾರಂಟಿ ಬಗ್ಗೆ ಇವರೇನು ಕೇಂದ್ರ ಸರಕಾರಕ್ಕೆ ಅರ್ಜಿ ಹಾಕಿದ್ದರೇ? ಪೊಳ್ಳು ಭರವಸೆ ಕೊಟ್ಟು ಗ್ಯಾರಂಟಿ ಎಂದು ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದು ಎಷ್ಟು ಸರಿ. ಸರಿ ತಪ್ಪು ಎನ್ನುವುದನ್ನು ನಾವು ಮಾಡಬೇಕಲ್ಲವೇ? ಎಂದು ಪ್ರಶ್ನಿಸಿದರು.

‘ಕೇಂದ್ರ ಸರಕಾರ ನಿಮಗೆ ಏಕೆ ಅಕ್ಕಿ ಕೊಡಬೇಕು? ಅರ್ಜಿ ಹಾಕಿದ್ದರೆ ನೀವು? ಯಾವನೋ ಬಂದು ಚುನಾವಣಾ ತಂತ್ರಗಾರ ಸಲಹೆ ಕೊಟ್ಟ ಎಂದು ನೀವು ಉಚಿತ ಎಂದಿದ್ದೀರಿ. ಸಚಿವರ ಹೆಂಡತಿಗೂ ಫ್ರೀ, ನನ್ನ ಹೆಂಡತಿಗೂ ಫ್ರೀ ಎಂದು ಹೇಳಿ ಎಲ್ಲರೂ ಅರ್ಜಿ ಹಾಕಿಕೊಳ್ಳಬಹುದು ಎಂದಿದ್ದೀರೀ. ಈಗ ನೋಡಿದರೆ ಬೇರೆ ವರಸೆ ಶುರು ಮಾಡಿಕೊಂಡಿದ್ದೀರಿ ಎಂದು ಟೀಕಿಸಿದರು.

ಎರಡು ರಾಷ್ಟ್ರೀಯ ಪಕ್ಷಗಳ ಇಂದಿನ ನಡವಳಿಕೆ ನೋಡಿದಾಗ ಬೇಸರವಾಗುತ್ತಿದೆ. ರಾಜ್ಯದ ಜನತೆ ಅವರನ್ನು ನಂಬಿ ಮತ ಕೊಟ್ಟಿದ್ದಾರೆ. ಜನತೆ ಎರಡು ಪಕ್ಷಗಳ ನಾಟಕ ನೋಡಬೇಕಾಗಿದೆ. ಇವರು ಯಾವ ರೀತಿ ಟೋಪಿ ಹಾಕ್ತಾರೆ ಅಂತ ನೋಡುವ ಅನಿವಾರ್ಯತೆ ಜನರೇ ಸೃಷ್ಟಿ ಮಾಡಿಕೊಂಡಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.

ಜಾರಕಿಹೊಳಿ ಹೇಳಿಕೆ ಸರಿಯಲ್ಲ: ‘ಕೇಂದ್ರ ಸರಕಾರ ಸರ್ವರ್ ಹ್ಯಾಕ್ ಮಾಡಿದ್ದ ಪರಿಣಾಮ ‘ಗೃಹಲಕ್ಷ್ಮಿ’ ಜಾರಿ ಮಾಡಲಾಗುತ್ತಿಲ್ಲ ಎಂದಿರುವ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ಬಾಯಿ ಚಪಲಕ್ಕೆ ಮಾತನಾಡ್ತಿದ್ದಾರೆ ಅವರು. ಯಾಕೆ ಹ್ಯಾಕ್ ಮಾಡುತ್ತಾರೆ, ನಿಮ್ಮ ಸರ್ವರ್ ಬಲಪಡಿಸಿಕೊಳ್ಳೋದು ನಿಮ್ಮ ಜವಾಬ್ದಾರಿ ಎಂದು ಸಲಹೆ ನೀಡಿದರು.

ಮೊಟ್ಟೆ, ಬಾಳೆಹಣ್ಣು ಕಡಿತ ಸಲ್ಲ: ಶಾಲಾ ಮಕ್ಕಳಿಗೆ ಒಂದು ಮೊಟ್ಟೆ, ಒಂದು ಬಾಳೆಹಣ್ಣು ಎಂದು ಹೇಳಿರುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಅದು ಇರಲ್ವೇನೊ? ಇವರಿಗೆ ಮಕ್ಕಳ ಆಹಾರದಲ್ಲಿ ಹಣದ ಹಪಾಹಪಿ ಶುರುವಾಗಿದೆ ಎಂದು ಅವರು, ಸಿಎಂ ಅಧಿಕಾರ ಹಂಚಿಕೆ ಅವರಿಗೆ ಸೇರಿದ ವಿಚಾರ. 5 ವರ್ಷ ಅವರೇ ಇರುತ್ತಾರೋ, ಇನ್ಯಾರಾದರೂ ಬರುತ್ತಾರೋ ನನಗೆ ಗೊತ್ತಿಲ್ಲ’ ಎಂದು ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು.

share
Next Story
X