Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮುಲ್ ಬಾಲಕಿಯನ್ನು 'ಸೃಷ್ಟಿಸಿದ್ದ'...

ಅಮುಲ್ ಬಾಲಕಿಯನ್ನು 'ಸೃಷ್ಟಿಸಿದ್ದ' ಖ್ಯಾತ ಕಲಾವಿದ ಸಿಲ್ವೆಸ್ಟರ್ ಡಕುನ್ಹಾ ನಿಧನ

22 Jun 2023 1:56 PM IST
share
ಅಮುಲ್ ಬಾಲಕಿಯನ್ನು ಸೃಷ್ಟಿಸಿದ್ದ ಖ್ಯಾತ ಕಲಾವಿದ ಸಿಲ್ವೆಸ್ಟರ್ ಡಕುನ್ಹಾ ನಿಧನ

ಮುಂಬೈ: ಅಮುಲ್‌ನ ವಿಶಿಷ್ಟ ಬಾಲಕಿಯ ಅಭಿಯಾನದ ಹಿಂದೆ ಇದ್ದ ಖ್ಯಾತ ಕಲಾವಿದ ಸಿಲ್ವೆಸ್ಟರ್ ಡಕುನ್ಹಾ (Sylvester daCunha) ಮಂಗಳವಾರ ಮುಂಬೈನಲ್ಲಿ ನಿಧನರಾಗಿದ್ದಾರೆ. ಡಕುನ್ಹಾರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಅಮುಲ್‌ನ ಮಾಜಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಭಾರತೀಯ ಹೈನ್ಯೋದ್ಯಮ ಒಕ್ಕೂಟದ ಹಾಲಿ ಅಧ್ಯಕ್ಷ ಆರ್.ಎಸ್.ಸೋಧಿ, ಅಮುಲ್ ಬಾಲಕಿ ಅಳುತ್ತಿರುವ ಚಿತ್ರವನ್ನು ಹಂಚಿಕೊಂಡು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಡಕುನ್ಹಾರ ನಿಧನದ ಸುದ್ದಿಯನ್ನು ದೃಢಪಡಿಸಿರುವ ಅಮುಲ್ ಬ್ರ್ಯಾಂಡ್‌ನ ಮಾಲಕತ್ವ ಹೊಂದಿರುವ ಗುಜರಾತ್ ಸಹಕಾರ ಹಾಲು ಮಾರುಕಟ್ಟೆ ಮಹಾ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಜಯೆನ್ ಮೆಹ್ತಾ, "1960ರಿಂದ ಅಮುಲ್‌ನೊಂದಿಗೆ ಸಹಭಾಗಿತ್ವ ಹೊಂದಿದ್ದ ಡಕುನ್ಹಾ ಕಮ್ಯುನಿಕೇಶನ್ಸ್‌ನ ಅಧ್ಯಕ್ಷ ಹಾಗೂ ಭಾರತೀಯ ಜಾಹೀರಾತು ಉದ್ಯಮದ ದಂತಕತೆಯಾದ ಶ್ರೀ ಸಿಲ್ವೆಸ್ಟರ್ ಡಕುನ್ಹಾ ಅವರು ಕಳೆದ ರಾತ್ರಿ ಮುಂಬೈನಲ್ಲಿ ನಿಧನರಾಗಿದ್ದಾರೆ ಎಂದು ತಿಳಿಸಲು ವಿಷಾದವಾಗುತ್ತಿದೆ. ಅವರ ದುಃಖಕರ ಸಾವಿನ ಸಂತಾಪದಲ್ಲಿ ಅಮುಲ್ ಕುಟುಂಬವೂ ಭಾಗಿಯಾಗುತ್ತದೆ" ಎಂದು ಟ್ವೀಟ್ ಮಾಡಿದ್ದಾರೆ.

ಅಮುಲ್‌ನ ನಾಯಕರಾಗಿದ್ದ ದಂತಕತೆ ವಿ.ಕುರಿಯನ್ ಅವರು ಡಕುನ್ಹಾರ ಜಾಣ್ಮೆಯನ್ನು ಹೇಗೆ ದೃಢೀಕರಿಸಿದ್ದರು ಎಂಬ ಬಗ್ಗೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಹೆಮ್ಮೆಯಿಂದ ಸ್ಮರಿಸಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದ ಡೆರೆಕ್ ಒ'ಬ್ರಿಯನ್ ಕೂಡಾ, ಸಿಲ್ವೆಸ್ಟರ್ ಡಕುನ್ಹಾರನ್ನು ಜಾಹೀರಾತು ಉದ್ಯಮದ ದಂತಕತೆ ಎಂದು ಬಣ್ಣಿಸಿದ್ದು, ಜಾಹೀರಾತು ಉದ್ಯಮದ ಮೇಲೆ ಅವರು ಬೀರಿದ ಪ್ರಭಾವದ ಕುರಿತು ಟ್ವೀಟ್ ಮಾಡಿದ್ದಾರೆ.

ಕಲಾವಿದ ಸಿಲ್ವೆಸ್ಟರ್ ಡಕುನ್ಹಾ ಅವರು ತಮ್ಮ ಪತ್ನಿ ನಿಶಾರೊಂದಿಗೆ 1966ರಲ್ಲಿ ಅಮುಲ್‌ಗಾಗಿ ಪ್ರಖ್ಯಾತ 'Utterly Butterly' ಅಭಿಯಾನಕ್ಕೆ ಜನ್ಮ ನೀಡಿದರು. ಆನಂತರ ಅದು ವಿಶ್ವಾದ್ಯಂತ ಮುದ್ದಾದ 'ಅಮುಲ್ ಬಾಲಕಿ'ಯಾಗಿ ಪರಿಚಯವಾಯಿತು. ಈ ಅಭಿಯಾನವು ತನ್ನ ವಿನೋದಮಯ ಹಾಗೂ ಸಕಾಲಿಕ ಸಂದೇಶಗಳೊಂದಿಗೆ ಅತಿ ಶೀಘ್ರದಲ್ಲೇ ಜನಪ್ರಿಯವಾಗಿ ಈ ಕಾಲಘಟ್ಟದವರೆಗೂ ವೀಕ್ಷಕರನ್ನು ಆಕರ್ಷಿಸುವ ಅಭಿಯಾನವಾಗಿಯೇ ಮುಂದುವರಿದಿದೆ.

Very sorry to inform about the sad demise of Shri Sylvester daCunha, Chairman of daCunha Communications last night at Mumbai
A doyen of Indian advertising industry who was associated with Amul since 1960s. The Amul family joins in mourning this sad loss @RahuldaCunha

ॐ Shanti pic.twitter.com/cuac1K6FSo

— Jayen Mehta (@Jayen_Mehta) June 21, 2023
share
Next Story
X